ಕಿಸಾನ್ ಅರ್ಜಿ ಸಲ್ಲಿಕೆಗೆ ಮುಗಿಬಿದ್ದ ರೈತರು
•ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತುಗಳಲ್ಲಿ 2 ಸಾವಿರ ರೂ. ಪಾವತಿ
Team Udayavani, Jun 21, 2019, 8:28 AM IST
ಗಜೇಂದ್ರಗಡ: ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಯಲ್ಲಿ ರೈತರು ಪಿಎಂ ಕಿಸಾನ್ ಸಮ್ಮಾನ ಯೋಜನೆಗೆ ಅರ್ಜಿ ಸಲ್ಲಿಸಿದರು.
ಗಜೇಂದ್ರಗಡ: ತಾಲೂಕಿನಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿ (ಪಿಎಂ ಕಿಸಾನ್) ಯೋಜನೆಗೆ ಅರ್ಜಿ ಸಲ್ಲಿಸಲು ಪಟ್ಟಣದ ಗ್ರಾಮ ಲೆಕ್ಕಾಧಿಕಾರಿ ಕಚೇರಿಯಲ್ಲಿ ಗುರುವಾರ ರೈತರು ಮುಗಿ ಬಿದ್ದಿದ್ದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿ ಭೂ ಒಡೆತನ ಹೊಂದಿರುವ ಎಲ್ಲ ವರ್ಗದ ಅರ್ಹ ರೈತ ಕುಟುಂಬಕ್ಕೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತುಗಳಲ್ಲಿ 2 ಸಾವಿರ ರೂ.ಗಳಂತೆ ಒಟ್ಟು ವಾರ್ಷಿಕ 6 ಸಾವಿರ ಹಣ ನೀಡಲಾಗುವುದು.
ಯೋಜನೆಯ ಸದುಪಯೋಗ ಪಡೆಯಲು ಗೌಡಗೇರಿ, ಉಣಚಗೇರಿ, ದಿಂಡೂರ, ರಾಜೂರ, ಪುರ್ತಗೇರಿ, ಚಿಲಝರಿ, ಭೈರಾಪುರ, ಕಾಲಕಾಲೇಶ್ವರ ಸೇರಿ ಹಲವಾರು ಗ್ರಾಮಗಳ ರೈತರು ಪಟ್ಟಣದ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಹಠಾತ್ ಬಂದ ಪರಿಣಾಮ ಕಚೇರಿ ಜನ ಜಂಗುಳಿಯಿಂದ ತುಂಬಿತು.
ಇದೇ ವೇಳೆ ಸ್ಥಳಕ್ಕೆ ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆಗೆ ಗಜೇಂದ್ರಗಡ ತಾಲೂಕಿನಲ್ಲಿ ಒಟ್ಟು 19,616 ಖಾತೆದಾರರಿದ್ದು, ಈಗಾಗಲೇ 6 ಸಾವಿರ ರೈತರಿಂದ ಅರ್ಜಿಗಳು ಬಂದಿವೆ. ಇದರಲ್ಲಿ 2,577 ಅರ್ಜಿಗಳನ್ನು ಆನ್ಲೈನ್ನಲ್ಲಿ ನೋಂದಣಿ ಮಾಡಲಾಗಿದೆ. ಜೂ. 25ಕ್ಕೆ ರೈತರ ನೊಂದಣಿ ಕಾರ್ಯ ಪೋರ್ಣಗೊಳಿಸಬೇಕೆಂದು ಮೇಲಧಿಕಾರಿಗಳಿಂದೆ ನಿರ್ದೆಶನ ಬಂದಿದೆ ಎಂದು ತಿಳಿಸಿದರು.
ಗ್ರಾಪಂ, ಪಪಂ ವ್ಯಾಪ್ತಿಯ ಸಿಬ್ಬಂದಿಗಳು ಪ್ರತಿ ಮನೆಗಳಿಗೆ ಭೇಟಿ ನೀಡಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಡಂಗೂರ, ದೇವಸ್ಥಾನದಲ್ಲಿ ಧ್ವನಿ ವರ್ಧಕದ ಮೂಲಕವು ರೈತರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದರು.
ನೋಂದಣಿ ಮಾಡಲು 9 ಜನ ಡಾಟಾ ಎಂಟ್ರಿ ಆಪರೇಟಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ ಅರ್ಜಿ ಸಲ್ಲಿಸಬೇಕಾದ ರೈತರು ತಕ್ಷಣದಿಂದಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳ ಬಳಿ ನೀಡಲು ಮುಂದಾಗುವ ಮೂಲಕ ಸರ್ಕಾರದ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದರು. ಕಂದಾಯ ನಿರೀಕ್ಷಕ ವೀರಣ್ಣ ಅಡಗತ್ತಿ, ಗ್ರಾಮ ಲೆಕ್ಕಾಧಿಕಾರಿ ಶಬ್ಬೀರ ನಿಶಾನದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