ಪಾಳು ಬಿದ್ದ ಕ್ವಾರ್ಟ್‌ರ್ಸ್‌ಗಳು!

•ಕಂದಾಯ ಇಲಾಖೆ ಮೌನ•ಮುರಿದು ಹೋಗುವ ಸ್ಥಿತಿಯಲ್ಲಿವೆ ಕಿಟಕಿಗಳು-ಗಾಜುಗಳು

Team Udayavani, Jun 24, 2019, 9:10 AM IST

bk-tdy-3..

ಕಲಾದಗಿ: ಪಾಳು ಬಿದ್ದಿರುವ ಕಂದಾಯ ಇಲಾಖಾ ಕಟ್ಟಡಗಳು.

ಕಲಾದಗಿ: ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆಂದು ಲಕ್ಷಾಂತರ ರೂಪಾಯಿ ವ್ಯಯ ಮಾಡಿ ಕಟ್ಟಿಸಿದ ಕ್ವಾರ್ಟ್‌ರ್ಸ್‌ಗಳು ನಾಯಿ, ಹಂದಿ ವಾಸಿಸುವ ಸ್ಥಳಗಳಾಗಿ ಮಾರ್ಪಾಡಾಗುತ್ತಿದ್ದು, ಕಟ್ಟಡಗಳ ಆವರಣದಲ್ಲಿ ಮುಳ್ಳು ಕಂಟಿ ಬೆಳೆದು ಮಿನಿ ಜಂಗಲ್ ಆಗುತ್ತಿದೆ.

ಕಿಟಕಿಗಳು-ಬಾಗಿಲುಗಳು ಮುರಿದು ಹೋಗುವ ಸ್ಥಿತಿಯಲ್ಲಿದ್ದು,ಹುಳು ತಿನ್ನುತ್ತಿವೆ. ಗಾಜುಗಳು ಒಡೆದು ಹೋಗುತ್ತಿವೆ. ಕ್ವಾರ್ಟ್‌ರ್ಸ್‌ ಆವರಣದಲ್ಲಿ ಜಾಲಿ ಗಿಡಗಳು ಬೆಳೆದು ನಿಂತಿದ್ದು, ಗೇಟುಗಳು ಕಾಯಂ ತೆರೆದೇ ಇರುತ್ತವೆ. ವಿದ್ಯುತ್‌ ತಂತಿಗಳು ಹರಿದು ಬಿದ್ದಿದ್ದು, ಪೈಪ್‌ಗ್ಳು ಒಡೆದು ಹೋಗಿವೆ. ಕಿಟಕಿಯಿಂದ ಒಳಗಡೆ ಕಣ್ಣು ಹಾಯಿಸಿದರೆ ನಿರುಪಯುಕ್ತ ವಸ್ತುಗಳು ಗುಜರಿ ಸಾಮಾನಿನಂತೆ ಕಾಣುತ್ತಿವೆ. ಪಾಳು ಬಿದ್ದ ಬಂಗಲೆಯಂತೆ ಕಾಣುತ್ತಿವೆ.

ಸರಕಾರ ಕಂದಾಯ ನೌಕರರಿಗೆ ಸೇವೆ ಸಲ್ಲಿಸುತ್ತಿರುವ ಗ್ರಾಮದಲ್ಲೇ ವಾಸವಿರಲೆಂದು ಹಾಗೂ ಗ್ರಾಮೀಣ ಜನರಿಗೆ ಸೂಕ್ತ ಕಾಲದಲ್ಲಿ ಸರಕಾರಿ ಸೇವೆಗಳು ಲಭ್ಯವಾಗಲಿ ಎಂಬ ದೃಷ್ಟಿಕೋನವನ್ನಿಟ್ಟುಕೊಂಡು ಸೌಲಭ್ಯಗಳನ್ನೊಳಗೊಂಡ ಮೂರು ಕ್ವಾರ್ಟ್‌ರ್ಸ್‌ಗಳನ್ನು ಕಟ್ಟಿಸಿಕೊಟ್ಟಿತ್ತು.ಆದರೆ ಕಂದಾಯ ಇಲಾಖೆಯ ಉಪತಹಶೀಲ್ದಾರನಾಗಲಿ, ಗ್ರಾಮ ಲೆಕ್ಕಾಧಿಕಾರಿಯಾಗಲಿ, ಕಂದಾಯ ನಿರೀಕ್ಷಕನಾಗಲಿ ಯಾರೂ ಇಲ್ಲಿ ವಾಸವಿರದೆ ಪಾಳು ಬಿದ್ದು ಹೋಗುತ್ತಿದೆ.

ಕ್ವಾರ್ಟ್‌ರ್ಸ್‌ಗಳ ಆವರಣ ಕುಡುಕರ ಅಡ್ಡಾ ಆಗುತ್ತಿದೆ. ಸಾರಾಯಿ ಬಾಟಲಿಗಳು, ಬಿಯರ್‌ ಬಾಟಲಿಗಳು ಎಲ್ಲೆಂದರಲ್ಲಿ ಬಿದ್ದಿವೆ.ಅಂಡರ್‌ ಗ್ರೌಂಡ್‌ ನೀರಿನ ಟ್ಯಾಂಕುಗಳಲ್ಲಿ ಕಲ್ಲು ಮಣ್ಣು ತುಂಬಿಕೊಂಡು ಹಾಳಾಗಿದೆ.

ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಪಾಳು ಬೀಳುತ್ತಿರುವ ಕಟ್ಟಡಗಳನ್ನು ದುರಸ್ತಿ ಮಾಡಿಸಿ ಅಧಿಕಾರಿಗಳು ವಸತಿ ಗೃಹಗಳನ್ನಾಗಲಿ, ಆಧಾರ ನೋಂದಣಿ ಕೇಂದ್ರವನ್ನಾಗಲಿ ಅಥವಾ ಇನ್ನಿತರೆ ಕಚೇರಿಗಳನ್ನಾಗಿ ಉಪಯೋಗಿಸಬೇಕೆಂದು ಗ್ರಾಮಸ್ಥರ ಆಶಯವಾಗಿದೆ.

 

•ಚಂದ್ರಶೇಖರ ಆರ್‌.ಎಚ್.

ಟಾಪ್ ನ್ಯೂಸ್

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.