ರಾಜೀನಾಮೆ ಅಂಗೀಕರಿಸಿ ಇಲ್ಲವಾದರೆ ಶಾಸಕ ಸ್ಥಾನಕ್ಕೂ ರಿಸೈನ್: ವಿಶ್ವನಾಥ್
ಸಿದ್ದರಾಮಯ್ಯ ವಿರುದ್ಧ ಮತ್ತೆ ಕಿಡಿ ಕಾರಿದ ಹಳ್ಳಿ ಹಕ್ಕಿ
Team Udayavani, Jun 20, 2019, 11:51 AM IST
ಬೆಂಗಳೂರು: ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಕೂಡಲೇ ಅಂಗೀಕರಿಸಬೇಕು, ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಚಿಂತನೆ ಮಾಡಬೇಕಾಗುತ್ತದೆ ಎಂದು ಹುಣಸೂರು ಶಾಸಕ ಎಚ್.ವಿಶ್ವನಾಥ್ ಮಾಧ್ಯಮಗಳ ಮೂಲಕ ಜೆಡಿಎಸ್ ನಾಯಕರಿಗೆ ಗುರುವಾರ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವನಾಥ್, ನನ್ನ ಅನುಭವವನ್ನು ಕುಮಾರಸ್ವಾಮಿ ಅವರಾಗಲಿ,ಸಿದ್ದರಾಮಯ್ಯ ಆಗಲಿ ಉಪಯೋಗಿಸಿಕೊಂಡಿಲ್ಲ ಎಂದರು.
ನನ್ನ ರಾಜೀನಾಮೆ ಅಂಗೀಕರಿಸಿ. ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಚಿಂತನೆ ಮಾಡಬೇಕಾಗುತ್ತದೆ ಎಂದು ಮಾಧ್ಯಮ ಮೂಲಕವೇ ಮನವಿ ಮಾಡಿದರು.
ಸದ್ಯದ ಪರಿಸ್ಥಿತಿಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಸಿಎಂ ಕುಮಾರಸ್ವಾಮಿ ಗೆ ರಾಜ್ಯಾಧ್ಯಕ್ಷ ಸ್ಥಾನ ವಹಿಸುವುದು ಉತ್ತಮ ಎಂದು ಸಲಹೆ ನೀಡಿದರು.
ಒಬ್ಬನಾಯಕನನ್ನು ರಾಜಕೀಯ ವಾಗಿ ಕೊಲ್ಲುವುದು ಒಳ್ಳೆಯದಲ್ಲ.ಸಿಎಂ ಜತೆ ಕೆಲಸ ಮಾಡಬೇಕೆಂಬ ಆಸೆ ಇತ್ತು,ಆದ್ರೆ ಸನ್ನಿವೇಶ ಆದಕ್ಕೆ ಆಸ್ಪದ ಕೊಟ್ಟಿಲ್ಲ ಎಂದು ಅಳಲು ತೋಡಿಕೊಂಡರು.
ಅಹಿಂದ ನಾಯಕ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ಮುಖಂಡ ರೋಷನ್ ಬೇಗ್ ಅವರನ್ನು ಅಮಾನತು ಮಾಡಿಸಿದ್ದಾರೆ. ಕಾಂಗ್ರೆಸ್ನಲ್ಲಿದ್ದಿದ್ದರೆ ನನ್ನ ಕಥೆಯೂ ಇದಕ್ಕಿಂತ ಹೊರತಾಗ್ತಿರಲಿಲ್ಲ ಎಂದರು.
ಸಮನ್ವಯ ಸಮಿತಿಯಲ್ಲಿ ಸೇರ್ಪಡೆ ಮಾಡದೆ ಇದ್ದುದಕ್ಕಾಗಿ ಬೇಸರ ಹೊರ ಹಾಕಿದ ಅವರು ,ಸಮನ್ವಯದ ಅರ್ಥಾನೆ ಗೊತ್ತಿಲ್ಲದ ನೀವ್ಯಾವ ಸೀಮೆ ಅಧ್ಯಕ್ಷಾರೀ ಎಂದು ಸಿದ್ದರಾಮಯ್ಯ ವಿರುದ್ಧ ಮತ್ತೆ ಕಿಡಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