ನಿರಂತರ ಕುಡಿವ ನೀರಿನ ಯೋಜನೆಗೆ ಗ್ರಹಣ

ಕಾಮಗಾರಿ ಆರಂಭವಾಗುತ್ತಿದ್ದಂತೆ ಪ್ರಗತಿಪರ ಸಂಘಟನೆಗಳ ತೀವ್ರ ವಿರೋಧ: ಕಾಮಗಾರಿ ಸ್ಥಗಿತ

Team Udayavani, Jun 21, 2019, 12:25 PM IST

cn-tdy-1..

ಕೊಳ್ಳೇಗಾಲ ಖಾಸಗಿ ಸ್ಥಳವೊಂದರಲ್ಲಿ ಶೇಖರಣೆಯಾಗಿರುವ ಕಾಮಗಾರಿಯ ಸಾಮಗ್ರಿಗಳು.

ಕೊಳ್ಳೇಗಾಲ: ಸರ್ಕಾರ ಪಟ್ಟಣದ 31 ವಾರ್ಡುಗಳಿಗೆ 24/7 ನಿರಂತರ ಕುಡಿಯುವ ನೀರು ಯೋಜನೆಯ ಕಾಮಗಾರಿಗೆ ಹಸಿರು ನಿಶಾನೆ ತೋರಿದ್ದು, ಕಾಮಗಾರಿ ಆರಂಭವಾಗುತ್ತಿದ್ದಂತೆ ಪ್ರಗತಿಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಕೆಲಸಕ್ಕೆ ಗ್ರಹಣ ಹಿಡಿದಿದೆ.

ಸರ್ಕಾರ ನಿರಂತರ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಸುಮಾರು 64 ಕೋಟಿ ರೂ. ಅಂದಾಜಿನಲ್ಲಿ ಕುಡಿಯುವ ನೀರು ಪೂರೈಕೆ ಮಾಡಲು ಈಗಾಗಲೇ ಸಂಬಂಧಿಸಿದ ಗುತ್ತಿಗೆದಾರರು ಬೇಕಾದ ಎಲ್ಲಾ ಸಾಮಗ್ರಿಗಳನ್ನು ಖಾಸಗಿ ವ್ಯಕ್ತಿಗಳ ಜಮೀನೊಂದರಲ್ಲಿ ದಾಸ್ತಾನು ಮಾಡುವಲ್ಲಿ ಮುಂದಾಗಿದ್ದಾರೆ.

ತುರ್ತುಸಭೆ: ಪಟ್ಟಣದ 31 ವಾರ್ಡುಗಳಿಗೆ 24/7 ಕುಡಿಯುವ ನೀರು ಪೂರೈಕೆ ಯೋಜನೆಯ ಬಗ್ಗೆ ಶಾಸಕ ಎನ್‌.ಮಹೇಶ್‌ ಕಳೆದ ಜೂ.3ರಂದು ಪಟ್ಟಣದ ಸಿಡಿಎಸ್‌ ಭವನದಲ್ಲಿ ಪ್ರಗತಿಪರ ಸಂಘಟನೆಯ ಮುಖಂಡರ ತುರ್ತು ಸಭೆಯೊಂದನ್ನು ಕರೆದಿದ್ದ ವೇಳೆ ಸಭೆಗೆ ಆಗಮಿಸಿದ್ದ ಎಲ್ಲಾ ಪ್ರಗತಿಪರ ಸಂಘಟನೆಯ ಮುಖಂಡರು 24/7 ಕುಡಿಯುವ ನೀರು ಪೂರೈಕೆಗೆ ಮೀಟರ್‌ ಅಳವಡಿಸುವ ಯೋಜನೆಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.

ಕರಪತ್ರ: ತುರ್ತು ಸಭೆಯ ಬಳಿಕ ಸಂಬಂಧಿಸಿದ ಕಾಮಗಾರಿಯ ಗುತ್ತಿಗೆದಾರರು ಸಾಮಗ್ರಿಗಳನ್ನು ಮತ್ತಷ್ಟು ಸಂಗ್ರಹ ಮಾಡಿ ಟ್ಯಾಂಕ್‌ ನಿರ್ಮಾಣಕ್ಕೆ ಪಟ್ಟಣದ ವಿವಿಧ ಬಡಾವಣೆ ಗಳಲ್ಲಿ ಸ್ಥಳ ನಿಗದಿ ಮಾಡಲು ಹೊರಟಿದ್ದರು. ಇದನ್ನು ಕಂಡ ಸಂಘಟಕರ ಕೆಂಗಣಿಗೆ ಗುರಿಯಾಗಿ ಸಂಘಟಕರು ಕೂಡಲೇ ಕಾಮಗಾರಿ ಸ್ಥಗಿತಗೊಳಿಸಲು ಬೃಹತ್‌ ಆಂದೋಲನವನ್ನು ಜೂ.25ರಂದು ನಡೆಸಲು ಉದ್ದೇಶಿಸಿ ಕರಪತ್ರವನ್ನು ಹಂಚುತ್ತಿದ್ದಂತೆ ಶಾಸಕರು ಮತ್ತು ನಗರಸಭೆಯ ಅಧಿಕಾರಿಗಳು ಗಲಿಬಿಲಿಗೊಂಡರು.

