ಶಾಂತಿ,ಸಮೃದ್ಧಿ ಮತ್ತು ಸಾಮರಸ್ಯ ಉತ್ತೇಜಿಸುವುದು ಯೋಗದ ಗುರಿ
ರಾಂಚಿಯಲ್ಲಿ ವಿಶ್ವಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ
Team Udayavani, Jun 21, 2019, 10:56 AM IST
ರಾಂಚಿ : ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯವನ್ನು ಉತ್ತೇಜಿಸುವುದು ಯೋಗದ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಂಚಿಯಲ್ಲಿ ಶುಕ್ರವಾರ ನಡೆದ ವಿಶ್ವಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಾನು ಯೋಗವನ್ನು ಒಪ್ಪಿಕೊಂಡ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ಎಲ್ಲರೂ ಯೋಗವನ್ನು ಅಪ್ಪಿಕೊಳ್ಳಬೇಕಾಗಿದೆ. ಯೋಗಾ ಯಾವಾಗಲೂ ಶಾಂತಿ ಮತ್ತು ಸಹಬಾಳ್ವೆಗೆ ಸಹಕಾರಿಯಾಗಲಿದೆ ಎಂದರು.
ಯೋಗಜಾತಿ, ಧರ್ಮದ ಎಲ್ಲೆಯನ್ನು ಮೀರಿದ್ದಾಗಿದೆ. ಯೋಗದ ಮೂಲಕ ಮದ್ಯ ಮುಕ್ತವಾಗಲೂ, ಡಯಾಬಿಟಿಸ್ಗೂ ಪರಿಹಾರ ಪಡೆದುಕೊಳ್ಳಬಹುದು ಎಂದರು.
ಇಂದಿನ ಯುವ ಜನತೆಯಲ್ಲಿ ಹೃದಯ ಸಂಬಂಧಿ ರೋಗಗಳು ಹೆಚ್ಚಾಗುತ್ತಿವೆ. ಯೋಗದ ಮೂಲಕ ಇವುಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಯೋಗವನ್ನು ರೋಗ ತಡೆಗಟ್ಟುವ ಶಕ್ತಯನ್ನಾಗಿಸಬೇಕು ಎಂದರು.
30 ಸಾವಿರ ಮಂದಿ ರಾಂಚಿಯ ಪ್ರಭಾತ್ ತಾರಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯೋಗಾಸನಗಳನ್ನು ಮಾಡಿದರು.
ಯೋಗ ದಿನಾಚರಣೆ ಆಚರಿಸುತ್ತಿರುವ ವಿಶ್ವದ ಎಲ್ಲರಿಗೂ ಈ ವೇಳೆ ಧನ್ಯವಾದ ಸಲ್ಲಿಸಿದರು. ಕೆಲ ಹೊತ್ತು ಇಂಗ್ಲೀಷ್ನಲ್ಲಿ ಭಾಷಣ ಮಾಡಿ ಧನ್ಯವಾದ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
MUST WATCH
ಹೊಸ ಸೇರ್ಪಡೆ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