ಮಾನವೀಯತೆ ಬೆಳೆಸಿಕೊಳ್ಳಲು ಸಲಹೆ

ಮಾತೃಭಾಷೆಗೆ ಹೆಚ್ಚು ಒತ್ತು ಕೊಡಿ•ಎಸ್ಸೆಸ್ಸೆಲ್ಸಿ-ಪಿಯು ಪ್ರತಿಭಾವಂತರಿಗೆ ಪುರಸ್ಕಾರ

Team Udayavani, Jun 23, 2019, 10:33 AM IST

23–June-7

ಮುದ್ದೇಬಿಹಾಳ: ಸಂಯುಕ್ತ ಕಾರ್ಯಕ್ರಮ ವೇದಿಕೆಯನ್ನು ಸ್ವಾಮೀಜಿಗಳು ಉದ್ಘಾಟಿಸಿದರು.

ಮುದ್ದೇಬಿಹಾಳ: ಜಗತ್ತಿನಲ್ಲಿ ಮಾನವೀಯತೆಗೆ ಕೊರತೆ ಇಲ್ಲ. ಆದರೆ ಆಧುನಿಕ ಜನರಲ್ಲಿ ಮಾನವೀಯತೆಗೆ ಮುಸುಕು ಕವಿದಿದೆ. ಈ ಮುಸುಕನ್ನು ಸರಿಸುವ ಕೆಲಸ ವನ್ನು ಶಿಕ್ಷಣ ಸಂಸ್ಥೆಗಳು, ಮಠಾಧೀಶರು ಮಾಡಬೇಕು ಎಂದು ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ಹೇಳಿದರು.

ಮುದ್ದೇಬಿಹಾಳ ಪಟ್ಟಣದ ಹೊರ ವಲಯದಲ್ಲಿರುವ ಕುಂಟೋಜಿ ಗ್ರಾಮ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾದ ಬೆಸ್ಟ್‌ ಘನಮಠೇಶ್ವರ ಪಬ್ಲಿಕ್‌ ಶಾಲೆ ಕಟ್ಟಡ ಲೋಕಾರ್ಪಣೆ, ಸ್ಮಾರ್ಟ್‌ ಕ್ಲಾಸ್‌ ಉದ್ಘಾಟನೆ ಮತ್ತು ತಾಲೂಕಿನ ಸಜ್ಜನ, ಗಾಣಿಗ ಸಮಾಜದ ಎಸ್ಸೆಸ್ಸೆಲ್ಸಿ , ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಂಯುಕ್ತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಧಕರೆಲ್ಲ ಬಡತನದಲ್ಲೇ ಹುಟ್ಟಿ ಬೆಳೆದವರು. ಇವರಲ್ಲಿ ಪ್ರಯತ್ನಶೀಲತೆ ಹೆಚ್ಚಿರುತ್ತದೆ. ಮಾತೃಭಾಷೆಗೆ ನಾವೆಲ್ಲ ಹೆಚ್ಚು ಒತ್ತು ಕೊಡಬೇಕು. ಇದರೊಂದಿಗೆ ಉಳಿದ ಭಾಷೆಗಳಿಗೂ ಮಹತ್ವ ಕೊಡಬೇಕು. ಮಾತೃಭಾಷೆ ಊಟವಾದರೆ, ಉಳಿದ ಭಾಷೆ ಉಪ್ಪಿನಕಾಯಿಯಂತಿರಬೇಕು. ಉಳಿದ ಭಾಷೆಗಳೇ ಉಟದಂತಾಗಬಾರದು. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ತರಗತಿ ಪ್ರಾರಂಭಿಸುವ ಮೂಲಕ ಈಗಿನ ಸರ್ಕಾರ ಖಾಸಗಿ ಶಾಲೆಗಳಿಂದ ಪಾಠ ಕಲಿತಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷಗಳಲ್ಲಿ ದೇಶದಲ್ಲಿ ಸಾಕಷ್ಟು ಬದಲಾವಣೆ ತರಲಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್‌.ಎಸ್‌. ಪಾಟೀಲ ಕೂಚಬಾಳ, ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ನೇತೃತ್ವ ವಹಿಸಿದ್ದ ಸಂತೆಕೆಲ್ಲೂರು ಘನಮಠೇಶ್ವರ ಮಠದ ಗುರುಬಸವ ಮಹಾಸ್ವಾಮಿಗಳು ಮಾತನಾಡಿದರು.

