ಯಾವುದೇ ದೇಗುಲದಲ್ಲೂ ಪ್ರಮಾಣ ಮಾಡಲು ಸಿದ್ಧ


Team Udayavani, Jun 24, 2019, 3:00 AM IST

yavude

ಹುಣಸೂರು: ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಶಾಸಕ ಎಚ್‌.ವಿಶ್ವನಾಥ್‌ ಮತ್ತು ಅವರ ಪುತ್ರನ ವಿರುದ್ಧ ತಾವು ಮಾಡಿರುವ ವರ್ಗಾವಣೆ ದಂಧೆ ಆರೋಪಕ್ಕೆ ಈಗಲೂ ಬದ್ಧನಾಗಿದ್ದು, ಪುತ್ರನೊಂದಿಗೆ ಅವರೇ ಸೂಚಿಸುವ ದೇವಾಲಯಕ್ಕೆ ಬರಲಿ ಪ್ರಮಾಣ ಮಾಡಲು ಸಿದ್ಧನಿದ್ದೇನೆಂದು ಬಿಜೆಪಿ ತಾಲೂಕು ಅಧ್ಯಕ್ಷ ಯೋಗಾನಂದಕುಮಾರ್‌ ಸವಾಲು ಹಾಕಿದರು.

ತಾನು ಕ್ಲೀನ್‌ ಹ್ಯಾಂಡ್‌ ಎಂದು ಹೇಳಿ ಕೊಂಡಿರುವ ಶಾಸಕರು ತಮ್ಮ ಜೊತೆಯಲ್ಲಿ ಪುತ್ರನನ್ನು ಧರ್ಮಸ್ಥಳ, ಕಪ್ಪಡಿ ಸೇರಿದಂತೆ ಅವರೇ ನಿಗದಿಪಡಿಸುವ ಯಾವುದೇ ದೇವಾಲಯ ಸೂಚಿಸಲಿ, ಅವರೇ ದಿನಾಂಕ, ಸ್ಥಳ ನಿಗದಿಪಡಿಸಲಿ ಬರಲು ತಯಾರಿದ್ದೇನೆ. ಇನ್ನೂ ತಾಲೂಕಿನಲ್ಲಿ ಕಂದಾಯ, ಪೊಲೀಸ್‌ ಇಲಾಖೆಯಲ್ಲಿ ಪ್ಯಾಕೇಜ್‌ ಸಿಸ್ಟಂ ದಂಧೆ ಇರುವ ಬಗ್ಗೆ ಆರೋಪಿಸಿದ್ದೆ.

ಅವರು ಹಿಂದಿನಿಂದಲೂ ಇದೆ ಎನ್ನುವ ಮೂಲಕ ಭ್ರಷ್ಟಾಚಾರವನ್ನು ಇದೆ ಎಂದು ಒಪ್ಪಿಕೊಂಡಿದ್ದಾರೆ. ಯಾರಿಗೂ ಲಂಚ ಕೊಡಬೇಡಿ ಎಂದು ಏಕೆ ಬಹಿರಂಗವಾಗಿ ಹೇಳುತ್ತಿಲ್ಲ, ಆರೋಪದ ನಂತರವು ದಂಧೆ ಮುಂದುವರಿದಿದೆ. ನಮ್ಮದೇನು ಇದರಲ್ಲಿ ಸ್ವಾರ್ಥವಿಲ್ಲ, ಸಾರ್ವಜನಿಕ ಹಿತದೃಷ್ಟಿಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲೆಂದು ಪ್ರಶ್ನೆ ಮಾಡಿದ್ದೇವೆಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜೆಡಿಎಸ್‌ನಿಂದ ಗೆಲ್ಲಿಸಿ: ಸಿದ್ಧಾಂತದ ಬಗ್ಗೆ ಮಾತನಾಡುವ ಶಾಸಕ ವಿಶ್ವನಾಥ್‌ ಅವರ ಪುತ್ರ ಅಮಿತ್‌ ದೇವರಹಟ್ಟಿ ಕಾಂಗ್ರೆಸ್‌ನಿಂದ ಜಿಪಂ ಸದಸ್ಯನಾಗಿದ್ದು, ಮೊದಲು ಆ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ ಜೆಡಿಎಸ್‌ನಿಂದ ಗೆಲ್ಲಿಸಲಿ ಎಂದು ಆಗ್ರಹಿಸಿದರು. ಶಾಸಕರ ಆಡಳಿತದಿಂದ ಬೇಸತ್ತ ಕೆ.ಆರ್‌.ನಗರ ತಾಲೂಕಿನ ಜನತೆ ಎರಡು ಬಾರಿ ಸೋಲಿಸಿದ್ದಾರೆ. ಮೊದಲು ಆತ್ಮಾವಲೋಕನ ಮಾಡಿಕೊಳ್ಳಲೆಂದು ಛೇಡಿಸಿದರು.

