ಸಯಾನ್‌ ಜಿಎಸ್‌ಬಿ ಸೇವಾ ಮಂಡಲ ಹರಿಸೇವೆ

65ನೇ ಗಣೇಶೋತ್ಸವ ಪೂರ್ವತಯಾರಿ ಸಭೆ

Team Udayavani, Jun 21, 2019, 5:50 PM IST

2006MUM07

ಮುಂಬಯಿ: ಶ್ರೀ ಕಾಶೀ ಮಠ ಸಂಸ್ಥಾನದ ವೃಂದಾವನಸ್ಥ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸನ್ಯಾಸ ದೀಕ್ಷಾ ಅಮೃತ ಮಹೋತ್ಸವ ಹರಿದ್ವಾರದಲ್ಲಿ ಭಾಗವಹಿಸಿದವರಿಗೆ ಮತ್ತು ಇತರರಿಗೆ ಜೂ. 16 ರಂದು ಜಿಎಸ್‌ಬಿ ಸೇವಾ ಮಂಡಲವು ಶ್ರೀ ಗುರುಗಣೇಶ ಪ್ರಸಾದ ಸಭಾಗೃಹದಲ್ಲಿ ಹರಿಸೇವೆಯನ್ನು ಆಯೋಜಿಸಿತು. ಬೆಳಗ್ಗೆ 9.30 ಕ್ಕೆ ಹರಿಸೇವೆ ಪೂಜೆ ಪ್ರಾರಂಭಗೊಂಡಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಸೇವಾ ಮಂಡಲದ 65 ನೇ ವಾರ್ಷಿಕ ಗಣೇಶೋತ್ಸವದ ಪೂರ್ವ ತಯಾರಿಯ ಪ್ರಥಮ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ವೈಧಿಕರಾದ ವಿಜಯ ಭಟ್‌ ಅವರು ಪ್ರಾರ್ಥನೆಗೈದರು. ಸೇವಾ ಮಂಡಲದ ಅಧ್ಯಕ್ಷ ರಮೇಶ್‌ ಭಂಡಾರ್ಕರ್‌ ಅವರು ಸ್ವಾಗತಿಸಿ, ಸಭೆಯಲ್ಲಿ ಪ್ರಸ್ತುತ ವರ್ಷದ ಗಣೇಶೋತ್ಸವದ ಆಯೋಜನಾ ಸಮಿತಿಯ ಪ್ರಧಾನ ಸಂಚಾಲಕರಾಗಿ ಡಾ| ಭುಜಂಗ ಪೈ, ಸಹ ಸಂಚಾಲಕರಾಗಿ ಜಿ. ದಾಮೋದರ ರಾವ್‌, ರಘುನಂದನ್‌ ಕಾಮತ್‌, ನ್ಯಾಯವಾದಿ ಎಂ. ವಿ. ಕಿಣಿ, ಗಣೇಶ್‌ ಯು. ಪ್ರಭು ಅವರನ್ನು ನೇಮಿಸಲಾಗಿದೆ ಎಂದು ನುಡಿದು, ಗಣೇಶೋತ್ಸವ ಸಂಭ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.

ಸಹ ಸಂಚಾಲಕ ದಾಮೋದರ ರಾವ್‌ ಅವರು ಮಾತನಾಡಿ, ಮಂಡಲದ ಕಳೆದ ವರ್ಷದ ಗಣೇಶೋತ್ಸವದ ಗಳಿಕೆ. ಖರ್ಚು ಇತ್ಯಾದಿ ವಿಷಯಗಳ ವರದಿಯನ್ನು ವಾಚಿಸಿದರು. ಈ ವರ್ಷ ಗಣೇಶೋತ್ಸವದಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚಿನ ಪೂಜಾ ಸೇವೆ, ಪ್ರಚಾರ ಹಾಗೂ ಇನ್ನಿತರ ಮೂಲಕ ಧನಸಂಗ್ರಹ ಮಾಡುವ ಬಗ್ಗೆ ತಿಳಿಸಿದರು.