ಉತ್ನಾಳದ ಶಿವಪುತ್ರಯ್ಯ ಮಹಾಸ್ವಾಮಿಗಳು, ಕೆಸರಟ್ಟಿಯ ಸೋಮಲಿಂಗ ಮಹಾರಾಜರು ಸಾನ್ನಿಧ್ಯ, ಮಾಜಿ ಶಾಸಕ ಎಂ.ಎಂ. ಸಜ್ಜನ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ಉಮೇಶ ಕೋಳಕೂರ, ಕಸಾಪ ಅಧ್ಯಕ್ಷ ಎಂ.ಬಿ.ನಾವದಗಿ, ತಹಸೀಲ್ದಾರ್‌ ನಿಂಗಪ್ಪ ಬಿರಾದಾರ, ಬಿಇಒ ಎಸ್‌.ಡಿ. ಗಾಂಜಿ, ಇಳಕಲ್ ಡೈಟ್ ಹಿರಿಯ ಉಪನ್ಯಾಸಕ ಎಂ.ಎಂ. ಬೆಳಗಲ್ಲ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸಂಗಮೇಶ ಹೊಲ್ದೂರ, ಗಣ್ಯರಾದ ಡಾ| ಬಸವರಾಜ ಅಸ್ಕಿ, ಮಲಕೇಂದ್ರಗೌಡ ಪಾಟೀಲ, ಸಿ.ಪಿ. ಸಜ್ಜನ, ವಾಸುದೇವ ಹೆಬಸೂರ, ಬಸವರಾಜ ಯಂಕಂಚಿ, ಪ್ರಭುಗೌಡ ಪಾಟೀಲ ಅಸ್ಕಿ, ಎಸ್‌.ಎಂ. ದೇಗಿನಾಳ, ಎಸ್‌.ಬಿ. ಚಲವಾದಿ, ಬಸವರಾಜ ಚಲವಾದಿ, ಸಂಗನಗೌಡ ಪಾಟೀಲ, ಬಿ.ಜಿ. ಸಜ್ಜನ, ಬಸವಂತ್ರಾಯ ಸಜ್ಜನ, ಬಸವರಾಜ ಅಸ್ಕಿ, ಶರಣಗೌಡ ಬಿರಾದಾರ, ರಮೇಶಗೌಡ ವಡ್ಡೊಡಗಿ, ಕಾಶೀನಾಥ ಕೊಣ್ಣೂರ, ರಾವತ್‌ ದೇಸಾಯಿ, ಮಡಿವಾಳಪ್ಪ ಅಂಬಳನೂರ, ಬಸವಂತ್ರಾಯ ದೇಸಾಯಿ, ಸಿಆರ್‌ಸಿ ದಮ್ಮೂರಮಠ, ಶಾಲೆಯ ಮುಖ್ಯಾಧ್ಯಾಪಕಿಯರಾದ ರೇಖಾ ಬಾರಕೇರ, ದೀಪಾ ದೇಸಾಯಿ ವೇದಿಕೆಯಲ್ಲಿದ್ದರು.

ಸಂಸ್ಥೆ ಅಧ್ಯಕ್ಷ ಎಸ್‌.ಎಂ. ಸಜ್ಜನ ಮತ್ತು ಮುಖ್ಯಾಧ್ಯಾಪಕಿ ಅನಿತಾ ಸಜ್ಜನ ದಂಪತಿಯನ್ನು ಬೆಕಿನಾಳ, ಕಲಕೇರಿ, ಬೂದಿಹಾಳ ಗ್ರಾಮಸ್ಥರು, ತಾಳಿಕೋಟೆ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತ್ಯೇಕವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ , ಪಿಯುಸಿಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ ಸಜ್ಜನ, ಗಾಣಿಗ ಸಮಾಜದ ಹಾಗೂ ಘನಮೇಶ್ವರ ಸಮೂಹ ಶಿಕ್ಷಣ ಸಂಸ್ಥೆ ಅಡಿ ನಡೆಯುವ ವಿವಿಧ ತರಗತಿಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಘನಮಠೇಶ್ವರ ಪಬ್ಲಿಕ್‌ ಶಾಲೆ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಂಸ್ಥೆ ಅಧ್ಯಕ್ಷ ಎಸ್‌.ಎಂ. ಸಜ್ಜನ ಸ್ವಾಗತಿಸಿದರು. ಎಸ್‌.ಎಂ. ಗಾಣಿಗೇರ ನಿರೂಪಿಸಿದರು. ಎಂ.ಎಸ್‌. ಮಿರಜಕರ ವಂದಿಸಿದರು.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.