ಧೈರ್ಯ ತಂದ ಕವಲುದಾರಿ

ಪುನೀತ್‌ ಹೊಸ ದಾರಿ

Team Udayavani, Jun 21, 2019, 5:00 AM IST

35

“ನನ್ನ ಬ್ಯಾನರ್‌ನ ಮೊದಲ ನಿರ್ಮಾಣದ ಚಿತ್ರ ಕಮರ್ಷಿಯಲ್‌ ಆಗಿ ಗೆದ್ದಿದ್ದು ನಿಜಕ್ಕೂ ಮತ್ತಷ್ಟು ಧೈರ್ಯ ಕೊಟ್ಟಿದೆ…’
– ಹೀಗೆ ಹೇಳಿ ತಮ್ಮ ಎಂದಿನ ಶೈಲಿಯ ನಗು ಹೊರಹಾಕಿದರು ಪುನೀತ್‌ರಾಜಕುಮಾರ್‌. ಪುನೀತ್‌ ಈಗ ಬಿಝಿ. ಒಂದು ಕಡೆ ನಟನೆ, ಇನ್ನೊಂದು ಕಡೆ ನಿರ್ಮಾಣ ಮತ್ತೂಂದು ಕಡೆ ಜನಪ್ರಿಯಗೊಂಡಿರುವ “ಕನ್ನಡದ ಕೋಟ್ಯಾಧಿಪತಿ’ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿ. ಹೀಗೆ ಒಂದಲ್ಲ ಒಂದು ವಿಭಾಗದಲ್ಲಿ ಸದಾ ಉತ್ಸಾಹದ ಮೊಗದಲ್ಲೇ ತಮ್ಮನ್ನು ತೊಡಗಿಸಿಕೊಂಡಿರುವ ಪುನೀತ್‌ರಾಜಕುಮಾರ್‌ಗೆ “ಕವಲುದಾರಿ’ ಕೈ ಹಿಡಿದ ಖುಷಿ. ಅಷ್ಟೇ ಅಲ್ಲ, ಆ ಚಿತ್ರದ ಮೂಲಕ ಇನ್ನಷ್ಟು ಧೈರ್ಯವೂ ಬಂದಿದೆ. ಅವರ “ಕವಲುದಾರಿ’ ಗೆಲುವು, ಮುಂದಿನ ಚಿತ್ರಗಳ ನಿರ್ಮಾಣ, ಕಿರುತೆರೆ ಜರ್ನಿ ಇತ್ಯಾದಿ ಕುರಿತು ಸ್ವತಃ ಪುನೀತ್‌ರಾಜಕುಮಾರ್‌ ಒಂದಷ್ಟು ಮಾತನಾಡಿದ್ದಾರೆ.

“ಕವಲುದಾರಿ’ ಮೂಲಕ ನಿರ್ಮಾಣದಲ್ಲಿ ಹೊಸ “ದಾರಿ’ ಕಂಡುಕೊಂಡಿರುವ ಪುನೀತ್‌, ಆ ಬಗ್ಗೆ ಏನೇಳ್ತಾರೆ ಗೊತ್ತಾ? “ಈ ವರ್ಷ ನನ್ನ ಪಿಆರ್‌ಕೆ ಬ್ಯಾನರ್‌ನಲ್ಲಿ ನಿರ್ಮಾಣಗೊಂಡ ಮೊದಲ ಚಿತ್ರ “ಕವಲುದಾರಿ’ ಗೆಲುವು ಕೊಟ್ಟಿದೆ. ಅದು ನನ್ನ ಖುಷಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮೊದಲ ಪ್ರೊಡಕ್ಷನ್‌ ಮೂಲಕ ಮಾಡಿದ ಹೊಸ ಪ್ರಯತ್ನಕ್ಕೆ ಗೆಲುವು ಸಿಕ್ಕಿದೆ. ಇದು ಇಡೀ ಟೀಮ್‌ಗೆ ಸಿಗಬೇಕಾದ ಗೆಲುವು. ನಿರ್ದೇಶಕ ಹೇಮಂತ್‌, ಹೀರೋ ರಿಷಿ, ಅನಂತ್‌ನಾಗ್‌ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಥ್ಯಾಂಕ್ಸ್‌ ಹೇಳ್ತೀನಿ. ಇದೆಲ್ಲವೂ ಅವರ ಬದ್ಧತೆಯಿಂದ ಆಗಿದ್ದು, ಹೊಸ ಪ್ರಯತ್ನಕ್ಕೆ ಸರಿಯಾದ ಬೆಂಬಲವೂ ಸಿಕ್ಕಿದೆ. ಒಳ್ಳೆಯ ತಂಡದಿಂದ ಒಳ್ಳೆಯ ಸಿನಿಮಾ ಕೊಡಲು ಸಾಧ್ಯ ಎಂಬುದು ಸಾಬೀತಾಗಿದೆ’ ಎನ್ನುತ್ತಾರೆ ಅವರು.

