ಚುರುಕುಗೊಂಡ ಮಹಾಲಿಂಗಪುರ ತಾಲೂಕು ಹೋರಾಟ

24ರಂದು ಬೆಂಗಳೂರಿಗೆ ತೆರಳಲಿರುವ ಹೋರಾಟ ಸಮಿತಿ ನಿಯೋಗ

Team Udayavani, Jun 23, 2019, 9:26 AM IST

bk-tdy-3..

ಮಹಾಲಿಂಗಪುರ: ಪಟ್ಟಣವನ್ನು ತಾಲೂಕಾ ಕೇಂದ್ರವನ್ನಾಗಿಸಲು ಆಗ್ರಹಿಸಿ ಸಿಎಂಗೆ ಬರೆದ ಮನವಿ ಪತ್ರದೊಂದಿಗೆ ಮಹಾಲಿಂಗಪುರ ತಾಲೂಕಾ ಹೋರಾಟ ಸಮಿತಿ ನಿಯೋಗದ ಸದಸ್ಯರು.

ಮಹಾಲಿಂಗಪುರ: ಪಟ್ಟಣವನ್ನು ತಾಲೂಕಾ ಕೇಂದ್ರವನ್ನಾಗಿ ಘೋಷಿಸಲು ಆಗ್ರಹಿಸಿ ಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರಿಗೆ ಮನವಿ ಸಲ್ಲಿಸಲು ತಾಲೂಕಾ ಹೋರಾಟ ಸಮಿತಿ ನಿಯೋಗ ಜೂ. 24ರಂದು ಬೆಂಗಳೂರಿಗೆ ತೆರಳಲಿದೆ ಎಂದು ಮಹಾಲಿಂಗಪುರ ತಾಲೂಕಾ ಹೋರಾಟ ಸಮಿತಿ ಅಧ್ಯಕ್ಷ ಮಹಾಲಿಂಗಪ್ಪ ಕೋಳಿಗುಡ್ಡ ಹೇಳಿದರು.

ಎಪಿಎಂಸಿ ವರ್ತಕರ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಪೂರ್ವದಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ಕಂದಾಯ ಸಚಿವರಿಗೆ ನಿಯೋಗವು ಭೇಟಿಯಾಗಿ ಮಹಾಲಿಂಗಪುರವನ್ನು ತೇರದಾಳ ತಾಲೂಕಿನಲ್ಲಿ ಸೇರಿಸಿದ್ದಕ್ಕೆ ನಮ್ಮ ವಿರೋಧವಿದೆ. ಜಮಖಂಡಿ ತಾಲೂಕಿನಲ್ಲಿ ರಬಕವಿ-ಬನಹಟ್ಟಿ, ತೇರದಾಳ ತಾಲೂಕನ್ನಾಗಿ ಘೋಷಿಸಿರುವುದರಿಂದ ಅದೇ ಮಾದರಿಯಲ್ಲಿ ಮುಧೋಳ ತಾಲೂಕಿನ ಹಲವು ಹಳ್ಳಿಗಳನ್ನು ಸೇರಿಸಿ ಮಹಾಲಿಂಗಪುರವನ್ನು ತಾಲೂಕಾಗಿ ಘೋಷಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದ್ದೇವೆ ಎಂದರು.

ಈಗ ಮತ್ತೆ ನಿಯೋಗದೊಂದಿಗೆ ತೆರಳಿ ಸಿಎಂ ಮತ್ತು ಸಂಬಂಧಿಸಿದ ಇಲಾಖೆಗಳ ಸಚಿವರಿಗೆ ಮನವಿ ಸಲ್ಲಿಸಿ ಮಹಾಲಿಂಗಪುರ ತಾಲೂಕಾ ಕೇಂದ್ರವಾಗುವರೆಗೂ ಪಕ್ಷಾತೀತ ಹೋರಾಟಕ್ಕೆ ನಿರ್ಧರಿಸಲಾಗಿದೆ ಎಂದರು.

ವಿವಿಧ ಪಕ್ಷಗಳ ಮುಖಂಡರಾದ ಎಸ್‌.ಎಂ.ಉಳ್ಳೇಗಡ್ಡಿ, ಚನಬಸು ಹುರಕಡ್ಲಿ, ಧರೆಪ್ಪ ಸಾಂಗಲಿಕರ, ಸೈದಾಪುರ ಗ್ರಾಪಂ ಅಧ್ಯಕ್ಷ ಮಹಾಲಿಂಗಪ್ಪ ಸನದಿ, ಸಿದ್ದು ಶಿರೋಳ, ಜಯರಾಮಶೆಟ್ಟಿ ಮಾತನಾಡಿ, ಮಹಾಲಿಂಗಪುರವನ್ನು ತೇರದಾಳ ತಾಲೂಕಿನಲ್ಲಿ ಸೇರಿಸಿದ್ದರಿಂದಾಗಿ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಮುಧೋಳ, ರಬಕವಿ-ಬನಹಟ್ಟಿ, ತೇರದಾಳ ಮೂರು ತಾಲೂಕಿಗೆ ಅಲೆದಾಡುವಂತಾಗಿದೆ. ಪಟ್ಟಣವನ್ನು ತಾಲೂಕಾ ಕೇಂದ್ರವನ್ನಾಗಿಸಲು 26 ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸಹ ಒಗ್ಗಟ್ಟು ಮತ್ತು ಇಚ್ಛಾಶಕ್ತಿಯ ಕೊರತೆಯಿಂದ ಹಿನ್ನಡೆಯಾಗಿದೆ. ಈ ಬಾರಿ ಮಾತ್ರ ತಾಲೂಕಾ ಕೇಂದ್ರ ಆಗುವರೆಗೂ ಹೋರಾಟ ನಿರಂತರವಾಗಿ ಮತ್ತು ಪಕ್ಷಾತೀತವಾಗಿ ಮಾಡೋಣ. ಇದಕ್ಕೆ ಮಹಾಲಿಂಗಪುರ ಮತ್ತು ಸುತ್ತಮುತ್ತಲಿನ 9 ಗ್ರಾಮಗಳ ಜನರು ಒಗ್ಗಟ್ಟಾಗಿ ಹೋರಾಟಕ್ಕೆ ಸಹಕಾರ ನೀಡಬೇಕು ಎಂದರು.

ಬಿಜೆಪಿ ಗ್ರಾಮೀಣ ಘಟಕದ ಅದ್ಯಕ್ಷ ಬಸನಗೌಡ ಪಾಟೀಲ, ಜೆಡಿಎಸ್‌ ತೇರದಾಳ ಮತಕ್ಷೇತ್ರದ ಅಧ್ಯಕ್ಷ ನಿಂಗಪ್ಪ ಬಾಳಿಕಾಯಿ, ಲಯನ್ಸ ಕ್ಲಬ್‌ ಅಧ್ಯಕ್ಷ ಗೋವಿಂದಪ್ಪ ನಿಂಗಸಾನಿ, ದಲಾಲ ವರ್ತಕರಾದ ಚಂದ್ರು ಗೊಂದಿ, ಮಹಾಲಿಂಗಪ್ಪ ನುಚ್ಚಿ, ಗುರುಲಿಂಗಪ್ಪ ಹುಬ್ಬಳ್ಳಿ, ವಿನೋದ ಚಮಕೇರಿ, ವಿಜಯ ಬಾಡನವರ, ಪುರಸಭೆ ಮಾಜಿ ಅಧ್ಯಕ್ಷ ಪ್ರಕಾಶ ಅರಳಿಕಟ್ಟಿ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.