ರಾಜಕಾಲುವೆ, ಕೆರೆಕಟ್ಟೆ, ಕೋಡಿ ದುರಸ್ತಿ ಮಾಡಿ

ಸೋಮಾಂಬುಧಿ ಅಗ್ರಹಾರ ಕೆರೆಗೆ ಸ್ವೀಕರ್‌ ರಮೇಶ್‌ಕುಮಾರ್‌ ಭೇಟಿ • ಜಾಲಿ, ಒತ್ತುವರಿ ತೆರವಿಗೆ ಸೂಚನೆ

Team Udayavani, Jun 23, 2019, 12:58 PM IST

kolar-tdy-1..

ಕೋಲಾರ ತಾಲೂಕಿನ ಸೋಮಾಂಬುಧಿ ಅಗ್ರಹಾರ ಕೆರೆಗೆ ಕೆ.ಸಿ. ವ್ಯಾಲಿ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಸ್ವೀಕರ್‌ ರಮೇಶ್‌ಕುಮಾರ್‌, ಕಟ್ಟೆ, ಕೋಡಿ ದುರಸ್ತಿ ಪರಿಶೀಲಿಸಿದರು.

ಕೋಲಾರ: ತಾಲೂಕಿನ ದೊಡ್ಡ ಕೆರೆಯಾಗಿರುವ ಸೋಮಾಂಬುಧಿ ಅಗ್ರಹಾರ ಕೆರೆಯ ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ, ಕೆರೆಯ ಕೋಡಿ, ಕಟ್ಟೆ ದುರಸ್ತಿ ಕಾರ್ಯವನ್ನು ಶೀಘ್ರ ಮುಗಿಸಿ ಎಂದು ಕೆ.ಸಿ. ವ್ಯಾಲಿ ಕಾಮಗಾರಿ ವಹಿಸಿಕೊಂಡಿರುವ ಮೆಘಾ ಕನ್‌ಸ್ಟ್ರಕ್ಷನ್‌ ಕಂಪನಿ ಎಂಡಿಗೆ ಸ್ವೀಕರ್‌ ರಮೇಶ್‌ಕುಮಾರ್‌ ಸೂಚನೆ ನೀಡಿದರು.

ತಾಲೂಕಿನ ಸೋಮಾಂಬುಧಿ ಅಗ್ರಹಾರ ಕೆರೆಗೆ ಶನಿವಾರ ಅಧಿಕಾರಿಗಳೊಂದಿಗೆ ಆಗಮಿಸಿದ್ದ ರಮೇಶ್‌ಕುಮಾರ್‌, ಈ ಕೆರೆಗೆ ನೀರು ಬಂದು ಹಲವು ವರ್ಷಗಳೇ ಉರುಳಿರುವುದರಿಂದ ಇದರ ಕೋಡಿ ಮತ್ತು ಕಟ್ಟೆ ದುರಸ್ತಿಗೆ ಕ್ರಮವಹಿಸಲು ಸೂಚಿಸಿದರು. ರಾಜಕಾಲುವೆಯನ್ನು ಇಂದೇ ಸರಿಪಡಿಸಿ, ನೀರು ಸರಾಗವಾಗಿ ಹರಿಯುವಂತೆ ಮಾಡಿ, ನಂತರ ನೀರು ಹೆಚ್ಚಾದರೆ ಈ ಕೆಲಸ ಮಾಡಲು ಆಗುವುದಿಲ್ಲ ಎಂದು ಹೇಳಿದರು. ರಾಜಕಾಲುವೆಯಲ್ಲಿ ಮರಳಿಗಾಗಿ 15 ಅಡಿ ಆಳದ ಗುಂಡಿಗಳನ್ನು ತೋಡಿರುವುದರಿಂದ ನೀರು ಹರಿಯದೇ ಅಲ್ಲೇ ನಿಲ್ಲುತ್ತಿದ್ದು, ಕೆರೆಯಂಗಳಕ್ಕೆ ಬರುತ್ತಿಲ್ಲ, ಇದನ್ನು ಮೊದಲು ಸರಿಪಡಿಸಲು ಸೂಚಿ ಸಿದ ಅವರು, ನಮ್ಮ ಕಡೆ ನೀರು ಬರಲು ಒಂದು ತಿಂಗಳು ತಡವಾದರೂ ಪರವಾಗಿಲ್ಲ, ಈ ಕೆರೆ ಭರ್ತಿ ಯಾದ ನಂತರ ಕೋಡಿ ಹರಿಯಲಿ, ಈ ದೊಡ್ಡ ಕೆರೆ ತುಂಬಿದರೆ ಈ ಭಾಗದ ಕನಿಷ್ಠ 10 ಕಿ.ಮೀ. ವ್ಯಾಪ್ತಿ ಯಲ್ಲಿ ಅಂತರ್ಜಲ ವೃದ್ಧಿಯಾಗಿ ರೈತರ ಬದುಕು ಹಸನಾಗಲಿದೆ ಎಂದು ಅಭಿಪ್ರಾಯಪಟ್ಟರು.

