ಯೋಧರಿಗೆ ಭೂಮಿ ನೀಡಲು ಪ್ರಸ್ತಾವನೆ


Team Udayavani, Jun 23, 2019, 3:05 AM IST

yodha

ಬೆಂಗಳೂರು: ದೇಶದ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಹಾಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರ ಕುಟುಂಬ ಸದಸ್ಯರಿಗೆ ಜಮೀನು ಅಥವಾ ನಿವೇಶನ ಹಂಚಿಕೆ ವಿಚಾರವಾಗಿ ಇಲಾಖೆಯಲ್ಲಿ ಅವಕಾಶಗಳಿದ್ದರೆ ಪರಿಶೀಲಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ಹೇಳಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಶನಿವಾರ ಸಂಸ್ಥೆಯ ಸರ್‌ ಎಂ.ವಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ಗಡಿ ಕಾಯ್ದ ಯೋಧರಿಗೆ ಗೌರವ ಸಮರ್ಪಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೈನಿಕರು ಮತ್ತು ನಿವೃತ್ತ ಸೈನಿಕರಿಗೆ ಇಂತಿಷ್ಟು ವರ್ಷಗಳಲ್ಲಿ ನಿವೇಶನ ಅಥವಾ ಜಮೀನು ಹಂಚಿಕೆ ಮಾಡಬೇಕು ಎಂಬ ನಿಯಮಗಳಿವೆ. ಆದರೆ, ಆ ನಿಯಮಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ಬರುತ್ತಿಲ್ಲ. ಯೋಧರು ಮತ್ತು ಅವರ ಕುಟುಂಬದವರು ಅದಕ್ಕಾಗಿ ಕಚೇರಿಗಳಿಗೆ ವರ್ಷಗಟ್ಟಲೆ ಅಲೆದಾಡಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಸೈನಿಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ಕಾಲಮಿತಿಯೊಳಗೆ ಗೌರವಯುತವಾಗಿ ಸಿಗಬೇಕು. ಇದಕ್ಕಾಗಿ, ಚಾಲ್ತಿ ನಿಯಮಗಳಿಗೆ ಇಂದಿನ ಅಗತ್ಯತೆಗಳಿಗೆ ಅನುಗುಣವಾಗಿ ತಿದ್ದುಪಡಿ ತರುವ ಬಗ್ಗೆಯೂ ಆಲೋಚಿಸಬೇಕಾಗಿದೆ.

ಅಲ್ಲದೇ ಸೈನಿಕರು ಮತ್ತು ಯೋಧರ ಕುಟುಂಬದವರಿಗೆ ಜಮೀನು ಅಥವಾ ನಿವೇಶನ ಹಂಚಿಕೆಗೆ ಯಾವುದಾರರೂ ರೂಪದಲ್ಲಿ ನಮ್ಮ ಇಲಾಖೆಯಲ್ಲಿ ಅವಕಾಶಗಳಿದ್ದರೆ, ಆ ಬಗ್ಗೆ ಸರ್ಕಾರದ ಹಂತದಲ್ಲಿ ಪ್ರಸ್ತಾವನೆ ಸಲ್ಲಿಸಲು ಸಿದ್ಧ ಎಂದು ಖಾದರ್‌ ಹೇಳಿದರು.

ಕಾರ್ಪಸ್‌ ನಿಧಿಗೆ ನೆರವು: ದೇಶ ಬಲಿಷ್ಠವಾಗಬೇಕಾದರೆ ಆರ್ಥಿಕತೆ ಮತ್ತು ಸೇನೆ ಬಲಿಷ್ಠವಾಗಿರಬೇಕು. ವಾಣಿಜ್ಯ ಮತ್ತು ಕೈಗಾರಿಕಾ ವಿಷಯಗಳನ್ನು ನೋಡಿಕೊಳ್ಳುವ ಎಫ್ಕೆಸಿಸಿಐ ಯೋಧರಿಗೆ ಗೌರವ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಪೂರ್ವ ಸಂಗಮವಾಗಿದೆ.

ಈ ಕಾರ್ಯಕ್ರಮ ನಿರಂತರವಾಗಿ ನಡೆದು ಇತರ ಸಂಘ-ಸಂಸ್ಥೆಗಳು ಮತ್ತು ಬೇರೆ ರಾಜ್ಯಗಳಿಗೂ ಮಾದರಿಯಾಗಬೇಕು. ಇದಕ್ಕಾಗಿ, ಸರ್ಕಾರದಿಂದ ಸಹಕಾರ ನೀಡಲು ಸಿದ್ಧ. ಯೋಧರ ಗೌರವ ಸಮರ್ಪಣೆ ಕಾರ್ಯಕ್ರಮಕ್ಕೆ ಎಫ್ಕೆಸಿಸಿಐ ನಿಗದಿತ ಮೊತ್ತದ “ಕಾರ್ಪಸ್‌ ನಿಧಿ’ ಸ್ಥಾಪಿಸಿದರೆ ಸರ್ಕಾರದಿಂದ ಅಷ್ಟೇ ಮೊತ್ತದ ನೆರವು ನೀಡುವ ಕುರಿತು ಮುಖ್ಯಮಂತ್ರಿ ಜತೆಗೆ ಚರ್ಚಿಸುತ್ತೇನೆ ಎಂದು ಖಾದರ್‌ ಭರವಸೆ ನೀಡಿದರು.

ಯೋಧರಿಗೆ ಗೌರವ ಅರ್ಪಣೆ: ಕಾರ್ಗಿಲ್‌ ಯುದ್ದದಲ್ಲಿ ದೇಶಕ್ಕಾಗಿ ಹೋರಾಟ ಮಾಡಿದ ಕ್ಯಾಪ್ಟನ್‌ ನವೀನ್‌ ನಾಗಪ್ಪ, ಇತ್ತಿಚಿಗೆ ನಡೆದ ಪುಲ್ವಾಮ ದಾಳಿಯಲ್ಲಿ ಹುತಾತ್ಮನಾದ ಜವಾನ್‌ ಎಚ್‌. ಗುರು ಸೇರಿದಂತೆ ಸೈನಿಕರು ಮತ್ತು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಕ್ಯಾ. ನವೀನ್‌ ನಾಗಪ್ಪ ಅವರು ಕಾರ್ಗಿಲ್‌ ಯುದ್ದದ ಅನುಭವಗಳನ್ನು ಹಂಚಿಕೊಂಡರು.

ಎಫ್ಕೆಸಿಸಿಐ ಅಧ್ಯಕ್ಷ ಸುಧಾರರ್‌ ಎಸ್‌. ಶೆಟ್ಟಿ, ಚುನಾಯಿತ ಹಿರಿಯ ಉಪಾಧ್ಯಕ್ಷ ಪೆರಿಕಲ್‌ ಎಂ. ಸುಂದರ್‌, ಸದಸ್ಯತ್ವ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ. ಬಿ. ಅಮರನಾಥ್‌, ನಿಕಟಪೂರ್ವ ಅಧ್ಯಕ್ಷ ಕೆ. ರವಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.