ವಿಶ್ವನಾಥ್ಗೆ ತಿರುಗೇಟು ನೀಡಿದ ಸಚಿವ ಜಿಟಿಡಿ
Team Udayavani, Jun 24, 2019, 3:03 AM IST
ಮೈಸೂರು: ಇಷ್ಟವಿಲ್ಲದಿದ್ದರೆ ನೀವು ಬಿಟ್ಟು ಹೋಗಿ ಎಂದು ಮೈತ್ರಿ ಪಕ್ಷದ ಭಾಗವಾದ ಕಾಂಗ್ರೆಸ್ಗೆ ಹೇಳುವ ಅಧಿಕಾರ ಯಾರಿಗೂ ಇಲ್ಲ ಎಂದು ಎಚ್.ವಿಶ್ವನಾಥ್ಗೆ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದಾರೆ.
ಇಷ್ಟವಿದ್ದರೆ ಇರಿ, ಇಲ್ಲವಾದರೆ ಬೆಂಬಲ ವಾಪಸ್ ಪಡೆದುಕೊಂಡು ಹೋಗಿ ಎಂಬ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಜೆಡಿಎಸ್ ಹಾಗೂ ಕಾಂಗ್ರೆಸ್ಗೆ ಇಷ್ಟ ಇಲ್ಲದಿದ್ದರೂ ಮತದಾರರು ಸೃಷ್ಟಿಸಿದ ಅನಿವಾರ್ಯ ಕಾರಣಕ್ಕೆ ಮೈತ್ರಿ ಸರ್ಕಾರ ರಚನೆಯಾಗಿದೆ.
ಜನರು ಬಿಜೆಪಿಗೆ ವಿರುದ್ಧವಾಗಿ ಸರ್ಕಾರ ರಚಿಸುವಂತೆ ಆದೇಶ ನೀಡಿದರು. ಹೀಗಾಗಿ, ರಾಜ್ಯದಲ್ಲಿ ಜನರ ತೀರ್ಪಿನ ಪ್ರಕಾರ ಸರ್ಕಾರ ರಚಿಸಿದ್ದೇವೆ. ರಾಷ್ಟ್ರೀಯ ಅಧ್ಯಕ್ಷರು ಪಕ್ಷದ ಬಗ್ಗೆ ಮಾತನಾಡುತ್ತಾರೆ. ವಿಶ್ವನಾಥ್ ಅವರು ಅಧ್ಯಕ್ಷಗಿರಿಗೆ ರಾಜೀನಾಮೆ ನೀಡಿದ್ದು, ಅವರಿಗೆ ಮಾತನಾಡಲು ಬೇರೆ ಸುದ್ದಿ ಇಲ್ಲ ಎಂದು ತಿರುಗೇಟು ನೀಡಿದರು.
ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಹಿನ್ನೆಡೆಯಾಯಿತು ಎಂಬ ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿ, ಎರಡೂ ಪಕ್ಷಗಳ ನಾಯಕರು ಅಣ್ಣತಮ್ಮಂದಿರ ರೀತಿ ಸಮ್ಮಿಶ್ರ ಸರ್ಕಾರ ರಚಿಸಿದ ಮೇಲೆ ನಾವು ಏಕೆ ವಿವಾದಾತ್ಮಕ ಹೇಳಿಕೆ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್