52 ಜನರ ಅನಧಿಕೃತ ನೇಮಕಕ್ಕೆ ಖಂಡನೆ
ಕವಿವಿ ಆಡಳಿತ ಕಚೇರಿ ಎದುರು ಕೆಲ ಅಭ್ಯರ್ಥಿಗಳ ಹೋರಾಟ
Team Udayavani, Jun 20, 2019, 3:48 PM IST
ಧಾರವಾಡ: ನಗರದ ಕವಿವಿ ಆಡಳಿತ ಕಚೇರಿ ಎದುರು ಕೆಲ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.
ಧಾರವಾಡ: ಕವಿವಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ (ಡಿ) ದರ್ಜೆಯ 52 ಜನರನ್ನು ಅನಧಿಕೃತವಾಗಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ ಕೆಲ ಅಭ್ಯರ್ಥಿಗಳು ಕವಿವಿ ಆಡಳಿತ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಕವಿವಿಯಲ್ಲಿನ ಹೊರಗುತ್ತಿಗೆಯ 52 ಡಿ ದರ್ಜೆಯ ಅಭ್ಯರ್ಥಿಗಳ ನೇಮಕಾತಿಯಲ್ಲಿ ಕವಿವಿಯಲ್ಲಿ ಕೆಲಸ ಮಾಡುವ ನೌಕರರ ಸಂಬಂಧಿಗಳು, ಪ್ರಾಧ್ಯಾಪಕರ ಮಕ್ಕಳು ಹಾಗೂ ಅವರ ಸೊಸೆಯಂದಿರನ್ನು ಮಾತ್ರ ಪರಿಗಣಿಸಲಾಗಿದೆ. ಅವರು ಅರ್ಜಿ ಕೂಡ ಹಾಕಿಲ್ಲ. ಅವರ ಕಡೆಗೆ ಹಣ ಪಡೆದು ಆಯ್ಕೆ ಮಾಡಲಾಗಿದೆ. ಈ ಕುರಿತು ಹಲವು ದಾಖಲೆಗಳು ನಮ್ಮ ಬಳಿ ಇವೆ ಎಂದು ನೊಂದ ಅಭ್ಯರ್ಥಿ ರಾಜು ಗಿಡದಹುಬ್ಬಳ್ಳಿ ದೂರಿದ್ದಾರೆ.
ಟೆಂಡರ್ ಎಜೆನ್ಸಿ ಪಾವಟೆ ಎಂಬುವವರನ್ನು ಈ ಬಗ್ಗೆ ಪ್ರಶ್ನಿಸಿದರೆ ಅವರು, ಕುಲಪತಿಗಳ ಲಿಸ್ಟ್ ಪ್ರಕಾರ ನಾನು ನೇಮಕ ಮಾಡಿರುವೆ ಎಂದು ಹೇಳುತ್ತಾರೆ. ಈ ಮೂಲಕ ಅರ್ಜಿ ಸಲ್ಲಿಸಿದ ನಮ್ಮಂತಹ ಬಡ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ. ಈ ಕುರಿತು ಸಮಗ್ರ ತನಿಖೆಯಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜೊತೆಗೆ ನೂತನವಾಗಿ ಟೆಂಡರ್ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.
ನನ್ನ ಪತಿ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದಲ್ಲಿ 20 ವರ್ಷಗಳ ಕಾಲ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಿದ್ದಾರೆ. ಅವರ ನಿಧನವಾಗಿ ಒಂದು ವರ್ಷ ಕಳೆದಿದೆ. ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಅಲ್ಲದೇ ಪತಿಯ ನಿಧನದ ನಂತರ ಅವರ ಪಿಎಫ್ ಹಣ ಕೂಡ ನೀಡುತ್ತಿಲ್ಲ. ಕವಿವಿಯಿಂದ ಯಾರು ಹಣ ಕೇಳಿಲ್ಲ. ಆದರೂ ಹಣ ನೀಡಿದವರನ್ನು ಆಯ್ಕೆ ಮಾಡಲಾಗಿದೆ. ಪತಿಯ 20 ವರ್ಷದ ಸೇವೆ ಪರಿಗಣಿಸಿ ಜೀವನ ನಿರ್ವಹಣೆಗಾಗಿ ಮಗನ ವಿದ್ಯಾಭ್ಯಾಸಕ್ಕಾಗಿ ವಿವಿಯಲ್ಲಿ ಕೆಲಸ ನೀಡಬೇಕು ಎಂದು ನೊಂದ ಅಭ್ಯರ್ಥಿ ಸರೋಜಾ ಆಗ್ರಹಿಸಿದರು. ಈ ಕುರಿತಂತೆ ಕುಲಪತಿ, ಕುಲಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಪಣಿರಾಜು, ಸಂತೋಷ ಬೈಲವಾಡ, ನವೀನ ಜಾಕೋಜಿ, ಗಣೇಶ ಬಾವಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.