ಪ್ರತಿಭಟನೆ: ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕರಾಗಿದ್ದ ಎಸ್‌.ಜಯಣ್ಣ ಅವರ ಅವಧಿಯಲ್ಲಿ ಈ ಯೋಜನೆ ಜಾರಿಗೆ ಬಂದಿತ್ತು. ಈ ಯೋಜನೆಯನ್ನು ತಡೆಹಿಡಿಯುವ ಸಲುವಾಗಿ ನೀರಿನ ಹಕ್ಕಿಗಾಗಿ ಆಂದೋಲನ ನೇತೃತ್ವದಲ್ಲಿ ಈಗಿನ ಸ್ಥಳೀಯ ಶಾಸಕ ಎನ್‌.ಮಹೇಶ್‌ ಪ್ರತಿಭಟನೆಯಲ್ಲಿ ಭಾಗವಹಿಸಿ ವಿರೋಧ ವ್ಯಕ್ತಪಡಿಸಿದ್ದರು.

ವಿಧಾನಸಭಾ ಚುನಾವಣೆಯ ಬಳಿಕ ಹೋರಾಟಗಾರರಾಗಿದ್ದ ಎನ್‌.ಮಹೇಶ್‌ ಅವರು ಶಾಸಕರಾಗಿ ಆಯ್ಕೆಗೊಂಡ ಬಳಿಕ ಕುಡಿಯುವ ನೀರು ಯೋಜನೆಗೆ ಮರು ಜೀವ ಬಂರುತ್ತಿದ್ದಂತೆ ಸಂಘಟಕರ ಕೆಂಗೆಣ್ಣಿಗೆ ಗುರಿಯಾದರು. ನಂತರ ಸಂಘಟಕರು ಈ ಯೋಜನೆಯನ್ನು ಸ್ಥಗಿತಗೊಳಿಸುವವರೆಗೂ ಹೋರಾಟ ಮಾಡುವ ದೃಢವಾದ ನಿಲುವಿಗೆ ಬಂದು ಮತ್ತಷ್ಟು ಸಂಘಟನೆಯನ್ನು ಬಲಗೊಳಿಸಿದ್ದರು.

ಸಾರ್ವಜನಿಕರಿಗೆ ತಿಳಿವಳಿಕೆ: ಸಂಘಟಕರು ತೀವ್ರ ಹೋರಾಟಕ್ಕೆ ಮುಂದಾಗುತ್ತಿದ್ದಂತೆ ಎಚ್ಚೆತ್ತ ಶಾಸಕರು ಈ ಯೋಜನೆಯನ್ನು ಹಿಂದಿನ ಶಾಸಕರು ಜಾರಿಗೆ ತಂದಿದ್ದರು. ಈ ಯೋಜನೆಯನ್ನು ಖಾಸಗಿ ವ್ಯಕ್ತಿಗಳಿಗೆ ವಹಿಸಬಾರದು ಎಂದು ಹೋರಾಟಕ್ಕೆ ಇಳಿದಿದ್ದು, ಆದರೆ ಕಾಮಗಾರಿಯನ್ನು ಖಾಸಗಿ ವ್ಯಕ್ತಿಗಳು ಪೂರೈಸಿದ ಬಳಿಕ ಇದರ ನಿರ್ವಹಣೆಯನ್ನು ನಗರಸಭೆಯವರು ನಡೆಸುವುದರಿಂದ ಸಾರ್ವಜನಿಕರಿಗೆ ಯೋಜನೆಯಿಂದ ಲಾಭವೇ ಹೊರತು ಇದರಿಂದ ಯಾವುದೇ ತರಹದ ಭಾರ ಜನರ ಮೇಲೆ ಬೀಳುವುದಿಲ್ಲ ಎಂದು ಸಮಜಾಯಿಷಿ ನೀಡಿದ್ದರು. ನಾಕೊಡೆ, ನಿಬಿಡೆ ಎನ್ನುವ ರೀತಿಯಲ್ಲಿ 24/7 ಯೋಜನೆ ತೀವ್ರ ಶಾಸಕರ ಮತ್ತು ಹೋರಾಟಗಾರರ ನಡುವೆ ತೀವ್ರ ಪೈಪೋಟಿ ಮತ್ತು ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಯೋಜನೆಗೆ ಮತ್ತಷ್ಟು ಗ್ರಹಣ ಹಿಡಿಯವುದೇ ಅಥವಾ ಸಾರ್ವಜನಿಕರಿಗೆ ಯೋಜನೆ ಲಭ್ಯವಾಗಲಿದೆ ಕಾಲ ನಿರ್ಣಯ ಮಾಡಲಿದೆ.

 

● ಡಿ.ನಟರಾಜು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.