ಯೋಗದಿಂದ ಆರೋಗ್ಯಪೂರ್ಣ ಬದುಕು: ಹರಿಪ್ರಸಾದ್
ಬೆಳ್ಮಣ್: ಅಂತಾರಾಷ್ಟ್ರೀಯ ಯೋಗ ದಿನಾಚರಣೆ
Team Udayavani, Jun 22, 2019, 6:00 AM IST
ಬೆಳ್ಮಣ್: ಆರೋಗ್ಯಪೂರ್ಣ ಬದುಕನ್ನು ಯೋಗದಿಂದ ಮಾಡ ಬಹುದು. ಈಗಿನ ಆಹಾರ ಪದ್ಧತಿಯಿಂದ ಆರೋಗ್ಯ ಕೆಡುತ್ತಿದ್ದು, ನಾವು ನಿತ್ಯ ಯೋಗ ಮಾಡಿದರೆ ಆರೋಗ್ಯವಂತರಾಗಿರಲು ಸಾಧ್ಯ. ಎಷ್ಟೋ ಜೌಷ ಧಗಳಿಂದ ಗುಣ ಮುಖವಾಗದ ಕಾಯಿಲೆಗಳು ಯೋಗದಿಂದ ಗುಣಮುಖವಾಗುತ್ತದೆ ಎಂದು ಯೋಗ ನಿರ್ದೇಶಕ ಹರಿಪ್ರಸಾದ್ ಆಚಾರ್ಯ ಹೇಳಿದರು.
ಶುಕ್ರವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಉಡುಪಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಜಂಟಿ ಆಶ್ರಯದಲ್ಲಿ ನಡೆದ 5ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಅವರು ಮಾತನಾಡಿದರು.
ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್ ಯೋಗ ದಿನಾಚರಣೆಗೆ ಚಾಲನೆ ನೀಡಿದರು.ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷ ದಿನೇಶ್ ಪೂಜಾರಿ ಬಿರೋಟ್ಟು, ಸುರೇಶ್ ಪೂಜಾರಿ ಕಾಸ್ರಬೈಲು, ಉಪಾಧ್ಯಕ್ಷ ಹರೀಶ್ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಭಜನ ಸಮಿತಿ ಅಧ್ಯಕ್ಷ ಮಂಜುನಾಥ ಆಚಾರ್ಯ, ಮಹಿಳಾ ಸಂಘಟನ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ವಿಟuಲ ಮೂಲ್ಯ, ನಿಕಟ ಪೂರ್ವಾಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಉಪಾಧ್ಯಕ್ಷೆ ವೀಣಾ ಪೂಜಾರಿ, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಜತೆ ಕಾರ್ಯದರ್ಶಿ ಬಾಲಕೃಷ್ಣ ಮಡಿವಾಳ, ಕೋಶಾ ಧಿಕಾರಿ ಲಲಿತಾ ಆಚಾರ್ಯ, ಸದಸ್ಯರಾದ ಲೀಲಾ ಪೂಜಾರಿ, ಹರಿಣಿ ಪೂಜಾರಿ, ಸುಲೋಚನಾ ಪೂಜಾರಿ, ಸುನೀತಾ ಪಿಂಟೋ ಯೋಗ ಶಿಬಿರದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