ಹಾಗಾದರೆ, ಪಿಆರ್‌ಕೆ ಬ್ಯಾನರ್‌ನಲ್ಲಿ ಪ್ರಯೋಗಾತ್ಮಕ ಸಿನಿಮಾಗಳದ್ದೇ ಕಾರುಬಾರು ಇರುತ್ತಾ? ಇದಕ್ಕೆ ಉತ್ತರಿಸುವ ಪುನೀತ್‌ರಾಜಕುಮಾರ್‌, “ನನಗೆ ಪ್ರಯೋಗಾತ್ಮಕ ಸಿನಿಮಾ ಮಾಡಲೇಬೇಕು ಅಂತೇನೂ ಇಲ್ಲ. ಆದರೆ, ಹೊಸ ತರಹದ ಸಿನಿಮಾಗಳನ್ನು ನಿರ್ಮಾಣ ಮಾಡಬೇಕು. ಆ ಮೂಲಕ ಹೊಸ ಹೊಸ ಪ್ರತಿಭೆಗಳನ್ನು ಪರಿಚಯಿಸಬೇಕು ಎಂಬ ಆಸೆಯಂತೂ ಇದೆ. ಆ ನಿಟ್ಟಿನಲ್ಲಿ ಈಗಾಗಲೇ ಒಂದಷ್ಟು ಕೆಲಸ ನಡೆಯುತ್ತಿದೆ. ಹೊಸದಾಗಿ ಏನಾದರೂ ಮಾಡಿದರೆ ಅದಕ್ಕೊಂದು ಅರ್ಥ ಇರುತ್ತೆ. ಹಾಗಾಗಿ ಬರುವ ದಿನಗಳಲ್ಲಿ ಹೊಸ ರೀತಿಯ ಚಿತ್ರ ಕಟ್ಟಿಕೊಡುವ ಪ್ರಯತ್ನ ಮಾಡುತ್ತೇನೆ ‘ ಎಂಬುದು ಅವರ ಮಾತು.

