ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಒತ್ತಾಯ


Team Udayavani, Jun 22, 2019, 3:00 AM IST

jill-vata

ಚಾಮರಾಜನಗರ: ಜಿಲ್ಲೆಯ ಸಮಗ್ರ ಅಭಿವೃ ದ್ಧಿಗಾಗಿ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ನಗರದ ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿ ಮಾತನಾಡಿ, ಚಾಮರಾಜನಗರ ಜಿಲ್ಲೆ ಹಿಂದುಳಿದ ಗಡಿಪ್ರದೇಶವಾಗಿದ್ದು, ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆ. ಈ ಜಿಲ್ಲೆಗೆ ವಿಶೇಷವಾದ ಅನುದಾನ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಒಂದು ಪ್ಯಾಕೇಜ್‌ ನೀಡಬೇಕು ಎಂದು ಒತ್ತಾಯಿಸಿದರು.

ಕೆರೆಗಳಿಗೆ ನೀರು ತುಂಬಿಸುವಲ್ಲಿ ಸರ್ಕಾರ ವಿಫ‌ಲ: ಚಾಮರಾಜನಗರ ತೀವ್ರ ಭೀಕರ ಬರಗಾಲವಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇವು ತ್ವರಿತವಾಗಿ ವ್ಯವಸ್ಥೆ ಮಾಡಬೇಕಾದ ಪರಿಸ್ಥಿತಿ ಇದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಾಗಿದೆ. ನಗರದಲ್ಲಿ ಪ್ರತಿನಿತ್ಯ ಕಾವೇರಿ ನೀರು ಬಿಡಬೇಕು. ಕೆರೆಗ‌ಳಿಗೆ ನೀರು ತುಂಬಿಸುವಲ್ಲಿ ಸರ್ಕಾರಗಳು ವಿಫ‌ಲವಾಗಿದೆ. ಪ್ರತಿ ಹಳ್ಳಿ ಹಳ್ಳಿಯಲ್ಲೂ ತಕ್ಷಣ ಕೊಳವೆಬಾವಿ ಕೊರೆಸಿ ಸಂಪೂರ್ಣ ನೀರು ಕೊಡಬೇಕು. ನಗರದಲ್ಲಿ ಒಳಚರಂಡಿ ಕಾಮಗಾರಿ ಅವೈಜ್ಞಾನಿವಾಗಿದ್ದು ಪರಿಣಾಮಕಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಆಪರೇಷನ್‌ ಕಮಲ ಅಪಾಯಕಾರಿ: ಮಾಜಿ ಪ್ರಧಾನಿ ದೇವೇಗೌಡರು ಸೋಲಬಾರದಿತ್ತು. ದೇವೇಗೌಡರೇ ಮಧ್ಯಂತರ ಚುನಾವಣೆಗೆ ಕುರಿತು ಮಾತನಾಡಿದ್ದಾರೆ. ರಾಜ್ಯ ಮೈತ್ರಿ ಸರ್ಕಾರದಲ್ಲಿ ಜೆಡಿಎಸ್‌, ಕಾಂಗ್ರೆಸ್‌ ನಡುವೆ ಒಳಜಗಳವಿದೆ. ಆಪರೇಷನ್‌ ಕಮಲ ಅಪಾಯಕಾರಿ. ಅಧಿಕಾರದ ಆಸೆಗಾಗಿ ಅಪರೇಷನ್‌ಗೆ ಒಳಗಾಗುವ ಪಕ್ಷಾಂತರಿಗಳಿಗೆ ಜೀವನ ಪರ್ಯಂತ ಚುನಾವಣೆಗೆ ನಿಲ್ಲದಂತೆ ಆದೇಶ ನೀಡಬೇಕು. ಸಿದ್ದರಾಮಯ್ಯ ಅವರು ರಾಜ್ಯದಲ್ಲಿ 5 ವರ್ಷಗಳ ಕಾಲ‌ ಉತ್ತಮ ಆಡಳಿತ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಸೋಲು ಪಾರ್ಲಿಮೆಂಟ್‌ ಸೋಲಾಗಿದೆ ಎಂದರು.

ಬಡ್ತಿಗೆ ಒತ್ತಾಯ: ಗೃಹರಕ್ಷಕ ದಳ ನೌಕರರಿಗೆ ಆಂಧ್ರಪ್ರದೇಶದಲ್ಲಿ 23 ಸಾವಿರ ರೂ. ಹಾಗೂ ತೆಲಂಗಾಣ 21 ಸಾವಿರ ವೇತನ ನೀಡುತ್ತಿದ್ದಾರೆ ಆದರೆ ಕರ್ನಾಟಕದಲ್ಲಿ 13 ಸಾವಿರ ವೇತನ ನೀಡುವುದು ಯಾವ ನ್ಯಾಯ? ಕೂಡಲೇ ರಾಜ್ಯ ಸರ್ಕಾರ ಅವರ ವೇತನ ಹೆಚ್ಚು ಮಾಡಬೇಕು ಹಾಗೂ ಡಿ ಗ್ರೂಪ್‌ ನೌಕರರಲ್ಲಿ ಪದವೀಧರರು, ರಾಜ್ಯಪ್ರಶಸ್ತಿ ಪುರಸ್ಕೃತರು ಇದ್ದಾರೆ. ಅವರಿಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಉಪನಗರ ನಿರ್ಮಾಣವಾಗಲಿ: ಮುಂದಿನ ದಿನಗಳಲ್ಲಿ ಪ್ರತಿಹಳ್ಳಿಹಳ್ಳಿಗಳಿಗೆ ಭೇಟಿ ಅಲ್ಲಿನ ಕುಂದುಕೊರತೆಗಳನ್ನು ಆಲಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಅಲ್ಲದೆ ಚಾಮರಾಜನಗರ ನಗರಸಭಾ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಿಗೂ ಭೇಟಿ ನೀಡಲಾಗುವುದು. ಚಾಮರಾಜನಗರಕ್ಕೆ ತಿ. ನರಸೀಪುರದಿಂದ ಕಾವೇರಿ ನೀರಿನ 2 ನೇ ಹಂತ ಆಗಬೇಕು. ಮೋಳೆಗಳಲ್ಲಿನ ಜನರು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದಾರೆ. ಅವರ ಅಭಿವೃದ್ಧಿಯಾಗಬೇಕು. ಜಿಲ್ಲೆಗೆ ಐದು ಸಾವಿರ ಮನೆ ಗಳನ್ನು ನೀಡಬೇಕು. ಬದನಗುಪ್ಪೆ ಹತ್ತಿರ ಉಪನಗರ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ವಾಟಾಳ್‌ ಪಕ್ಷದ ಮುಖಂಡರಾದ ದಳಪತಿವೀರತಪ್ಪ, ಕಾರ್‌ನಾಗೇಶ್‌, ಶಿವಲಿಂಗಮೂರ್ತಿ, ಗು.ಪುರುಷೋತ್ತಮ, ಚಿಕ್ಕಲಿಂಗಪ್ಪ, ನಾಗರಾಜಮೂರ್ತಿ, ವರದರಾಜು, ಗೋವಿಂದರಾಜು, ನಾಗರಾಜು ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.