ಜಾಲಿಗಿಡ ನಾಶ, ಒತ್ತುವರಿ ತೆರವು: ನೆರಳು, ಹಣ್ಣು ನೀಡಲ್ಲ, ಪ್ರಾಣಿಗಳಿಗೆ ಮೇವು ಆಗಲ್ಲ, ಇಂತಹ ದರಿದ್ರ ಜಾಲಿಯನ್ನು ಕೆರೆಗಳಿಗೆ ಯಾರು ತಂದು ಹಾಕಿದರೋ ಎಂದು ಬೇಸರ ವ್ಯಕ್ತಪಡಿಸಿದ ಅವರು, ಯಾರ ಅನು ಮತಿಯೂ ಬೇಕಾಗಿಲ್ಲ. ಜೆಸಿಬಿ ಮೂಲಕ ಒಂದು ಕಡೆ ಎಳೆದು ತಂದು ಬೆಂಕಿ ಹಾಕಿ ಸುಟ್ಟುಬಿಡಿ ಎಂದು ಸೂಚಿಸಿದರು.

ಕೆರೆಯ ಗಡಿ ಗುರುತಿಸಿ ಒತ್ತುವರಿಯಾಗಿದ್ದರೆ ತೆರವುಗೊಳಿಸಿ ಮತ್ತೆ ಒತ್ತುವರಿಯಾಗದಂತೆ ಟ್ರಂಚ್ ಹೊಡೆಯಲು ಸೂಚಿಸಿದರು.ಕೆರೆ ಅಭಿವೃದ್ಧಿ ಕಾಮ ಗಾರಿಗೆ ಸಂಬಂಧಿಸಿದಂತೆ ಯಾರ ಅನುಮತಿಯೂ ಅಗತ್ಯವಿಲ್ಲ, ಮೆಘಾ ಕನ್ಸ್‌ಟ್ರಕ್ಷನ್‌ ಕಂಪನಿ ಎಂಡಿ ಸುಭಾಷ್‌ ಅವರಿಗೆ ಯಾವುದೇ ಸಲಹೆ, ಸಹಕಾರ ಬೇಕಿದ್ದರೆ ಕೆ.ಸಿ. ವ್ಯಾಲಿ ಸಹಾಯಕ ಕಾರ್ಯಪಾಲಕ ಅಭಿಯಂತರ ಕೃಷ್ಣಪ್ಪ ಸಹಕರಿಸುವರು ಎಂದರು.