ಇನ್ನೋರ್ವ ಸಹ ಸಂಚಾಲಕ ಗಣೇಶ್‌ ಪ್ರಭು ಅವರು ಮಾತನಾಡಿ, ನಮ್ಮ ಗಣೇಶೋತ್ಸವದ ಪ್ರಧಾನ ಅರ್ಚಕರಾಗಿದ್ದ ಬಂಟ್ವಾಳ ಕೃಷ್ಣ ಭಟ್‌ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಅವರು ಗಣೇಶೋತ್ಸವವು ಅದ್ದೂರಿಯಾಗಿ ನಡೆಯಲು ವೈಧಿಕ ವೃಂದದೊಂದಿಗೆ ಕ್ಲಪ್ತ ಸಮಯದಲ್ಲಿ ಪೂಜೆಗಳನ್ನು ನಿರ್ವಹಿಸುವುದರೊಂದಿಗೆ ಸಮಯ ಪಾಲನೆಯಲ್ಲಿ ಸೇವೆ ಸಲ್ಲಿಸಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಸೇವಾ ಮಂಡಲದ ಟ್ರಸ್ಟಿ ಆರ್‌. ಜಿ. ಭಟ್‌ ಅವರು ಮಾತನಾಡಿ, ಜಿಎಸ್‌ಬಿ ಗಣೇಶೋತ್ಸವವು ಮುಂಬಯಿ ಹಾಗೂ ಹೊರನಾಡಿನಲ್ಲಿ ಖ್ಯಾತಿ ಪಡೆದಿದೆ. ಈ ಮೂಲಕ ನಮ್ಮ ಸಮಾಜದ ಹೆಸರು ಉನ್ನತ ಸ್ಥಾನಕ್ಕೇರಿದೆ. ಇಲ್ಲಿಯ ಶಿಸ್ತು ಉಲ್ಲೇಖನೀಯ ಎಂದು ನುಡಿದು, ಸೇವಾ ಮಂಡಲದ ಗಣೇಶೋತ್ಸವ ಸಮಿತಿಯ ದಿವಂಗತರಾದ ಮಾಧವ ಪುರಾಣಿಕ್‌, ಬಂಟ್ವಾಳ್‌ ಕೃಷ್ಣ ಭಟ್‌ ಮತ್ತು ದಿನೇಶ್‌ ಪೈ ಅವರು ಸಲ್ಲಿಸಿದ ಸೇವೆಯನ್ನು ವಿವರಿಸಿ, ಜಿಎಸ್‌ಬಿ ಹೆಸರು ಇಂದು ಖ್ಯಾತಿ ಪಡೆಯಲು ಮುಖ್ಯವಾಗಿ ಈ ಮೂವರು ಕಾರಣಕರ್ತರಾಗಿದ್ದಾರೆ ಎಂದರು.

ವೈದಿಕರಾದ ವಿಜಯ ಭಟ್‌ ಅವರು ಮಾತನಾಡಿ, ಐವತ್ತು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಸೇವಾ ಮಂಡಲದ ಗಣೇಶೋತ್ಸವದಲ್ಲಿ ಇತರ ಅರ್ಚಕರೊಂದಿಗೆ ಶ್ರೀ ಮಹಾಗಣಪತಿಯ ಪೂಜೆಯಲ್ಲಿ ಪಾಲ್ಗೊಂಡಿದ್ದೇನೆ. ಈ ವರ್ಷದಿಂದ ಗಣೇಶೋತ್ಸವದಲ್ಲಿ ತನ್ನ ನೇತೃತ್ವದಲ್ಲಿ ಸರ್ವ ಪೂಜೆಗಳನ್ನು ವೈಧಿಕ ವೃಂದದ ಸಹಕಾರದೊಂದಿಗೆ ಮಾಡುವ ಜವಾಬ್ದಾರಿ ವಹಿಸುವೆ ಎಂದು ನುಡಿದು, ಸರ್ವರ ಸಹಕಾರ ಅಗತ್ಯವಾಗಿದೆ ಎಂದರು.

ಸೇವಾ ಮಂಡಲದ ಪ್ರಧಾನ ಕಾರ್ಯದರ್ಶಿ ಶಿವಾನಂದ ಭಟ್‌ ಅವರು ವಂದಿಸಿದರು. ಮುಂದಿನ ಸಮಾಲೋಚನಾ ಸಭೆಯು ಜೂ. 29 ರಂದು ಸಂಜೆ 7.30 ಕ್ಕೆ ಜಿಎಸ್‌ಬಿ ಸೇವಾ ಮಂಡಲ, ಶ್ರೀಗಣೇಶ ಪ್ರಸಾದ ಸಭಾಗೃಹ, ಸಯಾನ್‌ ಪೂರ್ವ ಇಲ್ಲಿ ಜರಗಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಟಾಪ್ ನ್ಯೂಸ್

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.