ಸಮಾನಾಂತರ ಜಲಾಶಯಕ್ಕೆ ಇದೇ ವರ್ಷ ಅಡಿಗಲ್ಲಿಗೆ ಯತ್ನ

ನೀರಿನ ವಿಚಾರವಾಗಿ ಬಾದರ್ಲಿ ರೈತರ ದಾರಿ ತಪ್ಪಿಸುವುದು ಸರಿಯಲ್ಲ: ಸಚಿವ ನಾಡಗೌಡ

Team Udayavani, Jun 23, 2019, 1:12 PM IST

Udayavani Kannada Newspaper

ಸಿಂಧನೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಜೂ.26ರಂದು ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸುತ್ತಿದ್ದು, ಆಗ ಅವರಿಂದಲೇ ನವಲಿ ಬಳಿಯ ಸಮಾನಾಂತರ ಜಲಾಶಯ ನಿರ್ಮಾಣ ಕುರಿತು ಘೋಷಣೆ ಮಾಡಿಸಿ ಇದೇ ವರ್ಷ ಡಿಪಿಆರ್‌ ತಯಾರಿಸಿ, ಹಣಕಾಸು ಇಲಾಖೆಯಿಂದ ಅನುಮತಿ ಪಡೆದು ಅಡಿಗಲ್ಲು ಹಾಕಿಸುವ ಕೆಲಸ ಮಾಡಿಸುತ್ತೇನೆ ಜಂದು ಮೀನುಗಾರಿಕೆ ಮತ್ತು ಪಶು ಸಂಗೋಪನೆ ಖಾತೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ನಗರದ ತಮ್ಮ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇನ್ನು ನವಲಿ ಬಳಿ ಸಮಾನಾಂತರ ಜಲಾಶಯ ಹಾಗೂ ಪ್ಲಡ್‌ ಫ್ಲೋ ಕೆನಾಲ್ ಕುರಿತು ಸಿದ್ದರಾಮಯ್ಯ ಸರ್ಕಾರದಲ್ಲಿ ಡಿಪಿಆರ್‌ ಆಗಿದೆ ಎಂದು ಬಾದರ್ಲಿ ಹೇಳುತ್ತಿದ್ದಾರೆ. ಅದರಲ್ಲಿ ಫ್ಲಡ್‌ ಫ್ಲೋ ಕೆನಾಲ್ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ಈ ಮೈತ್ರಿ ಸರ್ಕಾರದಲ್ಲಿ ನಿರಂತರ ನೀರು ಕೊಡುವ ದೃಷ್ಟಿಯಿಂದ ಹೊಸ ಡಿಪಿಆರ್‌ ತಯಾರಿಸಲು ಬೆಂಗಳೂರಿನಲ್ಲಿ ಈಚೆಗೆ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆಯನ್ನು ಮುಖ್ಯಮಂತ್ರಿಗಳ ಸೂಚನೆಯಂತೆ ಕರೆದಿದ್ದೆ. ಅಲ್ಲಿಯಾದರೂ ಹಳೆ ಡಿಪಿಆರ್‌ ತಯಾರಿಸುವ ಬಗ್ಗೆ ಅವರ ಪಕ್ಷದ ಅನುಭವಿ ಶಾಸಕರೇ ಹೇಳಲಿಲ್ಲ. ಕೇವಲ ನೀರಿನ ವಿಷಯ ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಅವರ ಘನತೆಗೆ ಶೋಭೆಯಲ್ಲ. ಐದು ವರ್ಷಗಳ ಕಾಲ ಅವರದೇ ಕಾಂಗ್ರೆಸ್‌ ಸರ್ಕಾರವಿತ್ತು. ಜಲಸಂಪನ್ಮೂಲ ಸಚಿವರು ಅವರ ಒಡನಾಡಿಗಳಾಗಿದ್ದರು. ಆಗಲಾದರೂ ಅನುಭವಿ ಶಾಸಕ ಬಾದರ್ಲಿ ಸಮನಾಂತರ ಜಲಾಶಯ ನಿರ್ಮಾಣಕ್ಕೆ, ಬಚಾವತ್‌ ವರದಿ ಜಾರಿ ಹಾಗೂ ತಿದ್ದುಪಡಿಗೆ ಪ್ರಯತ್ನಿಸಬಾರದಿತ್ತೆ ಎಂದು ವ್ಯಂಗ್ಯವಾಡಿದರು.

ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರು ಪದೇಪದೆ ನೀರಿನ ವಿಚಾರವಾಗಿ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ವರ್ಷ ಜಲಾಶಯದಲ್ಲಿ ನೀರಿದ್ದರೂ ಎರಡನೇ ಬೆಳೆಗೆ ನೀರು ಕೊಡದೆ ಸುಳ್ಳು ಅಂಕಿ-ಅಂಶಗಳನ್ನು ರೈತರಿಗೆ ಹೇಳಿ ಅವರೇ ದಾರಿ ತಪ್ಪಿಸಿದ್ದರು. ಈಗಲೂ ಅದೇ ಕೆಲಸ ಹಂಪನಗೌಡರು ಮುಂದುವರಿಸಿದ್ದಾರೆ. ಇದು ಸರಿಯಲ್ಲ ಎಂದರು.

ಜನರಿಗೆ ಕುಡಿಯಲು ಹಾಗೂ ರೈತರಿಗೆ ಬೆಳೆ ಬೆಳೆಯಲು ನೀರು ಬೇಕಷ್ಟೆ. ಅದನ್ನು ಬಿಟ್ಟು ನೀರಾವರಿ ತಜ್ಞರಂತೆ ಬಚಾವತ್‌ ವರದಿ ಜಾರಿ, ತಿದ್ದುಪಡಿ ಕುರಿತು ಹೇಳಿಕೆ ನೀಡುವುದು ಸರಿಯಲ್ಲ. ಬಚಾವತ್‌ ವರದಿ ತಿದ್ದುಪಡಿ ಮಾಡಲು ಸಂವಿಧಾನದಲ್ಲಿ ಅವಕಾಶಗಳಿವೆಯೇ ಎಂಬ ಬಗ್ಗೆ ಅವರೇ ಸ್ಪಷ್ಟನೆ ನೀಡಬೇಕು ಎಂದರು.

ಗೊರೇಬಾಳ ಪಿಕಪ್‌ ಡ್ಯಾಂ ಕುರಿತು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹಾಗೂ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಸರಣಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇನ್ನೂ ಪಿಕಪ್‌ನ ಮಣ್ಣು ತೋಡುವ ಮತ್ತು ಸಮತಟ್ಟು ಮಾಡುವ ಕೆಲಸ ನಡೆದಿದೆ. ಇಲಾಖೆಯ ಮುಖ್ಯ ಎಂಜಿನಿಯರ್‌ ಮಂಜಪ್ಪ ಬಂದು ಪರಿಶೀಲನೆ ಮಾಡಿದ್ದಾರೆ. ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಾಮಗಾರಿಯೇ ನಡೆದಿಲ್ಲ. ಆದರೂ ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪ ಮಾಡುವುದು ಸರಿಯಲ್ಲ ಎಂದರು.

ನೌಕರರ ಸಂಘದ ಚುನಾವಣೆಯಲ್ಲಿ ಸಚಿವರ ಸಹೋದರ ನೌಕರರನ್ನು ಬೆದರಿಸಿ ರಾಜೇಂದ್ರಕುಮಾರ ಪರವಾಗಿ ಮತ ಕೇಳುತ್ತಿದ್ದಾರೆ ಎಂಬುದು ಸುಳ್ಳು. ಚುನಾವಣೆ ಸಂದರ್ಭದಲ್ಲಿ ಎಲ್ಲ ರಾಜಕೀಯ ಮುಖಂಡರು ನೌಕರರಿಗೆ ಮನವಿ ಮಾಡಿಕೊಳ್ಳುವುದು ಸ್ವಾಭಾವಿಕ. ಗೋಮರ್ಸಿಯಲ್ಲಿ ನಡೆದ ಗಲಾಟೆಗೂ ತಮಗೂ ಯಾವುದೇ ಸಂಬಂಧವಿಲ್ಲ. ಇಸ್ಪೀಟ್, ಓಸಿ ಆಡಿಸುವವರೇ ಇಸ್ಪೀಟ್, ಓಸಿ ಆಟಗಳು ನಡೆಯುತ್ತಿವೆ ಎಂದು ಆರೋಪಿಸಿರುವುದು ಹಾಸ್ಯಾಸ್ಪದ ಎಂದರು.

ನಯೋಪ್ರಾ ಅಧ್ಯಕ್ಷ ಅಶೋಕಗೌಡ ಗದ್ರಟಗಿ, ಉಪಾಧ್ಯಕ್ಷ ಲಿಂಗರಾಜ ಹೂಗಾರ, ನಗರಸಭೆ ಸದಸ್ಯರಾದ ಚಂದ್ರು ಮೈಲಾರ, ಕೆ.ಜಿಲಾನಿಪಾಷಾ, ವೀರೇಶ ಹಟ್ಟಿ, ಜೆಡಿಎಸ್‌ ಮುಖಂಡರಾದ ಚಂದ್ರಭೂಪಾಲ ನಾಡಗೌಡ, ಸತ್ಯನಾರಾಯಣ, ಅಶೋಕ ಉಮಲೂಟಿ, ವೆಂಕೋಬ ಕಲ್ಲೂರು ಇತರರು ಇದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.