ಯೋಗದಿಂದ ದೇಹ ಕ್ರೀಯಾಶೀಲತೆ, ಮನಸ್ಸು ಉಲ್ಲಾಸ


Team Udayavani, Jun 22, 2019, 3:00 AM IST

yog-deha

ತಿ.ನರಸೀಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಯೋಗ ಅಭ್ಯಾಸ ಮಾಡಿದರೆ ಸದೃಢ ಆರೋಗ್ಯ ಹೊಂದಬಹುದು ಎಂದು ಶಾಸಕ ಎಂ.ಅಶ್ವಿ‌ನ್‌ ಕುಮಾರ್‌ ತಿಳಿಸಿದರು. ಪಟ್ಟಣದ ವಿದ್ಯೋದಯ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ಸಹಯೋಗದೊಡನೆ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 5ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶೈಕ್ಷಣಿಕ ಸಾಧನೆ: ಈ ದಿನ ತಾಲೂಕಿನಲ್ಲಿ ಐತಿಹಾಸಿಕವಾಗಿದ್ದು, ಪ್ರತಿದಿನ ಯೋಗಾಸನ ಮಾಡುವುದರಿಂದ ದೇಹ ಕ್ರಿಯಾಶೀಲವಾಗುತ್ತದೆ. ಮನಸ್ಸು ಉಲ್ಲಾಸದಿಂದ ಕಾರ್ಯ ಮಾಡಲು ಸಾಧ್ಯವಾಗುತ್ತಿದೆ. ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಶೈಕ್ಷಣಿಕ ಸಾಧನೆ ಮಾಡಲು ಅನುಕೂಲವಾಗಲಿದೆ. ಇದನ್ನು ಇಂದಿಗೆ ಮಾತ್ರ ಸೀಮಿತಗೊಳಿಸದೇ ಮುಂದುವರಿಸುವಂತೆ ಅವರು ಕಿವಿಮಾತು ಹೇಳಿದರು.

ತಾಲೂಕಿನ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಪೋಷಕರು ಈ ದಿನಾಚರಣೆಗೆ ವಿದ್ಯಾರ್ಥಿಗಳನ್ನು ಬೆಳಗ್ಗೆಯೇ ತಯಾರಿ ಮಾಡಿಕೊಂಡು ಕರೆತಂದಿರುವುದು ನಿಜಕ್ಕೂ ಅಭಿನಂದನೀಯ ಎಂದರು.

ಕಾರ್ಯಕ್ರಮದ ರೂವಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಸ್ವಾಮಿ ಮಾತನಾಡಿ, ತಾಲೂಕು ಆಡಳಿತ, ಶಿಕ್ಷಣ ಇಲಾಖೆಯ ಎಲ್ಲಾ ಶಿಕ್ಷಕರ ಸಂಘಟನೆಗಳ ಸಹಕಾರದಲ್ಲಿ 5 ಸಾವಿರ ವಿದ್ಯಾರ್ಥಿಗಳನ್ನು ಸೇರಿಸಿ ಯೋಗದ ಮಹತ್ವ ಮತ್ತು ಅನುಷ್ಠಾನದ ಬಗ್ಗೆ ತಿಳಿಸುವ ಮೂಲಕ ವಿಶೇಷ ದಿನವನ್ನಾಗಿ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ತಾಲೂಕಿನ ವಿವಿಧ ಶಾಲೆಗಳಿಂದ ಸುಮಾರು 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು. ಅಭ್ಯಾಸದ ನಂತರ ಮಕ್ಕಳಿಗೆ ಲಘು ಉಪಾಹಾರ ವಿತರಿಸಲಾಯಿತು. ಕೊಳತೂರು ಮತ್ತು ವಿದ್ಯೋದಯ ಶಾಲೆಯ ವಿದ್ಯಾರ್ಥಿಗಳು ಯೋಗಾಸನದ ಪ್ರಾತ್ಯಕ್ಷಕೆ ನೀಡಿದರು

ಈ ಸಂದರ್ಭದಲ್ಲಿ ತಹಶೀಲ್ದಾರ್‌ ನಾಗಪ್ರಶಾಂತ್‌, ಶಿರಸ್ತೇದಾರ್‌ ಪ್ರಭುರಾಜ್‌, ತಾಪಂ ಅಧ್ಯಕ್ಷ ಚಲುವರಾಜು, ಸದಸ್ಯ ಎಂ.ರಮೇಶ್‌, ಇಒ ನಿಂಗಯ್ಯ, ಪುರಸಭಾ ಸದಸ್ಯರಾದ ಕೆ. ಕಿರಣ್‌, ಬಾದಾಮಿ ಮಂಜು, ಸಿದ್ದು, ಬೈರಾಪುರ ಮಂಜುನಾಥ್‌, ದೈಹಿಕ ಶಿಕ್ಷಣ ಪರೀಕ್ಷಕ ಮಹಾಂತಪ್ಪ ನಾಗೂರು, ಬಿಆರ್‌ಸಿ ಮಂಜುಳಾ, ಬಿಆರ್‌ಪಿ ಎಚ್‌.ಎಂ. ಶಂಕರ್‌,

ನೌಕರರ ಸಂಘದ ನಿರ್ದೇಶಕರಾದ ಪುಟ್ಟರಾಜು, ಎಚ್‌.ಡಿ.ಮಾದಪ್ಪ, ಸುಬ್ರಹ್ಮಣ್ಯ, ಶಿವಶಂಕರಮೂರ್ತಿ, ಗಜೇಂದ್ರ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಪುಟ್ಟಸ್ವಾಮಿ, ಮಹೇಶ್‌, ದೈಹಿಕ ಶಿಕ್ಷಕರ ಸಂಘದ ರಾಜೇಂದ್ರ ಪ್ರಸಾದ್‌, ಮಲ್ಲೇಶ್‌ ಸೇರಿದಂತೆ ವಿವಿಧ ಸಂಘಟನೆಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.