ಕಾಮಗಾರಿಗೆ ಅನುಮತಿ ಅಗತ್ಯವಿಲ್ಲ, ನೀವೇ ಒಪ್ಪಿಗೆ ನೀಡಿ ಅನುದಾನ ನೀಡಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜಕಾಲುವೆ ದುರಸ್ತಿ: ಸ್ವೀಕರ್‌ ರಮೇಶ್‌ಕುಮಾರ್‌ ಸೂಚನೆಯಂತೆ ಜೆಸಿಬಿಗಳ ಮೂಲಕ ರಾಜಕಾಲುವೆ ಸರಿಪಡಿಸುತ್ತಿದ್ದಂತೆ ಕೆ.ಸಿ. ವ್ಯಾಲಿ ನೀರು ಅಗ್ರಹಾರ ಕೆರೆಯ ಕಟ್ಟೆ, ಕೋಡಿಯ ಕಡೆಗೆ ಹರಿದಾಗ ಅಲ್ಲಿದ್ದವರ ಸಂತಸಕ್ಕೆ ಪಾರವಿಲ್ಲದಾಯಿತು. ಈ ಸಂದರ್ಭದಲ್ಲಿ ಮೆಘಾ ಕನ್‌ಸ್ಟ್ರಕ್ಷನ್‌ ಕಂಪನಿ ಎಂಡಿ ಸುಭಾಷ್‌, ಕೆ.ಸಿ. ವ್ಯಾಲಿ ಎಇಇ ಕೃಷ್ಣಪ್ಪ, ಸಣ್ಣ ನೀರಾವರಿ ಎಇಇ ಬೈರಾ ರೆಡ್ಡಿ, ಕೋಲಾರ ಹಾಲು ಒಕ್ಕೂಟದ ನಿರ್ದೇಶಕ ಹನು ಮೇಶ್‌, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಾದ ಮಂಗಲ ಮಂಜುನಾಥ್‌, ಮುಖಂಡರಾದ ಭೂಪತಿ ಗೌಡ, ನಾಗಪ್ಪ, ಮಂಜು ನಾಥ್‌, ಸಾದೇಗೌಡ, ರಮೇಶ್‌, ಬೈರೇಗೌಡ, ರಾಜಪ್ಪ ಮತ್ತಿತರರಿದ್ದರು.

ತಡೆ ತೆರವಿಗೆ ಜೀವ ಬಿಗಿಹಿಡಿದು ಕಾಯ್ತಿದ್ದೆ:

ಬರ, ಅಂತರ್ಜಲ ಕೊರತೆ, ಕೊಳವೆ ಬಾವಿಗಳು ಬತ್ತಿಹೋಗಿದ್ದು, ನಮ್ಮ ರೈತರ ಬದುಕು ನರಕವಾಗಿತ್ತು. ಇಂತಹ ಸಂದರ್ಭದಲ್ಲಿ ಕೆ.ಸಿ. ವ್ಯಾಲಿಗೆ ಮಹಾನುಭಾವರು ತಡೆ ತಂದಿದ್ದರು ಎಂದು ಸ್ಪೀಕರ್‌ ರಮೇಶ್‌ಕುಮಾರ್‌ ನೊಂದು ನುಡಿದರು. ಸುಪ್ರೀಂಕೋರ್ಟ್‌ನಲ್ಲಿ ನಾನು ಸ್ವೀಕರ್‌ ಎಂದು ಯಾರೂ ಗುರುತಿಸುವುದಿಲ್ಲ, ಅಲ್ಲಿ ವಕೀಲರು, ಸಾಕ್ಷಿಗಳೇ ಅಂತಿಮ. ಇಂತಹ ಸಂದರ್ಭದಲ್ಲಿ ತಡೆಯಾಜ್ಞೆ ತೆರವಿನ ಆದೇಶ ಬರುವವರೆಗೂ ಜೀವ ಬಿಗಿಹಿಡಿದು ಕಾಯುತ್ತಿದ್ದೆ ಎಂದು ಆ ಸಂದರ್ಭವನ್ನು ಸ್ಮರಿಸಿದರು. ಈಗ 240 ಎಂಎಲ್ಡಿ ನೀರು ಹರಿಯುತ್ತಿದ್ದು, ಹೆಚ್ಚುವರಿಯಾಗಿ ನೀರು ಬಿಡಲು ಕ್ರಮವಹಿಸಬೇಕಾಗಿದೆ. ಕೆರೆಗಳು ಭರ್ತಿಯಾದರೆ ಅಂತರ್ಜಲ ವೃದ್ಧಿಯಾಗುತ್ತದೆ, ರೈತರು ಯಾವುದೇ ಕಾರಣಕ್ಕೂ ನೇರವಾಗಿ ಕೃಷಿಗೆ ನೀರು ಬಳಸಬಾರದು ಎಂದು ಹೇಳಿದರು.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.