“ಜ್ಞಾನದಾಹ ನೀಗಿಸುವಲ್ಲಿ ವಿದ್ಯಾಲಯದ ಪಾತ್ರ ಮುಖ್ಯ’


Team Udayavani, Jun 23, 2019, 5:19 AM IST

22-KBL-1

ಕುಂಬಳೆ: ಜನ ಸಾಮಾನ್ಯರ ಜ್ಞಾನದಾಹವನ್ನು ಪೂರೈಸುವಲ್ಲಿ ವಿದ್ಯಾಲಯಗಳ ಪಾತ್ರ ಮಹತ್ತರವಾದುದು. ಸಂಸ್ಕಾರ ಕಲಿಸುವ, ಜೀವನ ಪಥದ ಮಾರ್ಗ ತೋರಿಸುವ ಶಿಕ್ಷಣ ವ್ಯವಸ್ಥೆ ಪಠ್ಯ ಪುಸ್ತಕಗಳಿಗೆ ಮಾತ್ರ ಸೀಮಿತವಾಗದೆ ಪುಟಾಣಿಗಳ ಸರ್ವಾಂಗೀಣ ಅಭಿವೃದ್ದಿಗೆ ದಾರಿದೀಪವಾಗಬೇಕು ಎಂದು ಜಾದೂಗಾರ ಜೂ.ಶಂಕರ್‌ ಅವರು ಹೇಳಿದರು.ನಾರಾಯಣಮಂಗಲ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಎಂಟನೇ ವರ್ಷದ ಉಚಿತ ಪುಸ್ತಕ ವಿತರಣಾ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಬೆಳೆಯುವಲ್ಲಿ ಸ್ಥಳೀಯರ ನೆರವು ಮಹತ್ವಪೂರ್ಣವಾಗಿದೆ. ವಿದ್ಯಾರ್ಥಿಗಳ ಶಾಲಾ ಶಿಕ್ಷಣದ ಜೊತೆಗೆ ಬಹುಮುಖೀ ಚಟುವಟಿಕೆಗಳನ್ನು ಅಭ್ಯಸಿಸುವ ನಿಟ್ಟಿನಲ್ಲಿ ಶಿಕ್ಷಕರು, ಪೋಷಕರು ಗಮನ ನೀಡಬೇಕೆಂದರು.

ಶಾಲಾ ವ್ಯವಸ್ಥಾಪಕ ಡಾ.ಕೆ.ವಿ.ತೇಜಸ್ವಿ ಅವರು ಅಧ್ಯಕ್ಷತೆ ವಹಿಸಿದ ಸಮಾರಂಭದಲ್ಲಿ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ್‌ ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್‌ ಅವರು ಪುಟಾಣಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಿ ಮಾತನಾಡಿ, ಗಡಿನಾಡು ಕಾಸರಗೋಡಿನ ಹಿರಿಯ ತಲೆಮಾರಿನ ಪ್ರಜ್ಞಾವಂತ ಹಿರಿಯ ನಾಗರಿಕರ ದೂರದೃಷ್ಟಿಯ ಫಲವಾಗಿ ವಿವಿಧಡೆಗಳಲ್ಲಿ ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿರುವುದು ಹೆಮ್ಮೆಯ ವಿಚಾರವಾಗಿದೆ. ಆದರೆ ಇಂದು ಶಿಕ್ಷಣ ವ್ಯವಸ್ಥೆ ವ್ಯಾಪಾರಿ ಸರಕಾಗಿ ಶಿಕ್ಷಣಕ್ಕೆ ಸವಾಲಾಗಿದೆ. ವಿದ್ಯಾದಾನವು ಇತರ ಎಲ್ಲಾ ದಾನಗಳಿಗಿಂತ ಶ್ರೇಷ್ಠವೆಂದು ಸಾರಿದ ಭಾರತೀಯ ಸಂಸ್ಕೃತಿಯ ಶಿಕ್ಷಣ ದೃಷ್ಟಿ ಅಪೂರ್ವವಾದುದು.

ಸಾಂಸ್ಕೃತಿಕ, ಸಾಹಿತ್ಯಕ ಶ್ರೀಮಂತಿಕೆಯ ಸಮಾಜವಾಗಿ ಬೆಳೆದುಬಂದಿರುವ ನಮಗೆ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಮೂಲಕ ಉದ್ದೇಶಿತ ಗುರಿ ತಲಪಲು ಸಾಧ್ಯವಿದೆ ಎಂದರು. ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿಯೊಂದಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಕ್ರಿಯಾತ್ಮಕವಾಗಿ ತೊಡಗಿಸಿಕೊಳ್ಳಬೇಕೆಂದರು.ಕೇರಳ ತುಳು ಅಕಾಡೆಮಿ ಸದಸ್ಯ ರಾಜು ಸ್ಟೀಪನ್‌ ಡಿಸೋಜ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಉಪಸ್ಥಿತರಿದ್ದರು.ಮುಖ್ಯೋಪಾಧ್ಯಾಯಿನಿ ಮೇಬಲ್‌ ಮರೀಟ ಡಿಸೋಜ ಸ್ವಾಗತಿಸಿದರು, ಶಿಕ್ಷಕ ಸುಕೇಶರಾಮ್‌ ಡಿ. ವಂದಿಸಿದರು. ಶಾಲಾಡಳಿತ ಮಂಡಳಿ ಸದಸ್ಯ ಗೋಪಾಲಕೃಷ್ಣ ಭಟ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.