ಮಹಾಲಕ್ಷ್ಮೀ-ಕರಗಾಂವ ಏತ ನೀರಾವರಿ ಶೀಘ್ರ ಆರಂಭ: ಡಿಕೆಶಿ
Team Udayavani, Jun 23, 2019, 9:45 AM IST
ಚಿಕ್ಕೋಡಿ: ಮಹಾಲಕ್ಷ್ಮೀ ಮತ್ತು ಕರಗಾಂವ ಏತ ನೀರಾವರಿ ಯೋಜನೆಗೆ ಅನುದಾನ ಬಿಡುಗಡೆ ಮಾಡಬೇಕೆಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಸಚಿವ ಡಿ.ಕೆ.ಶಿವಕುಮಾರಗೆ ಮನವಿ ಮಾಡಿದರು.
ಚಿಕ್ಕೋಡಿ: ತಾಲೂಕಿನ ರೈತರ ಬಹುದಿನಗಳ ಬೇಡಿಕೆಯಾದ ಮಹಾಲಕ್ಷ್ಮೀ ಮತ್ತು ಕರಗಾಂವ ಏತ ನೀರಾವರಿ ಯೋಜನೆಗೆ ಶೀಘ್ರ ಅನುದಾನ ಒದಗಿಸಿ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಭರವಸೆ ನೀಡಿದರು.
ನಗರಕ್ಕೆ ಶನಿವಾರ ಆಗಮಿಸಿದ ವೇಳೆಯಲ್ಲಿ ಪ್ರವಾಸಿ ಮಂದಿರದಲ್ಲಿ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹಾಗೂ ಹಿರಿಯ ಧುರೀಣ ಬಿ.ಆರ್.ಸಂಗಪ್ಪಗೋಳ ಅವರ ಮನವಿಗೆ ಸ್ಪಂದಿಸಿ ಅವರು ಮಾತನಾಡಿದರು.
ಸಂಗಪ್ಪಗೋಳ ಮಾತನಾಡಿ, ಚಿಕ್ಕೋಡಿ ತಾಲೂಕಿನ ಪಶ್ಚಿಮ ಭಾಗದ 16 ಹಳ್ಳಿಗಳಿಗೆ ನೀರಾವರಿ ಯೋಜನೆ ಕಲ್ಪಿಸುವ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈಗಾಗಲೇ ಈ ಯೋಜನೆಗೆ ಸರ್ವೇ ಕಾರ್ಯ ಮುಕ್ತಾಯವಾಗಿ ನೀರಿನ ಹಂಚಿಕೆಯಾಗಿದೆ. 375 ಕೋಟಿ ಅನುದಾನ ಬಿಡುಗಡೆ ಮಾತ್ರ ಬಾಕಿ ಉಳಿದುಕೊಂಡಿದೆ. ಕೂಡಲೇ ಸಚಿವರು ಈ ಯೋಜನೆಗೆ ಹೆಚ್ಚಿನ ಗಮನ ಹರಿಸಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ಮುಖ್ಯಸಚೇತಕ ಗಣೇಶ ಹುಕ್ಕೇರಿ, ರಾಯಬಾಗ ಶಾಸಕ ದುರ್ಯೋಧನ ಐಹೋಳೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಕಲ್ಲಪ್ಪ ಮಗೇನ್ನವರ, ಎಚ್.ಎಸ್.ನಸಲಾಪೂರೆ, ರವೀಂದ್ರ ಮಿರ್ಜೆ, ಅನೀಲ ಪಾಟೀಲ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