ತನಿಖೆ ನಡೆಸಿ: ತಾಲೂಕಿನ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ಪಕ್ಷ ಕೈಜೋಡಿಸಲಿದೆ. ಚಿಲ್ಕುಂದ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 19 ಕೋಟಿ ರೂ. ಮಂಜೂರು ಮಾಡಿಸಿರುವುದು ಸ್ವಾಗತಾರ್ಹ. ಈ ಹಿಂದೆ ಇವರೇ ಸಂಸದರಾಗಿದ್ದರು ಹಾಗೂ ಮಾಜಿ ಶಾಸಕ ಮಂಜುನಾಥ್‌‌ ಅವಧಿಯಲ್ಲಿ ಚಿಲ್ಕುಂದ ಯೋಜನೆ ಕಳಪೆ ಕಾಮಗಾರಿಯಿಂದ ಹಳ್ಳ ಹಿಡಿದಿದ್ದು, ಅದನ್ನೇಕೆ ತನಿಖೆ ಮಾಡಿಸುತ್ತಿಲ್ಲ, ಸರಕಾರದ ಹಣ ಪೋಲಾಗುವುದು ಎಷ್ಟರ ಮಟ್ಟಿಗೆ ಸರಿ, ಈ ಬಗ್ಗೆ ಉತ್ತರಿಸಲಿ, ಕಳಪೆ ಕಾಮಗಾರಿ ನಡೆಸಿರುವವರ ವಿರುದ್ಧ ಕ್ರಮವಾಗಲಿ ಎಂದು ಒತ್ತಾಯಿಸಿದರು.

ರಾಜೀನಾಮೆ ನೀಡಿ: ತಾಲೂಕು ಎಸ್‌ಸಿ ಮೋರ್ಚಾ ಅಧ್ಯಕ್ಷ ಅಪ್ಪಣ್ಣ ಮಾತನಾಡಿ, ಜೆಡಿಎಸ್‌ ಮುಖಂಡರೆಂದು ಹೇಳಿಕೊಂಡಿರುವ ಶಿವಶೇಖರ್‌ ಅ‌ವರು ಹಲವು ವರ್ಷಗಳ ಹಿಂದೆ ಅಂಬೇಡ್ಕರ್‌ ಪುತ್ಥಳಿ ಸ್ಥಾಪಿಸಲು ಸಾರ್ವಜನಿಕರು, ಅಧಿಕಾರಿಗಳಿಂದ ಸಾಕಷ್ಟು ಹಣ ವಸೂಲಿ ಮಾಡಿದ್ದು, ಈವರೆಗೂ ಪುತ್ಥಳಿ ನಿರ್ಮಾಣವಾಗಿಲ್ಲ, ಹಣಕ್ಕೂ ಲೆಕ್ಕ ನೀಡಿಲ್ಲ.

