ಮೇಗದ್ದೆ ಸರಕಾರಿ ಕಿ.ಪ್ರಾ. ಶಾಲೆ ಪುನರಾರಂಭ
Team Udayavani, Jun 24, 2019, 5:33 AM IST
ಹೆಬ್ರಿ: ಹೆಬ್ರಿ ತಾ. ನಾಡ್ಪಾಲು ಗ್ರಾಮದ ಸುಮಾರು 40 ವರ್ಷ ಇತಿಹಾಸವಿರುವ ಮೇಗದ್ದೆ ಸ.ಕಿ.ಪ್ರಾ. ಶಾಲೆ ಮಕ್ಕಳಿಲ್ಲ ಎಂಬ ಕಾರಣದಿಂದ ಮುಚ್ಚಿ ಮೂರು ವರ್ಷಗಳು ಕಳೆದಿದ್ದು ಇದೀಗ ಗ್ರಾಮಸ್ಥರ ಸತತ ಪ್ರಯತ್ನದ ಮೂಲಕ ಶಾಲೆ ತೆರೆದಿದೆ.
ಜೂ.22ರಂದು ಶಾಲೆಯಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನೆಯೊಂದಿಗೆ ತರಗತಿಗಳು ಆರಂಭಗೊಂಡಿವೆ.
ಶಿಕ್ಷಣ ಇಲಾಖೆ ಸ್ಪಂದನೆ
ಮುಚ್ಚಿದ ಶಾಲೆಯನ್ನು ತೆರೆಯುವಂತೆ ಗ್ರಾಮಸ್ಥರು ಮೂರು ವರ್ಷಗಳಿಂದ ಪ್ರಯತ್ನಿಸುತ್ತಾ ಬಂದಿರುವ ಬಗ್ಗೆ ಉದಯವಾಣಿ ಸಚಿತ್ರ ವರದಿ ಪ್ರಕಟಿಸಿದ ಕೂಡಲೇ ಶಿಕ್ಷಣ ಇಲಾಖೆಯ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಅವರು ಸ್ಥಳಕ್ಕೆ ಭೇಟಿ ನೀಡಿ 10 ವಿದ್ಯಾರ್ಥಿಗಳಿದ್ದರೆ ಶಾಲೆಯನ್ನು ತೆರೆಯುವಂತೆ ಭರವಸೆ ನೀಡಿದ್ದರು. ಅದರಂತೆ ಗ್ರಾಮಸ್ಥರು ಪ್ರಯತ್ನ ಪಟ್ಟಿದ್ದು ಶಾಲೆ ಆರಂಭಗೊಳ್ಳಲು ಕಾರಣವಾಗಿದೆ.
ಹಬ್ಬದ ವಾತಾವರಣ
ಊರಿನವರೆಲ್ಲಾ ಸೇರಿ ಹಣ ಒಟ್ಟುಗೂಡಿಸಿ ಮನೆ ಕಾರ್ಯಕ್ರಮದಂತೆ ಶಾಲೆ ಪುನರಾರಂಭವನನು ಆಚರಿ ಸಿದ್ದಾರೆ. ಶಾಲೆ ಪ್ರಾರಂಭೋತ್ಸವಕ್ಕೆ ಉಪಾಹಾರದ ವ್ಯವಸ್ಥೆ ಯನ್ನೂ ಮಾಡಲಾಗಿತ್ತು. ತರಗತಿ ಉದ್ಘಾಟನೆಯನ್ನು ಗ್ರಾಮದ ಹಿರಿಯರಾದ ಕೊಲ್ಲಾಂಗಾರು ರಾಮಣ್ಣ ಹೆಗ್ಡೆ ನೆರವೇರಿಸಿದರು. ಗ್ರಾ.ಪಂ. ಮಾಜಿ ಅಧ್ಯಕ್ಷ ಗುಳ್ಕಾಡು ಭಾಸ್ಕರ್ ಶೆಟ್ಟಿ ,ಸಿಆರ್ಪಿ ವೆಂಕಟರಮಣ ಕಲ್ಕೂರ್,ಪ್ರಗತಿಪರ ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಸಂಜೀವ ಶೆಟ್ಟಿ, ನಾರಾಯಣ ಭಟ್, ಶಿಕ್ಷಕ ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