ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿಫಲ

ಐದಾರು ವರ್ಷ ಕಳೆದರೂ 18 ಗ್ರಾಮಕ್ಕೆ ತಲುಪಿಲ್ಲ ನೀರು

Team Udayavani, Jun 22, 2019, 10:58 AM IST

22–June-12

ಸೈದಾಪುರ: ಆನೂರ ಕೆ ಗ್ರಾಮದಲ್ಲಿ ರಾಜೀವ ಗಾಂಧಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ಸ್ಥಾಪಿಸಲಾದ ನೀರಿನ ಟ್ಯಾಂಕ್‌ ನಿರುಪಯುಕ್ತವಾಗಿದೆ.

ಭೀಮಣ್ಣ ಬಿ. ವಡವಟ್
ಸೈದಾಪುರ:
ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮಕ್ಕೆ ಆಗಮಿಸುವ ಮುಂಖ್ಯಮಂತ್ರಿ ಕುಮಾರಸ್ವಾಮಿ ಅವರು ಬಹು ದಿನಗಳಿಂದ ನೆನೆಗುದಿಗೆ ಬಿದ್ದ ಆನೂರ ಕೆ ಮತ್ತು ಗೊಂದಡಗಿಯ ರಾಜೀವ ಗಾಂಧಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಗಮನ ಹರಿಸಿ 18 ಗ್ರಾಮಗಳಿಗೆ ನೀರು ಒದಗಿಸುತ್ತಾರೆ ಎಂಬ ಪ್ರಶ್ನೆ ಸ್ಥಳೀಯರಲ್ಲಿ ಕಾಡುತ್ತಿದೆ.

ಸೈದಾಪುರ ಸೇರಿದಂತೆ ಹಲವು ಗ್ರಾಮಗಳ ಪಕ್ಕದಲ್ಲೇ ಭಿಮಾ ನದಿ ಇದ್ದರೂ ಕುಡಿಯುವ ನೀರಿಗಾಗಿ ಜನ ಪರದಾಡುವಂತಹ ದುಸ್ಥಿತಿ ನಿರ್ಮಾಣವಾಗಿದೆ. ಸೈದಾಪುರ ಸಮೀಪದ ಭೀಮಾ ನದಿ ತೀರದ ಜನತೆಗೆ ಕುಡಿಯುವ ನೀರನ್ನು ಸರಬರಾಜು ಮಾಡವ ಉದ್ದೇಶದಿಂದ ರಾಜೀವ ಗಾಂಧಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿ ಮಾಡಲಾಯಿತು.

ಇದಕ್ಕಾಗಿ ಒಂದಕ್ಕೆ ಸುಮಾರು 3.25 ಕೋಟಿಯಂತೆ ಆನೂರ ಕೆ ಹಾಗೂ ಗೊಂದಡಗಿಯಲ್ಲಿನ ಪ್ರತ್ಯೇಕ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಆದರೂ ಉದ್ಘಾಟನೆ ಮುಂಚೆ ಅದು ಹಾಳಾಗಿ ಸುಮಾರು 6.50 ಕೋಟಿ ರೂಪಾಯಿ ಸರ್ಕಾರದ ಹಣ ನೀರಿಗೆ ಎಸೆದಂತಾಗಿದೆ.

