‘ಸಮಸ್ಯೆ ನೀಗಿಸಲು ಅಧಿಕಾರಿಗಳಲ್ಲಿ ಹೊಂದಾಣಿಕೆ ಅಗತ್ಯ’


Team Udayavani, Jun 23, 2019, 5:00 AM IST

24

ಬೆಳ್ತಂಗಡಿ: ಮಳೆಗಾಲದಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಸಾಕಷ್ಟು ತೊಂದರೆಯಾಗುತ್ತಿದ್ದು, ಈ ಸಮಸ್ಯೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಹಾಗೂ ಅರಣ್ಯ ಇಲಾಖೆಯ ಸಿಬಂದಿ ಹೊಂದಾಣಿಕೆ ಯಿಂದ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಹರೀಶ್‌ ಪೂಂಜ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶನಿವಾರ ಬೆಳ್ತಂಗಡಿ ಮೆಸ್ಕಾಂ ಕಚೇರಿಯಲ್ಲಿ ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆ ದೂರ ಮಾಡುವ ನಿಟ್ಟಿನಲ್ಲಿ ತಾಲೂಕಿ ನಲ್ಲಿ ಮೊದಲ ಬಾರಿಗೆ ಮೆಸ್ಕಾಂನ ಎಂಜಿನಿ ಯರ್‌ಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ಜಂಟಿ ಸಭೆ ನಡೆಸಿದರು.

ತಾಲೂಕಿನ ಬಹುತೇಕ ವಿದ್ಯುತ್‌ ತಂತಿಗಳು ಅರಣ್ಯ ಇಲಾಖೆಯ ಸಂಬಂಧಿಸಿದ ಜಾಗದ ಮೂಲಕ ಹಾದು ಹೋಗಿರುವುದರಿಂದ ಇಲಾಖೆಯ ಸಿಬಂದಿಯ ಹೊಂದಾಣಿಕೆಯ ಕೊರತೆಯಿಂದ ಮರದ ರೆಂಬೆಗಳು ತಂತಿ ಗಳಿಗೆ ತಾಗುತ್ತಿವೆ. ಹೀಗಾಗಿ ಅದರ ತೆರವು ಕಾರ್ಯ ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಪರಸ್ಪರ ಮಾತುಕತೆ ನಡೆಸಬೇಕಿದೆ.

ನಾಲ್ಕು ಇಲಾಖೆ ಸಭೆ
ವಿದ್ಯುತ್‌ ಸಮಸ್ಯೆ, ರಸ್ತೆ ಕಾಮ ಗಾರಿಗಳನ್ನು ಸುಸೂತ್ರವಾಗಿ ನಡೆಸಲು ಮೆಸ್ಕಾಂ, ಅರಣ್ಯ ಇಲಾಖೆಯ ಜತೆಗೆ ಲೋಕೋ ಪಯೋಗಿ, ಪಂಚಾಯತ್‌ರಾಜ್‌ ಎಂಜಿನಿಯರ್‌ಗಳನ್ನೂ ಸೇರಿಸಿ ಸಭೆ ನಡೆಸ ಲಾಗುವುದು. ಜನರಿಗೆ ತೊಂದರೆಯಾಗದ ರೀತಿಯಲ್ಲಿ ಅಧಿಕಾರಿಗಳು ಹೊಂದಾಣಿಕೆ ನಡೆಸಬೇಕು ಎಂದು ಹರೀಶ್‌ ಪೂಂಜ ಸೂಚಿಸಿದರು.

ರೆಂಬೆ ಕಡಿಯಲು ಅನುಮತಿ ಇಲ್ಲ
ವೇಣೂರಿನಲ್ಲಿ ಹೊಸದಾಗಿ ಸಬ್‌ಸ್ಟೇಷನ್‌ ನಿರ್ಮಾಣವಾಗಿದ್ದು, ಅದರಿಂದ ಹೊಸಂಗಡಿ, ಬಡಕೋಡಿ, ಕಾಶಿಪಟ್ಣ ಗ್ರಾಮಗಳ ವಿದ್ಯುತ್‌ ಸಮಸ್ಯೆ ನಿವಾರಣೆ ದೃಷ್ಟಿಯಿಂದ ತಂತಿ ಹಾದುಹೋಗಲು ಮೂಡುಬಿದಿರೆ ರಸ್ತೆಯಲ್ಲಿ ವಿದ್ಯುತ್‌ ಕಂಬಗಳನ್ನು ಅಳವಡಿಸಲಾಗಿದೆ. ಆದರೆ ಪ್ರಸ್ತುತ ರೆಂಬೆ ಕಡಿಯಲು ಅರಣ್ಯ ಇಲಾಖೆ ಅನುಮತಿ ನೀಡದೇ ಇರುವುದರಿಂದ ಕಾಮಗಾರಿ ಅರ್ಧಕ್ಕೆ ನಿಂತಿದೆ ಎಂದು ಮೆಸ್ಕಾಂ ಎಇಇ ಶಿವಶಂಕರ್‌ ಅವರು ಶಾಸಕರ ಗಮನಕ್ಕೆ ತಂದರು.

