ಕೊಲ್ಲೂರು ಪ್ರಾ. ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳ ಕೊರತೆ
24x7 ಸೇವೆಯೂ ದಿಢೀರ್ ರದ್ದು!
Team Udayavani, Jun 23, 2019, 5:28 AM IST
ಕೊಲ್ಲೂರು: ವೈದ್ಯರ ಅಭಾವದಿಂದಾಗಿ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ಅವಲಂಬಿಸಿರುವ ಗ್ರಾಮೀಣ ಜನರು ಈಗ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಪೂರ್ಣಕಾಲಿಕ ವೈದ್ಯರಿಲ್ಲ
ಈ ವರೆಗೆ ಸೇವೆ ಸಲ್ಲಿಸುತ್ತಿದ್ದ ವೈದ್ಯಾಧಿಕಾರಿ ಉನ್ನತ ವ್ಯಾಸಂಗಕ್ಕೆ ತೆರಳಿದ್ದರಿಂದ ಹುದ್ದೆ ಖಾಲಿಯಾಗಿದೆ. ಇದುವರೆಗೆ ಆ ಹುದ್ದೆ ಭರ್ತಿಯಾಗಿಲ್ಲ. ಎಳಜಿತ, ಗೋಳಿಹೊಳೆ, ಅರೆಶಿರೂರು, ಮುದೂರು, ಜಡ್ಕಲ್ ಹಾಗೂ ಕೊಲ್ಲೂರಿನ ರೋಗಿಗಳಿಗೆ ತುರ್ತು ಸೇವೆಗೆ ಕೇಂದ್ರದಲ್ಲಿ ವೈದ್ಯರಿಲ್ಲದ್ದರಿಂದ ಕುಂದಾಪುರ ಅಥವಾ ಬೈಂದೂರಿಗೆ ಸಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಎರವಲು ವೈದ್ಯರ ಸೇವೆ
ವಂಡ್ಸೆ ಹಾಗೂ ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪೂರ್ಣಕಾಲಿಕ ಇಬ್ಬರು ವೈದ್ಯರನ್ನು ವಾರದ 3 ದಿನ ಇಲ್ಲಿ ಸೇವೆಗೆ ನಿಯೋಜಿಸಲಾಗುತ್ತಿದೆ. ಆದರೆ ಉಳಿದ ದಿನಗಳಂದು ಸೇವೆಗೆ ಲಭ್ಯವಿಲ್ಲದ್ದರಿಂದ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. ಬಹುದೂರದ ಮುದೂರು, ಯಳಜಿತ ಮುಂತಾದ ಕಡೆಯಿಂದ ತುರ್ತು ಚಿಕಿತ್ಸೆಗೆ ಆಗಮಿಸುವ ರೋಗಿಗಳ ಗತಿ ಹೇಳತೀರದು.
24X7 ಸೇವೆ ರದ್ದು!
ರೋಗಿಗಳು ಸಹಿತ ಮೂಕಾಂಬಿಕಾ ದೇಗುಲಕ್ಕೆ ಆಗಮಿಸುವ ಭಕ್ತರ ತುರ್ತು ಸೇವೆಗೆ ಆಯೋಜಿಸಲಾಗಿದ್ದ 24X7 ಸೇವೆ ಈಗ ರದ್ದುಗೊಂಡಿದೆ. ಬದಲಿಗೆ ನಿರ್ದಿಷ್ಟ ಅವಧಿಯಲ್ಲಿ ಮಾತ್ರ ಸೇವೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