25 ವಿಭಾಗಗಳಲ್ಲಿ ಮಳೆ ಕೊರತೆ
Team Udayavani, Jun 24, 2019, 5:16 AM IST
ಹೊಸದಿಲ್ಲಿ: ಕೇರಳ ಕರಾವಳಿಗೆ ಮಾನ್ಸೂನ್ ಅಪ್ಪಳಿಸಿ ಎರಡು ವಾರಗಳೇ ಕಳೆದರೂ ದೇಶದಲ್ಲಿ ಮಳೆ ಸಾಕಷ್ಟು ಪ್ರಮಾಣದಲ್ಲಿ ಆಗಿಲ್ಲ. ಹವಾಮಾನ ಇಲಾಖೆಯ ಶೇ. 84ರಷ್ಟು ಉಪವಿಭಾಗಗಳಲ್ಲಿ ಮಳೆ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆ ದಾಖಲಾಗಿದೆ.
ಹವಾಮಾನ ಇಲಾಖೆಯು ದೇಶಾದ್ಯಂತ 36 ಉಪವಿಭಾಗಗಳನ್ನು ಹೊಂದಿದೆ. ಈ ಪೈಕಿ 25ರಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆ ಇದೆ. ಅದರಲ್ಲೂ ಆರು ಉಪವಿಭಾಗಗಳಲ್ಲಿ ಭಾರೀ ಮಳೆ ಕೊರತೆ ದಾಖಲಾಗಿದೆ. ಒಡಿಶಾ, ಲಕ್ಷದ್ವೀಪದಲ್ಲಿ ಸಾಮಾನ್ಯ, ಜಮ್ಮು ಕಾಶ್ಮೀರ, ಉತ್ತರ ರಾಜಸ್ಥಾನದಲ್ಲಿ ಹೆಚ್ಚುವರಿ ಮಳೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವಿಪರೀತ ಹೆಚ್ಚಿನ ಮಳೆಯಾಗಿದೆ. ಆದರೆ ಮಹಾರಾಷ್ಟ್ರದ ವಿದರ್ಭ, ಮರಾಠವಾಡ ಮತ್ತು ಕೇಂದ್ರ ಮಹಾರಾಷ್ಟ್ರ, ಪೂರ್ವ ಮಧ್ಯಪ್ರದೇಶ ಭಾಗದಲ್ಲಿ ತೀರಾ ಕಡಿಮೆ ಮಳೆಯಾಗಿದೆ.
ಪೆಂಡಾಲ್ ಬಿದ್ದು 14 ಸಾವು
ರಾಜಸ್ಥಾನ ಮತ್ತು ಬಿಹಾರದಲ್ಲಿ ಮಳೆ ಸಂಬಂಧಿ ದುರಂತದಲ್ಲಿ 24 ಮಂದಿ ಅಸುನೀಗಿ, ಮಧ್ಯ ಪ್ರದೇಶದಲ್ಲಿ ಇಬ್ಬರು ಬಲಿಯಾಗಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ರಾಜಸ್ಥಾನದ ಬಾರ್ಮರ್ ಜಸೋಲ್ನಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಪೆಂಡಾಲ್ ಹಾಕಲಾಗಿತ್ತು. ಆಗ ಜೋರಾಗಿ ಗಾಳಿ ಬೀಸಿ, ಕುಳಿತಿದ್ದವರ ಮೇಲೆಯೇ ಪೆಂಡಾಲ್ ಕುಸಿದಿದ್ದರಿಂದ 14 ಮಂದಿ ಅಸುನೀಗಿ, 50 ಮಂದಿ ಗಾಯಗೊಂಡಿದ್ದಾರೆ. ಬಿಹಾರದ ಬಕ್ಸಾರ್, ಬೆಗುಸರೈನಲ್ಲಿ ಮಳೆಗೆ 10 ಮಂದಿ ಸಾವ ನ್ನಪ್ಪಿದ್ದಾ ರೆ. ಅಸುನೀಗಿದವರಿಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!