ಇನ್ನು ಇವರ ಪತ್ನಿ ಕಾಂಗ್ರೆಸ್‌ನಿಂದ ತಾಲೂಕು ಪಂಚಾಯ್ತಿ ಸದಸ್ಯರಾಗಿದ್ದರು. ಇದೀಗ ಜೆಡಿಎಸ್‌ನೊಂದಿಗೆ ಗುರುತಿಸಿಕೊಂಡಿದ್ದು, ಇನ್ನೊಬ್ಬರ ವಿರುದ್ಧ ಆರೋಪ ಮಾಡುವ ಮೊದಲು ರಾಜಿನಾಮೆ ಕೊಟ್ಟು, ಜೆಡಿಎಸ್‌ನಿಂದ ಗೆದ್ದು ಬರಲಿ ಎಂದು ಸವಾಲು ಹಾಕಿದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್‌, ತಾಲೂಕು ಎಸ್‌ಸಿ ಮೋರ್ಚಾ ಅಧ್ಯಕ್ಷ ಅಪ್ಪಣ್ಣ , ತಾಲೂಕು ಕಾರ್ಯದರ್ಶಿ ಚಂದ್ರೇಗೌಡ, ನಗರ ಕಾರ್ಯದರ್ಶಿ ನಾರಾಯಣ್‌ ಉಪಸ್ಥಿತರಿದ್ದರು.

ಗೋಮಾಂಸ ಮಾರಾಟ ತಡೆಯದಿದ್ದರೆ ಹೋರಾಟ: ಹುಣಸೂರು ನಗರದ ಜನ ನಿಬಿಡ ಪ್ರದೇಶದಲ್ಲಿ ಗೋಮಾಂಸ ಮಾರಾಟ ತಡೆಯದಿದ್ದಲ್ಲಿ ಬಿಜೆಪಿ ವತಿಯಿಂದ ಸಾರ್ವಜನಿಕರೊಡಗೂಡಿ ನಗರಸಭೆ ಮುಂದೆ ಹಂದಿ ಮಾಂಸ ಮಾರಾಟ ಮಾಡುತ್ತೇವೆಂಬ ಹೇಳಿಕೆಗೆ ತಾವು ಬದ್ಧರಾಗಿದ್ದು, ನಿಗದಿತ ಜೂ.29ರೊಳಗೆ ಬಂದ್‌ ಆಗದಿದ್ದಲ್ಲಿ ಮಾಂಸ ಮಾರಾಟ ಮಾಡಿ ಪ್ರತಿಭಟಿಸುವುದು ಅನಿವಾರ್ಯ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಬಿ.ಎಸ್‌.ಯೋಗಾನಂದಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

ಸಿದ್ದರಾಮಯ್ಯ

Mysore; ಲೋಕಸಭೆ ಮುಗಿದ ಕೂಡಲೇ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿದ್ದರಾಮಯ್ಯ

Elephant Census: ನಾಗರಹೊಳೆಯಲ್ಲಿ ಗಜ ಗಣತಿಗೆ ಚಾಲನೆ, 300 ಸಿಬ್ಬಂದಿಗಳು ಭಾಗಿ

Elephant Census: ನಾಗರಹೊಳೆಯಲ್ಲಿ ಗಜ ಗಣತಿಗೆ ಚಾಲನೆ, 300 ಸಿಬ್ಬಂದಿಗಳು ಭಾಗಿ

Cm Siddaramaiah: ಸಿಎಂ ಮೈಸೂರು ಭೇಟಿ ಹಿನ್ನೆಲೆ; ದೇವೇಗೌಡರ ಕಟೌಟ್‌ ತೆರವು

Cm Siddaramaiah: ಸಿಎಂ ಮೈಸೂರು ಭೇಟಿ ಹಿನ್ನೆಲೆ; ದೇವೇಗೌಡರ ಕಟೌಟ್‌ ತೆರವು

H. D. Kumaraswamy ಆ ಮಹಾನುಭಾವರು 1980ರಲ್ಲೇ ಸಿ.ಡಿ. ಫ್ಯಾಕ್ಟರಿ ಓಪನ್‌ ಮಾಡಿದ್ದಾರೆ

H. D. Kumaraswamy ಆ ಮಹಾನುಭಾವರು 1980ರಲ್ಲೇ ಸಿ.ಡಿ. ಫ್ಯಾಕ್ಟರಿ ಓಪನ್‌ ಮಾಡಿದ್ದಾರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.