20 ಕೋ. ರೂ. ಅನುದಾನ
ಪ್ರಸ್ತುತ ಅರಣ್ಯ ಇಲಾಖೆಯ ಅನುಮತಿ ಗಿಂತಲೂ ಮುಖ್ಯವಾಗಿ ಮೆಸ್ಕಾಂ ಲೋಕೋ ಪಯೋಗಿ ಇಲಾಖೆಯ ಅನುಮತಿ ಪಡೆಯ ಬೇಕಿದೆ. ಆ ರಸ್ತೆಯ ಅಭಿವೃದ್ಧಿಗೆ 20 ಕೋ. ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿ ವೇಳೆ ತೊಂದರೆಯಾಗ ಬಾರದು ಎಂದು ಶಾಸಕರು ತಿಳಿಸಿದರು. ಪ್ರಸ್ತುತ ಅಳವಡಿಸಿರುವ ಕಂಬಗಳನ್ನು ರಸ್ತೆಯಿಂದ ಸಾಕಷ್ಟು ದೂರದಲ್ಲಿದೆ ಎಂದು ಎಇಇ ಸಲಹೆ ನೀಡಿದರು.

ಅಪಾಯಕಾರಿ ಮರ ತೆರವು
ಹೆದ್ದಾರಿ ಬದಿ ಹಳೆಕೋಟೆ ವಾಣಿ ಕಾಲೇಜು ಸಮೀಪ ಹಾಗೂ ಧರ್ಮಸ್ಥಳ ರಸ್ತೆಯ ನೀರಚಿಲುಮೆ ಬಳಿ ಇರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಶಾಸಕರು ಸಲಹೆ ನೀಡಿದ್ದು, ಅದರ ಕುರಿತು ಗಮನಿಸಲಾಗುವುದು ಎಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ ಭರವಸೆ ನೀಡಿದರು. ನಾವುಂದ ರಸ್ತೆಯಲ್ಲಿರುವ ಅಪಾಯಕಾರಿ ಮರಗಳ ತೆರವಿನ ಕುರಿತು ಮೆಸ್ಕಾಂ ಹಾಗೂ ಅರಣ್ಯ ಇಲಾಖೆಯವರು ಸ್ಥಳ ಪರಿಶೀಲನೆ ಮಾಡುವಂತೆ ಶಾಸಕರು ತಿಳಿಸಿದರು. ಕೊಕ್ಕಡ ಪೇಟೆ, ಎಂಜಿರ ರಸ್ತೆ ಅಪಾಯಕಾರಿ ಮರಗಳ ತೆರವಿಗೂ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕತ್ತರಿಗುಡ್ಡೆ, ಪೆರಾಲ್ದರಕಟ್ಟೆಯಲ್ಲಿರುವ ಅಪಾಯಕಾರಿ ಮರಗಳ ಕುರಿತು ಸಭೆಯ ಗಮನಕ್ಕೆ ತರಲಾಯಿತು.

ನೀರಿನ ಬರ ತಪ್ಪಿಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಮಳೆ ನೀರು ಇಂಗಿಸುವ ಕುರಿತು ದೊಡ್ಡ ಅಭಿಯಾನ ನಡೆಸುವ ಯೋಚನೆ ಇದ್ದು, ಹೀಗಾಗಿ ಅರಣ್ಯ ಹಾಗೂ ಮೆಸ್ಕಾಂನವರು ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಒಂದೊಂದು ಯೋಜನೆಯನ್ನು ಅನುಷ್ಠಾನಗೊಳಿಸಿ ವರದಿ ನೀಡುವಂತೆ ಶಾಸಕ ಹರೀಶ್‌ ಪೂಂಜ ಅವರು ಸೂಚನೆ ನೀಡಿದರು. ಜತೆಗೆ ಇದೇ ವಿಚಾರವಾಗಿ ಮುಂದೆ ಪಿಡಿಒಗಳ ಸಭೆ ಕರೆಯಲಾಗು ವುದು ಎಂದು ತಿಳಿಸಿದರು.

ನೀರಿಂಗಿಸುವ ಯೋಜನೆ: ಸೂಚನೆ
ನೀರಿನ ಬರ ತಪ್ಪಿಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಮಳೆ ನೀರು ಇಂಗಿಸುವ ಕುರಿತು ದೊಡ್ಡ ಅಭಿಯಾನ ನಡೆಸುವ ಯೋಚನೆ ಇದ್ದು, ಹೀಗಾಗಿ ಅರಣ್ಯ ಹಾಗೂ ಮೆಸ್ಕಾಂನವರು ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಒಂದೊಂದು ಯೋಜನೆಯನ್ನು ಅನುಷ್ಠಾನಗೊಳಿಸಿ ವರದಿ ನೀಡುವಂತೆ ಶಾಸಕ ಹರೀಶ್‌ ಪೂಂಜ ಅವರು ಸೂಚನೆ ನೀಡಿದರು. ಜತೆಗೆ ಇದೇ ವಿಚಾರವಾಗಿ ಮುಂದೆ ಪಿಡಿಒಗಳ ಸಭೆ ಕರೆಯಲಾಗು ವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.