ಈಗ ಪಿಆರ್‌ಕೆ ಬ್ಯಾನರ್‌ನಲ್ಲಿ ಸಿನಿಮಾಗಳು ಸಾಲುಗಟ್ಟಿರಬೇಕಲ್ಲವೇ? ಈ ಪ್ರಶ್ನೆಗೆ ಸಣ್ಣದ್ದೊಂದು ನಗು ಹೊರಹಾಕಿದ ಪುನೀತ್‌, ಈ ವರ್ಷ “ಕವಲುದಾರಿ’ ಹೊರಬಂದಿದೆ. ಅದರ ನಂತರ “ಲಾ’ ಎಂಬ ಮತ್ತೂಂದು ಹೊಸ ತರಹದ ಚಿತ್ರ ನಿರ್ಮಾಣವಾಗುತ್ತಿದೆ. “ಮಾಯಾಬಜಾರ್‌’ ಕೂಡ ರೆಡಿಯಾಗುತ್ತಿದೆ. ಪ್ರೊಡಕ್ಷನ್‌ ನಂ. 4 ಹೆಸರಿನ ಚಿತ್ರವೂ ಇದೆ. ಅದಕ್ಕಿನ್ನೂ ಹೆಸರಿಟ್ಟಿಲ್ಲ. ಈ ವರ್ಷ ಮೂರು ಚಿತ್ರಗಳು ಬಿಡುಗಡೆಯಾದರೂ ಅಚ್ಚರಿ ಇಲ್ಲ. ನಮ್ಮ ಬ್ಯಾನರ್‌ ಮೂಲಕ ಹೊಸಬಗೆಯ ಚಿತ್ರಗಳನ್ನು ಕೊಡಬೇಕೆಂಬುದಷ್ಟೇ ನಮ್ಮ ಉದ್ದೇಶ’ ಎನ್ನುತ್ತಾರೆ ಅವರು.

“ಕವಲುದಾರಿ’ ಚಿತ್ರದ ಬಗ್ಗೆ ಹೆಮ್ಮೆ ಇದೆ ಎನ್ನುವ ಪುನೀತ್‌, “ಅದೀಗ ಭಾಷೆ ಮೀರಿಯೂ ಹೊರಟಿದೆ. ತಮಿಳು ಭಾಷೆಗೆ ರೀಮೇಕ್‌ ಆಗುತ್ತಿದೆ. ಅದೊಂದು ಒಳ್ಳೆಯ ಬೆಳವಣಿಗೆ. ಅತ್ತ ಮಲಯಾಳಂ, ಹಿಂದಿ ಭಾಷೆಯಲ್ಲೂ ಮಾತುಕತೆ ನಡೆಯುತ್ತಿದೆ. ಚಿತ್ರ ಅಮೆಜಾನ್‌, ನೆಟ್‌ಫ್ಲಿಕ್ಸ್‌ ಮೂಲಕ ಎಲ್ಲೆಡೆ ಸಲ್ಲುವಂತಾಗಿದೆ. ಒಟ್ಟಾರೆ “ಕವಲುದಾರಿ’ ಬೇರೆಯದೇ ರೀತಿಯಲ್ಲಿ ಬ್ರೇಕ್‌ ಕೊಟ್ಟಿದೆ’ ಎಂದು ಖುಷಿಗೊಳ್ಳುತ್ತಾರೆ ಪುನೀತ್‌.

“ರಾಜಕುಮಾರ’ ಮೂಲಕ ಯಶಸ್ಸು ಕಂಡ ತಂಡದ ಜೊತೆ ಪುನೀತ್‌ “ಯುವರತ್ನ’ ಚಿತ್ರ ಮಾಡುತ್ತಿದ್ದಾರೆ. ಅದಾಗಲೇ ಆ ಚಿತ್ರ ಶೇ.40 ರಷ್ಟು ಚಿತ್ರೀಕರಣವಾಗಿದೆ. ಆ ಬಗ್ಗೆ ಹೇಳಿಕೊಳ್ಳುವ ಅವರು, “ಈಗಾಗಲೇ ಮೈಸೂರಿ­ನಲ್ಲಿ ಒಂದು ಶೆಡ್ನೂಲ್‌ ಪೂರ್ಣಗೊಂಡಿದೆ. ಮುಂದೆ ಧಾರವಾಡದಲ್ಲಿ ಚಿತ್ರೀಕರಣ ನಡೆಯಲಿದೆ. ಒಳ್ಳೆಯ ಅನುಭವ ಆಗಿದೆ. ಕಾಲೇಜ್‌ನ ಸುಮಾರು 200 ಜನ ಸ್ಟುಡೆಂಟ್ಸ್‌ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಯಾರಿಗೆಲ್ಲಾ ನಟನೆಯ ಆಸಕ್ತಿ ಇದೆಯೋ ಅವರೆಲ್ಲರೂ “ಯುವರತ್ನ’ದಲ್ಲಿ ಇರಲಿದ್ದಾರೆ. ಈ ವರ್ಷವೇ ಬಿಡುಗಡೆಯಾಗಲಿದೆಯಾ ಎಂಬ ಬಗ್ಗೆ ಐಡಿಯಾ ಇಲ್ಲ. ಕಾದು ನೋಡಬೇಕು ಎನ್ನುತ್ತಾರೆ.

