ಬೇಡಿಕೆ ಈಡೇರಿಕೆಗೆ ಅನ್ನದಾತರ ಒತ್ತಾಯ

ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ ತಾಲೂಕು ಬರಪೀಡಿತ ಘೋಷಣೆಗೆ ಆಗ್ರಹ

Team Udayavani, Jun 20, 2019, 10:17 AM IST

20-June-3

ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಕೃಷಿಕ ಸಮಾಜ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ವಿಜಯಪುರ: ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಭಾರತೀಯ ಕೃಷಿಕ ಸಮಾಜದ ಜಂಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷ ಬಿ.ಎಲ್. ಪಾಟೀಲ ಕುದರಿಸಾಲೋಡಗಿ ಮಾತನಾಡಿ, ವಿಜಯಪುರ ಜಿಲ್ಲೆಯ ಅನೇಕ ತಾಲೂಕುಗಳನ್ನು ಬರಗಾಲ ಪಟ್ಟಿಯಿಂದ ಹೊರಗಿಟ್ಟು ಇನ್ನುಳಿದ ತಾಲೂಕುಗಳನ್ನು ಸರ್ಕಾರ ಬರಗಾಲ ಪೀಡಿತ ಎಂದು ಘೋಷಣೆ ಮಾಡಿದೆ. ಬಸವನಬಾಗೇವಾಡಿ ತಾಲೂಕಿನ ಕೃಷಿ ನಿರ್ದೇಶಕರು ಹಾಗೂ ತಹಶೀಲ್ದಾರ್‌ರು ಬರಗಾಲದ ಕುರಿತು ಸಮೀಕ್ಷೆ ಮಾಡಿ ಬರ ಪರಿಸ್ಥಿತಿ ಮತ್ತು ಬೆಳೆ ಹಾನಿಯ ಒಟ್ಟು ಮೊತ್ತದ ವರದಿಯನ್ನು ಸರ್ಕಾರಕ್ಕೆ ಕಳುಹಿಸಿದ್ದಾರೆ. ಆದರೆ ಈ ಸಮೀಕ್ಷೆಯನ್ನು ಬದಿಗೊತ್ತಿ ಈ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇಲ್ಲ ಎಂದು ತನ್ನಷ್ಟಕ್ಕೆ ತಾನೇ ಮನಗಂಡು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ ಎಂದರು.

ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, 2018-19ನೇ ಸಾಲಿನಲ್ಲಿ ಮುಂಗಾರು ಬೆಳೆಯ ಒಟ್ಟು ಅಂದಾಜು 31,20,8600 ರೂ.ಗಳವರೆಗೆ ಬೆಳೆ ಹಾನಿಯಾಗಿತ್ತು, ಅದರಂತೆ ಹಿಂಗಾರು ಹಂಗಾಮಿಯಲ್ಲಿಯೂ 24,49,63,200 ರೂ.ಗಳಷ್ಟು ಬೆಳೆ ಹಾನಿಯಾಗಿತ್ತು ಎಂದು ಅಧಿಕಾರಿಗಳು ಸಮೀಕ್ಷಾ ವರದಿ ಕಳುಹಿಸಿದ್ದರು. ಆದರೆ ತಹಶೀಲ್ದಾರ್‌ ಹಾಗೂ ಕೃಷಿ ಅಧಿಕಾರಿಗಳ ವರದಿಯನ್ನು ಗಣನೆಗೆ ತೆಗೆದುಕೊಳ್ಳದೆ ಮೂರು ತಾಲೂಕುಗಳನ್ನು ಕೈ ಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಬರಗಾಲ ಆವರಿಸಿದ್ದು ನಿಜವಿದ್ದರು ಕೂಡ ಇದನ್ನು ಮರೆಮಾಚಿ ಕರ್ನಾಟಕ ರಾಜ್ಯ ನೈಸರ್ಗಿಕ ಬರಗಾಲ ನಿರ್ವಹಣಾ ಕೋಶದ ಅಧಿಕಾರಿಗಳು ಸಕಾಲಕ್ಕೆ ಮಳೆಯಾಗಿದೆ. ಬೆಳೆಗಳು ಕೂಡ ಉತ್ತಮವಾಗಿದೆ ಎಂದು ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ಮೂರು ತಾಲೂಕುಗಳನ್ನು ಕೈ ಬಿಟ್ಟಿರುವುದು ದೊಡ್ಡ ಅನ್ಯಾಯ ಎಂದು ದೂರಿದರು.

ನಾಲ್ಕು ಗೋಡೆಗಳ ಮಧ್ಯೆ ಕುಳಿತುಕೊಂಡು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡುವುದು ಸಮಂಜಸವಲ್ಲ. ಬೇಕಿದ್ದರೆ ಬರಗಾಲ ನಿರ್ವಹಣಾ ಕೋಶದ ಮುಖ್ಯಸ್ಥರು ಖುದ್ದಾಗಿ ಬಸವನಬಾಗೇವಾಡಿಗೆ ಆಗಮಿಸಿ ಮಾಹಿತಿ ಪಡೆದುಕೊಂಡರೆ ಸತ್ಯಾಂಶ ಏನೆಂಬುವುದು ತಿಳಿಯುತ್ತದೆ. ಅದನ್ನು ಬಿಟ್ಟು ಮನಸ್ಸಿಗೆ ಬಂದಂತೆ ವರದಿ ಸಲ್ಲಿಸಿ ತಾಲೂಕಿನ ರೈತರಿಗೆ ದ್ರೋಹ ಎಸಗಿದ್ದಾರೆ ಎಂದರು.

ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಬಸವನಬಾಗೇವಾಡಿ, ನಿಡಗುಂದಿ ಹಾಗೂ ಕೋಲ್ಹಾರ ಇವುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿ ಶೀಘ್ರದಲ್ಲಿ ಸೂಕ್ತ ಪರಿಹಾರ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಹಾಗೂ ಜಿಲ್ಲಾ ಕೃಷಿಕ ಸಮಾಜದ ನೇತೃತ್ವದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿವಿಧ ರೈತ ಸಂಘಟನೆ ಮುಖಂಡರಾದ ಸದಾಶಿವ ಬರಟಗಿ, ಸಿದ್ರಾಮ ಅಂಗಡಗೇರಿ, ಹೊನಕೇರಪ್ಪ ತೆಲಗಿ, ಜಯಶ್ರೀ ಜಂಗಮಶೆಟ್ಟಿ, ಬಸವರಾಜ ಜಂಗಮಶೆಟ್ಟಿ, ಗುರು ಕೋಟ್ಯಾಳ, ಚಂದ್ರಾಮ ತೆಗ್ಗಿ, ಗೌರವಾಧ್ಯಕ್ಷ ಈರಣ್ಣ ದೇವರಗುಡಿ, ಶಾಂತಗೌಡ ಬಿರಾದಾರ, ಹನುಮಂತರಾಯ ಗುಣಕಿ, ಎಂ.ಎಸ್‌. ಲಚ್ಯಾಣ, ಬಿ.ಜಿ. ಪಾಟೀಲ ಅಗಸಬಾಳ, ಬಾಬುಲಾಲ ಕೌಜಗೇರ, ಸಂಗಪ್ಪ ಮುಂಡಗನೂರ, ಕೃಷ್ಣಪ್ಪ ಬಮ್ಮರಡ್ಡಿ ಇದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.