ಆನೂರ ಕೆ ಕುಡಿಯುವ ನೀರಿನ ಯೋಜನೆಯಿಂದ 9 ಗ್ರಾಮ ಹಾಗೂ ಗೊಂದಡಗಿಯ ಯೋಜನೆಯಿಂದ 9 ಗ್ರಾಮಗಳು ಸೇರಿದಂತೆ ಸುತ್ತಲಿನ 18 ಗ್ರಾಮಗಳಿಗೆ ಶಾಸ್ವತ ನೀರುಣಿಸುವುದು ರಾಜೀವ ಗಾಂಧಿ ಕುಡಿಯುವ ನೀರು ಸರಬರಾಜು ಯೋಜನೆ ಉದ್ದೇಶವಾಗಿತ್ತು. ಆದರೆ ಸುಮಾರು ಐದಾರು ವರ್ಷಗಳಾದರೂ ಈವರೆಗೆ ಜನತೆಗೆ ನೀರು ತಲುಪಿಲ್ಲ. ಬದಲಾಗಿ ನೀರು ಸರಬರಾಜಿಗೆ ಅಳವಡಿಸಲಾದ ಪೈಪ್‌ಗ್ಳು ಒಡೆದಿವೆ. ಹೀಗಾಗಿ ನೂತನ ಪೈಪ್‌ಲೈನ್‌ ವ್ಯವಸ್ಥೆ ಕಲ್ಪಿಸುವವರೆಗೂ ನೀರು ಸರಬರಾಜು ಸಾಧ್ಯವಿಲ್ಲ. ರಾಜೀವ ಗಾಂಧಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಅಡಿಯಲ್ಲಿ ಸಾವೂರ, ಹೆಗ್ಗಣಗೇರಾ, ಕ್ಯಾತ್ನಾಳ, ಇಂದಿರಾ ನಗರ, ಸೈದಾಪುರ, ರಾಚನಹಳ್ಳಿ, ರಾಂಪೂರು, ಗೊಂದಡಗಿ, ಮುನಗಾಲ, ಭೀಮನಹಳ್ಳಿ, ಕೊಂಡಾಪುರ, ಗೂಡೂರು, ಬಾಡಿಯಾಲ, ಶೆಟ್ಟಿಹಳ್ಳಿ, ಕಡೇಚೂರ, ಮಾವಿನಹಳ್ಳಿ ಸೆರಿದಂತೆ ಒಟ್ಟು 18 ಗ್ರಾಮಗಳಿಗೆ ಶುದ್ಧ ನೀರುಣಿಸಲು ಉದ್ದೇಶಿಸಲಾಗಿತ್ತು. ಆದರೆ ಯೋಜನೆ ವಿಫಲತೆಯಿಂದ ಈ ಎಲ್ಲಾ ಗ್ರಾಮಗಳಲ್ಲಿ ನೀರಿನ ಪೂರೈಕೆ ಅಸಮರ್ಪಕವಾಗಿದೆ. ಈ ಯೋಜನೆಯಡಿ ವಿವಿಧ ಗ್ರಾಮಗಳಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕಗಳು ನೀರಿಲ್ಲದೆ ಉಪಯೋಗಕ್ಕೆ ಬಾರದಂತಾಗಿವೆ.

ಜಿಲ್ಲೆಗೆ ಆಗಮಿಸುವ ನಾಡಿನ ಮುಖ್ಯಮಂತ್ರಿ ಸೈದಾಪುರ ಸಮೀಪದ ಆನೂರ ಬಿ ಮತ್ತು ಗೊಂದಡಗಿ ಬಹುಗ್ರಾಮ ಕುಡಿಯುವ ನೀರು ಯೋಜನೆ ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಜತೆಗೆ ಶಿಘ್ರದಲ್ಲಿ ಈ ಯೋಜನೆ ಪ್ರಾರಂಭಿಸಿ 18 ಗ್ರಾಮಗಳಿಗೆ ನೀರು ಒದಗಿಸಬೇಕು.
• ಶರಣು ಬಿ. ಗದ್ದುಗೆ,
ಉ.ಕ ಕರವೇ ಅಧ್ಯಕ್ಷ

ರಾಜೀವ ಗಾಂಧಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಸರಕಾರದ ಹಣವನ್ನು ಲೂಟಿ ಮಾಡಲಾಗಿದೆ. ಜನತೆಗೆ ನೀರುಣಿಸುವ ಮೊದಲೇ ಹಾಳಾದ ಇಲ್ಲಿನ ಪೈಪ್‌ಲೈನ್‌ ವ್ಯವಸ್ಥೆ ಕಳಪೆ ಕಾಮಗಾರಿಗೆ ಸೂಕ್ತ ನಿದರ್ಶನವಾಗಿದೆ. ಸುಮಾರು ಐದಾರು ವರ್ಷಗಳಾದರೂ ಜನತೆಗೆ ಶಾಸ್ವತ ಕುಡಿಯುವ ನೀರು ಇಲ್ಲದಂತಾಗಿರುವುದು ಬೇಸರದ ಸಂಗತಿಯಾಗಿದೆ.
• ಸಿದ್ದಪ್ಪ ಪೂಜಾರಿ,
ಸ್ವಾಮಿ ವಿವೇಕಾನಂದ ತರುಣ ಸಂಘದ ಬದ್ದೇಪಲ್ಲಿ ಉಪಾಧ್ಯಕ್ಷ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.