ಮಳೆ ಅಬ್ಬರ; ಹುಬ್ಬಳ್ಳಿ ಜನಜೀವನ ತತ್ತರ
| ಒಂದೂವರೆ ತಾಸು ವರುಣನ ಆಟ | ಬಡಾವಣೆಗಳ ಜನರ ಪರದಾಟ | ಮನೆಗೆ ನೀರು ನುಗ್ಗಿ ಗೋಳಾಟ
Team Udayavani, Jun 24, 2019, 8:33 AM IST
ಹುಬ್ಬಳ್ಳಿ: ದಾಜಿಬಾನ ಪೇಟೆಯಲ್ಲಿ ರಸ್ತೆಯಲ್ಲಿ ಹರಿದ ನೀರು.
ಹುಬ್ಬಳ್ಳಿ: ನಗರದಲ್ಲಿ ರವಿವಾರ ಮಧ್ಯಾಹ್ನ ರಭಸದ ಮಳೆ ಸುರಿದ ಪರಿಣಾಮ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಹಲವೆಡೆ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ವ್ಯತ್ಯಯವಾಯಿತು.
ಮಧ್ಯಾಹ್ನ 1:45ರ ಸುಮಾರಿಗೆ ಆರಂಭಗೊಂಡ ಮಳೆ 3 ಗಂಟೆವರೆಗೆ ಜೋರಾಗಿ ಸುರಿಯಿತು. ನಂತರ ಸಂಜೆ 5 ಗಂಟೆವರೆಗೂ ತುಂತುರು ಮಳೆಯಾಯಿತು. ಗುಡಿಹಾಳ ರಸ್ತೆಯಲ್ಲಿ ಹಾಗೂ ಕೆ.ಬಿ. ನಗರದ 2ನೇ ಕ್ರಾಸ್ನಲ್ಲಿ 2 ಮರಗಳು ಮನೆಯ ಮೇಲೆ ಬಿದ್ದಿದ್ದು, ಮಳೆ ನಿಂತ ಮೇಲೆ ಅವನ್ನು ತೆರವುಗೊಳಿಲಾಯಿತು.
ನಗರದ ನ್ಯೂ ಕಾಟನ್ ಮಾರ್ಕೆಟ್ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ನೀರು ನುಗ್ಗಿ ತೊಂದರೆ ಉಂಟಾಯಿತು. ದಾಜಿಬಾನ ಪೇಟೆ, ಕೊಪ್ಪಿಕರ ರಸ್ತೆಯ ಕೆಲ ವಾಣಿಜ್ಯ ಮಳಿಗೆಗಳ ಅಂಡರ್ಗ್ರೌಂಡ್ ಮಳಿಗೆಯಲ್ಲಿ ಮಳೆ ನೀರು ನುಗ್ಗಿತ್ತು. ಅಂಗಡಿಕಾರರು ನೀರನ್ನು ಹೊರತೆಗೆಯಲು ಹರಸಾಹಸ ಮಾಡುತ್ತಿದ್ದುದು ಕಂಡುಬಂತು. ಪಂಪ್ಗ್ಳನ್ನು ಬಳಕೆ ಮಾಡಿಕೊಂಡು ನೀರು ಹೊರತೆಗೆಯಲಾಯಿತು. ಆದರೆ ಕೆಲವೆಡೆ ವಿದ್ಯುತ್ ಸಂಪರ್ಕ ಇಲ್ಲದ್ದರಿಂದ ಅಂಗಡಿಕಾರರು ಪರದಾಡಬೇಕಾಯಿತು.
ದಾಜಿಬಾನ ಪೇಟೆ ಹಾಗೂ ಕೊಪ್ಪಿಕರ ರಸ್ತೆಯಲ್ಲಿ ಮಳೆ ನೀರಿನ ರಭಸಕ್ಕೆ ರಸ್ತೆ ಪಕ್ಕ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಕೊಚ್ಚಿಕೊಂಡು ಸ್ವಲ್ಪ ದೂರ ಹೋಗಿರುವುದು ವರದಿಯಾಗಿದೆ. ರಸ್ತೆ ಪಕ್ಕದ ಸಣ್ಣ ಅಂಗಡಿಗಳಿಗೆ ನೀರು ನುಗ್ಗಿದ್ದರಿಂದ ವ್ಯಾಪಾರಿಗಳು ಸರಕುಗಳನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಯತ್ನಿಸುತ್ತಿದ್ದುದು ಕಂಡುಬಂತು.
ಗಣೇಶ ನಗರ, ಸದರಸೋಫಾ, ಮದನಿ ಕಾಲೋನಿ, ಪಾಟೀಲ ಗಲ್ಲಿ, ಪಡದಯ್ಯನಹಕ್ಕಲ, ಬಮ್ಮಾಪುರ ಓಣಿ, ಎಸ್.ಎಂ. ಕೃಷ್ಣ ನಗರ, ನೇಕಾರ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ಜನರು ಸರಂಜಾಮುಗಳನ್ನು ರಕ್ಷಿಸಿಕೊಳ್ಳುವಲ್ಲಿ ನಿರತರಾಗಿದ್ದರು. ರಾಜಕಾಲುವೆ ಪಕ್ಕದ ಕೊಳಚೆ ಪ್ರದೇಶಗಳಿಗೂ ಮಳೆ ನೀರು ನುಗ್ಗಿದ್ದು ವರದಿಯಾಗಿದೆ. ಅಲ್ಲದೇ ಜಗದೀಶ ನಗರದಲ್ಲಿ ವಿಮಾನ ನಿಲ್ದಾಣದ ಆವರಣ ಗೋಡೆ ಎರಡು ಕಡೆ ಕುಸಿದ ಘಟನೆಯೂ ನಡೆದಿದೆ.
ಹುಬ್ಬಳ್ಳಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಮಳೆಯಾಗಿದ್ದು, ಮುಂಗಾರು ಬಿತ್ತನೆಗೆ ಹಿಂದೇಟು ಹಾಕಿದ್ದ ರೈತರಲ್ಲಿ ಈಗ ಆಶಾಭಾವನೆ ಮೂಡಿದೆ.
•ಜಲಪಾತ್ರೆಯಾದ ವಾಣಿಜ್ಯ ಸಂಕೀರ್ಣಗಳ ತಳ
•ಮುಂಗಾರು ಬಿತ್ತನೆಗೆ ಕಾದಿದ್ದ ರೈತರಲ್ಲಿ ಸಂತಸ
•ಹೊಳೆಯಂತಾದ ರಸ್ತೆ-ಕೊಚ್ಚಿ ಹೋದ ಬೈಕ್
•ಮನೆಗಳ ಮೇಲೆ ಎರಗಿದ ಮರಗಳು; ತೆರವು
•ನೂರಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
•ನೀರನ್ನು ಹೊರಹಾಕಲು ಜನರ ಹರಸಾಹಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