ಪುನೀತ್‌ ನಿರ್ಮಾಪಕ­ರಾಗಿ ಆಯ್ಕೆ ಮಾಡುವ ಚಿತ್ರಗಳ ಮಾನದಂಡ ಹೇಗೆ? ಅದಕ್ಕೂ ಉತ್ತರಿಸುವ ಅವರು, “ನೋಡಿ ಒಂದು ಟೀಮ್‌ ಬಂದು ಒಳ್ಳೆಯ ಕಾನ್ಸೆಪ್ಟ್ ಹೇಳಿ, ಅವರದೇ ಆದ ಶೈಲಿಯಲ್ಲಿ ಅದನ್ನು ತಕ್ಕಮಟ್ಟಿಗೆ ಮೇಕಿಂಗ್‌ ಮಾಡಿಕೊಂಡು ಬಂದು ತೋರಿಸಿದರೆ, ಅಲ್ಲೇನೋ ವಿಶೇಷತೆ ಇದೆ ಎನಿಸಿದರೆ ಖಂಡಿತ ಮಾಡ್ತೀನಿ. ಈಗ ಯಾರೂ ಬಂದು ಕಥೆ ಹೇಳುವ ಅಗತ್ಯವಿಲ್ಲ. ಈಗಂತೂ ಡಿಜಿಟಲ್‌ ಯುಗ ಮೊಬೈಲ್‌ನಲ್ಲೇ ಅವರು ಅಂದುಕೊಂಡ ಹೊಸ ಕಾನ್ಸೆಪ್ಟ್ ಶೂಟ್‌ ಮಾಡಿ, ಥ್ರಿಲ್‌ ಎನಿಸುವಂತೆ ತುಣುಕು ದೃಶ್ಯಗಳನ್ನು ತೋರಿಸಿದರೆ ಸಾಕು. ಎಲ್ಲೋ ಒಂದು ಕಡೆ ಮಾಡಿದ ಪ್ರಯತ್ನಕ್ಕೆ ಖಂಡಿತ ಸಹಕಾರ ಸಿಕ್ಕೇ ಸಿಗುತ್ತದೆ. ನನ್ನ ಬ್ಯಾನರ್‌ನಲ್ಲಿ ಬೇರೆ ಸಿನಿಮಾ ನಿರ್ಮಾಣದ ಜೊತೆಗೆ ನನ್ನ ನಟನೆಯಲ್ಲೂ ಆದಷ್ಟು ಬೇಗ ಚಿತ್ರವೊಂದನ್ನು ಮಾಡುತ್ತೇನೆ’ ಎನ್ನುವ ಅವರಿಗೆ ನಟನೆ, ನಿರ್ಮಾಣದ ಜೊತೆಗೆ ಯಾಕೆ ವಿತರಣೆಯ ಕಡೆಯೂ ಗಮನಹರಿಸಬಾರದು ಎಂಬ ಪ್ರಶ್ನೆಗೆ, “ನೋಡೋಣ, ದೇವರ ದಯೆ ಇದ್ದರೆ, ಅದೂ ಮಾಡಬಹುದು’ ಎನ್ನುತ್ತಲೇ ಮಾತು ಮುಗಿಸುತ್ತಾರೆ ಪುನೀತ್‌.

ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.