ಹೊಸಬರು ಕಟ್ಟಿದ ಚಿ. ತು. ಸಂಘ…!


Team Udayavani, Jun 23, 2019, 3:00 AM IST

Chi-tu-sanga

“ಚಿ.ತು.ಸಂಘ…! ಅರೇ, ಈ ಡೈಲಾಗನ್ನು ಎಲ್ಲೋ ಕೇಳಿದ್ದೇವಲ್ಲಾ ಎಂಬ ಪ್ರಶ್ನೆ ಎದುರಾಗೋದು ಗ್ಯಾರಂಟಿ. ಅದಕ್ಕೆ ಉತ್ತರ ಶರಣ್‌ ಮತ್ತು ಚಿಕ್ಕಣ್ಣ ಅಭಿನಯದ “ಅಧ್ಯಕ್ಷ’ ಚಿತ್ರ. ಹೌದು. ಈ ಚಿತ್ರದಲ್ಲಿ ಬರುವ ಡೈಲಾಗ್‌ ಇದು. ಅಂದಹಾಗೆ, “ಚಿ.ತು.ಸಂಘ’ವನ್ನು ವಿಸ್ತರಿಸಿ ಹೇಳುವುದಾದರೆ, “ಚಿಂತೆ ಇಲ್ಲದ ತುಂಡೈಕ್ಳ ಸಂಘ…’ ಎಂಬರ್ಥವನ್ನು ಹಾಸ್ಯ ನಟ ಚಿಕ್ಕಣ್ಣ ಹೇಳುವುದು ಗೊತ್ತೇ ಇದೆ. ಅಷ್ಟಕ್ಕೂ ಈಗ “ಚಿ.ತು.ಸಂಘ’ ಕುರಿತ ಮಾತೇಕೆ ಎಂಬ ಪ್ರಶ್ನೆ ಕಾಡಬಹುದು.

ಅದಕ್ಕೆ ಉತ್ತರ. “ಚಿ.ತು.ಸಂಘ’ ಎಂಬ ಹೆಸರಿನ ಹೊಸಬರ ಚಿತ್ರ. ಹೌದು. ಹೊಸಬರು ಸೇರಿ ಈ ಚಿತ್ರ ಮಾಡಿದ್ದಾರೆ. ಅದಕ್ಕೆ “ಚಿ.ತು.ಸಂಘ’ ಎಂದು ನಾಮಕರಣ ಮಾಡಿ, ಇನ್ನೇನು ರಿಲೀಸ್‌ಗೆ ಅಣಿಯಾಗುತ್ತಿದ್ದಾರೆ. ಚಿತ್ರಕ್ಕೆ “ಸುಳ್ಳೇ ನಮ್ಮನೆ ದೇವ್ರು’ ಎಂಬ ಅಡಿಬರಹವೂ ಇದೆ. ಅಲ್ಲಿಗೆ ಇದೊಂದು ಹಾಸ್ಯ ಪ್ರಧಾನ ಚಿತ್ರ ಎನ್ನಲು ಅಡ್ಡಿಯಿಲ್ಲ.

ಚೇತನ್‌ಕುಮಾರ್‌ ಈ ಚಿತ್ರದ ಮೂಲಕ ನಿರ್ದೇಶಕರಾಗುವುದರ ಜೊತೆಗೆ ನಾಯಕರಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಶಿವಣ್ಣ ನಂದಿಹಳ್ಳಿ ಮತ್ತು ಜಿ.ಕೆ.ಲಕ್ಷ್ಮೀಕಾಂತಯ್ಯ ಚಿತ್ರವನ್ನು ನಿರ್ಮಿಸಿದ್ದಾರೆ. ಅವರಿಗೆ ಗುರುಮೂರ್ತಿ, ನವೀನ್‌ ನಿರ್ಮಾಣದಲ್ಲಿ ಸಾಥ್‌ ನೀಡಿದ್ದಾರೆ. ಶೀರ್ಷಿಕೆಯೇ ಹೇಳುವಂತೆ, ಇದು ಹಳ್ಳಿಯ ಹಿನ್ನೆಲೆಯಲ್ಲಿ ಸಾಗುವ ಕಥೆ.

ನಾಯಕ ಮತ್ತು ಅವನ ಗೆಳೆಯರದು ಆ ಊರಲ್ಲಿ ಆಡಿದ್ದೇ ಆಟ, ಮಾಡಿದ್ದೇ ಕೆಲಸ. ನಾಯಕ ಮಹಾ ಸುಳ್ಳುಗಾರ. ಅದರಲ್ಲೂ ನಾಯಕಿಯನ್ನು ಪ್ರೀತಿಸಿ, ತನ್ನತ್ತ ಸೆಳೆದುಕೊಳ್ಳಬೇಕೆಂಬ ಉದ್ದೇಶದಿಂದ ಸುಳ್ಳಿನ ಕಂತುಗಳಲ್ಲೇ ಬದುಕುತ್ತಿರುತ್ತಾನೆ. ಒಂದು ಹಂತದಲ್ಲಿ ನಾಯಕ ಇಲ್ಲಿಯವರೆಗೆ ಹೇಳಿದ್ದು, ಮಾಡಿದ್ದೆಲ್ಲವೂ ಸುಳ್ಳು ಅಂತ ಗೊತ್ತಾದ ಬಳಿಕ ಏನೆಲ್ಲಾ ನಡೆಯುತ್ತದೆ ಎಂಬುದು ಕಥೆ.

ಚಿತ್ರವನ್ನು ಕೊಟ್ಟೂರು, ಶಿವಗಂಗೆ, ಚಿಕ್ಕನಾಯಕನಹಳ್ಳಿ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಚೇತನ್‌ಕುಮಾರ್‌ಗೆ ನಾಯಕಿಯಾಗಿ ರೂಪ ನಟಿಸಿದರೆ, ಗೆಳೆಯರಾಗಿ ಪೃಥ್ವಿ, ರಾಘವ್‌ ಮತ್ತು ಪೋಷಕ ನಟರಾಗಿ ವೆಂಕಟೇಶ್‌, ಬಬಿತಾ, ದೇವರಾಜು, ಗೌತಮ್‌ರಾಜು, ಸತೀಶ್‌ (ಚಿಂತಾಮಣಿ) ಇತರರು ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.