ಅನ್ನದಾತರಿಗೆ ನೆರವಾದ ನೇರಳೆ ಬೆಳೆ

•ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಹಣ್ಣಿದು •ಬಹುತೇಕ ತೋಟದ ಬದುವಿನಲ್ಲೇ ಇದನ್ನು ಬೆಳೆಯುತ್ತಾರೆ

Team Udayavani, Jun 20, 2019, 10:32 AM IST

gadaga-tdy-1..

ಗಜೇಂದ್ರಗಡ: ಶ್ರೀ ಕಾಲಕಾಲೇಶ್ವರ ವೃತ್ತದ ಬಳಿ ನೇರಳೆ ಹಣ್ಣು ಮಾರಾಟ ಮಾಡುತ್ತಿರುವುದು.

ಗಜೇಂದ್ರಗಡ: ಮಧುಮೇಹ, ಬಾಯಿ ದುರ್ಗಂಧ, ತೊದಲುವಿಕೆ, ಪಚನ ಕ್ರಿಯೆ ವೃದ್ಧಿ, ಗಂಟಲು ನೋವು ಸೇರಿದಂತೆ ಇನ್ನಿತರೆ ಕಾಯಿಲೆಗಳಿಗೆ ರಾಮಬಾಣವಾದ ನೇರಳೆ ಹಣ್ಣಿನ ಮಾರಾಟ ಜೋರಾಗಿ ನಡೆದಿದ್ದು, ನೇರಳೆ ರೈತರಿಗೆ ನೆರವಾಗಿದೆ.

ನೇರಳೆಗೆ ಯಾವುದೇ ರೋಗಬಾಧೆ ತಗುಲದು. ಜತೆಗೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ನೀಡುವ ಹಣ್ಣು ಇದಾಗಿದೆ. ಹೀಗಾಗಿ ಕೊಳವೆಬಾವಿ ಆಶ್ರಿತ, ನೀರಾವರಿ ಅವಲಂಬಿತ ಬಹುತೇಕ ರೈತರು ತಮ್ಮ ತೋಟದ ಬದುವಿಗೆ ನೇರಳೆ ಬೆಳೆಯುತ್ತಾರೆ. ತಾಲೂಕಿನ ಗಜೇಂದ್ರಗಡ ಪಟ್ಟಣ ಹಾಗೂ ಸುತ್ತಲಿನ ಜವಳು (ಮಸಾರಿ)ಭೂಮಿಯಲ್ಲಿ ಬೆಳೆಯುವ ನೇರಳೆ ಹಲವಾರು ರೈತರ ಕೈ ಹಿಡಿದಿದೆ.

ಸದ್ಯ ನೇರಳೆಗೆ ಪಟ್ಟಣದ ಮಾರುಕಟ್ಟೆಯಲ್ಲಿ ಕೆಜಿ ಒಂದಕ್ಕೆ 140 ರಿಂದ 160ವರೆಗೆ ಇದ್ದು, ಹಣ್ಣಿನ ಗಾತ್ರದ ಆಧಾರದ ಮೇಲೆ ದರವಿದೆ. ಕೆಲವು ಕಡೆ ಸೇರುಗಳ ಮೂಲಕವೂ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತದೆ. ಆದರೆ ಗ್ರಾಮೀಣ ಪ್ರದೇಶಗಳ ಹಳ್ಳಿಗಳಲ್ಲಿ ಬುಟ್ಟೆಯಲ್ಲಿಟ್ಟು ಮಾರುವವರು ಸೇರು, ಅಚ್ಚೇರು, ಚಟಾಕುಗಳ ಅಳತೆಯಲ್ಲಿ ಕೆಲವೊಮ್ಮೆ ಹಣದ ಬದಲಿಗೆ ಜೋಳ, ಗೋಧಿ, ಅಕ್ಕಿಗೂ ಮಾರಾಟ ಮಾಡುತ್ತಾರೆ.

ಹಲವಾರು ಮಹಿಳೆಯರು ನೇರಳೆ ಹಣ್ಣು ಬುಟ್ಟಿಯಲ್ಲಿ ತುಂಬಿಕೊಂಡು ಬಂದು ಪಟ್ಟಣದ ಜೋಡು ರಸ್ತೆ, ಮುಖ್ಯ ಮಾರುಕಟ್ಟೆ ಫುಟ್ಪಾತ್‌ ಮೇಲೆ ಕುಳಿತು ಉರಿ ಬಿಸಿಲನ್ನೂ ಲೆಕ್ಕಿಸದೇ ಮಾರಾಟ ಮಾಡಿ ಬಂದ ಆದಾಯದಿಂದ ಕುಟುಂಬ ನಿರ್ವಹಣೆ ಮಾಡುತ್ತಾರೆ. ಗಜೇಂದ್ರಗಡ ಪಟ್ಟಣದ ವಿವಿಧೆಡೆ ಮಾರುಕಟ್ಟೆಯಲ್ಲಿ ಈಗ ನೇರಳೆ ಹಣ್ಣಿಗೆ ಎಲ್ಲಿಲ್ಲದ ಬೇಡಿಕೆ ಇದೆ ಎನ್ನುತ್ತಾರೆ ನೇರಳೆ ಹಣ್ಣು ಮಾರುವ ದೇವವ್ವ ಗೌಡರ.

ನಿರ್ವಹಣೆಯ ವಿಧಾನ: ಒಂದು ಅಡಿ ಚೌಕಾಕಾರದ ತಗ್ಗು ಅಗೆದು, ಎಂಟು ಅಡಿ ಅಂತರದಲ್ಲಿ ಎಕರೆಗೆ 100 ಸಸಿ ನೆಡಬಹುದು. ಕೊಟ್ಟಿಗೆ, ಎರೆಹುಳು ಗೊಬ್ಬರ ಹಾಕಿ, ನೀರುಣಿಸಿ ಸಸಿ ಬೆಳೆಸಬೇಕು. ನಾಲ್ಕು ವರ್ಷಗಳ ಕಾಲ ಸಸಿಯನ್ನು ಪೋಷಿಸಿದರೆ ಹಣ್ಣು ಕೊಡಲು ಆರಂಭಿಸುತ್ತದೆ. ಪ್ರತಿ ವರ್ಷ ಗಿಡದ ಸುತ್ತ 500 ಗ್ರಾಂ ಯೂರಿಯಾ, 300 ಗ್ರಾಂ ಪೊಟ್ಯಾಸಿಯಂ ಗೊಬ್ಬರ ಹಾಕಿ ನೀರುಣಿಸಬೇಕು. ಇದಕ್ಕೆ ವಾರ್ಷಿಕ 1.20 ಲಕ್ಷ ಖರ್ಚಾಗುತ್ತದೆ. ಖರ್ಚಿನ ದುಪ್ಪಟ್ಟು ಹಣ ಸಂಪಾದನೆಯಾಗುತ್ತದೆ ಎನ್ನುವುದು ನೇರಳೆ ಹಣ್ಣು ಬೆಳೆಗಾರರ ಲೆಕ್ಕಾಚಾರ. ಸಾಮಾನ್ಯವಾಗಿ ನೇರಳೆ ಜನವರಿ, ಫೆಬ್ರುವರಿ ತಿಂಗಳಲ್ಲಿ ಹೂ ಬಿಟ್ಟು ಮಾರ್ಚ್‌ ತಿಂಗಳಲ್ಲಿ ಕಾಯಿ ಕಟ್ಟಿ ಏಪ್ರಿಲ್-ಮೇ ತಿಂಗಳಲ್ಲಿ ಹಣ್ಣು ಹೇರಳವಾಗಿ ಸುರಿಯುತ್ತದೆ. ಪ್ರತಿ ವರ್ಷ ಜುಲೈ ತಿಂಗಳಲ್ಲಿ ಮರಕ್ಕೆ 20 ಕೆಜಿ ಉಪ್ಪು ಕಟ್ಟಿದರೆ ಹಣ್ಣುಗಳನ್ನು ಹೆಚ್ಚಿಗೆ ನೀಡುತ್ತದೆ. ಕಾಯಿ ಹಣ್ಣಾಗುವ ಕಾಲಕ್ಕೆ ನೀಲಿ-ಕೇಸರಿ ಮಿಶ್ರಿತ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಒಂದು ಗಿಡ ನಾಲ್ಕರಿಂದ ಐದು ವರ್ಷಕ್ಕೆ ಹಣ್ಣು ಬಿಡಲಾರಂಭಿಸಿ ಸುದೀರ್ಘ‌ ಅರವತ್ತು ವರ್ಷಗಳವರೆಗೆ ಗುಣಮಟ್ಟದ ಹಣ್ಣು ಕೊಡುತ್ತದೆ.

•ಡಿ.ಜಿ ಮೋಮಿನ್‌

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.