ಆ್ಯಪ್‌ ಮೂಲಕ ಈ ಬಾರಿ ಆರ್ಥಿಕ ಗಣತಿ

ಡಿಜಿಟಲ್‌ ಸೇವಾ ಕೇಂದ್ರಗಳ ಬಳಕೆಯೂ ಇದೇ ಮೊದಲು

Team Udayavani, Jun 24, 2019, 10:18 AM IST

app

ಮಂಗಳೂರು: ಉದ್ಯಮ, ಕೃಷಿ, ಕೃಷಿಯೇತರ ಚಟುವಟಿಕೆಯಲ್ಲಿ ತೊಡಗಿರುವ ಜನರ ವಿವರಗಳನ್ನು ದಾಖಲಿಸುವ 7ನೇ ಆರ್ಥಿಕ ಗಣತಿಯನ್ನು ಇದೇ ಮೊದಲ ಬಾರಿಗೆ ಮೊಬೈಲ್‌ ಆ್ಯಪ್‌ ಮೂಲಕ ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದರಿಂದ ಗಣತಿಯ ಸಮೀಕ್ಷಾ ವರದಿ ಶೀಘ್ರ ಲಭ್ಯವಾಗುವುದು ಸಾಧ್ಯ.

ಜತೆಗೆ ಈ ಗಣತಿಯನ್ನು “ಡಿಜಿಟಲ್‌ ಸೇವಾ ಕೇಂದ್ರ’ಗಳ ಮೂಲಕ ಕೈಗೊಳ್ಳು ವುದು ಕೂಡ ಇದೇಪ್ರಥಮ. ಈವರೆಗೆ ಅಂಗನವಾಡಿ- ಆಶಾ ಕಾರ್ಯಕರ್ತೆಯರನ್ನು ಈ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿತ್ತು. ಗಣತಿದಾರರು ಮನೆ, ಕಟ್ಟಡಗಳಿಗೆ ಭೇಟಿ ನೀಡಿ ಕಾಗದದಲ್ಲಿ ಬರೆದು ಬಳಿಕ ಕಂಪ್ಯೂಟರ್‌ಗೆ ಅಪ್‌ಲೋಡ್‌ ಮಾಡುತ್ತಿದ್ದರು. ವರದಿ ಲಭ್ಯವಾಗು ವಾಗ ಹಲವು ವರ್ಷ ಕಳೆಯುತ್ತಿದ್ದವು. ಈ ಸಲ ಮೊದಲ ಬಾರಿಗೆ ಗಣತಿದಾರರಿಗೆ ಮೊಬೈಲ್‌
ಆ್ಯಪ್‌ ನೀಡಲಾಗಿದೆ. 2011ರ ಗಣತಿ ಬ್ಲಾಕ್‌ಗಳು ಮತ್ತು ನಕ್ಷೆಗಳನ್ನು ಜನಗಣತಿ ನಿರ್ದೇಶನಾ ಲಯದಿಂದ ಒದಗಿಸಲಾಗುತ್ತದೆ.

ಭಾರತ ಸರಕಾರದ ಸಾಂಖೀಕ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯವು ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ಬರುವ “ಡಿಜಿಟಲ್‌ ಸೇವಾ ಕೇಂದ್ರ’ಗಳ ಮೂಲಕ 7ನೇ ಆರ್ಥಿಕ ಗಣತಿ ಕೈಗೊಳ್ಳಲಿದೆ. ನಗರ, ಗ್ರಾಮ ಭಾಗದಲ್ಲಿ ಡಿಜಿಟಲ್‌ ಇಂಡಿಯಾ ಪರಿಕಲ್ಪನೆಯಡಿ ಕೆಲಸ ಮಾಡುತ್ತಿರುವ ಡಿಜಿಟಲ್‌ ಸೇವಾ ಕೇಂದ್ರದವರು ಈ ಬಾರಿ ಗಣತಿ ನಡೆಸಲಿದ್ದಾರೆ. ಗ್ರಾ.ಪಂ. ಪಿಡಿಒ, ನಗರ ವ್ಯಾಪ್ತಿಯ ಅಧಿಕಾರಿಗಳು ಇದಕ್ಕೆ ಸಹಕರಿಸಲಿದ್ದಾರೆ.

ಸಂತೆ, ಬೀದಿ ಬದಿ ವ್ಯಾಪಾರ, ಮನೆಯಲ್ಲಿಯೇ ನಿರ್ವಹಿಸುವ ಟೈಲರಿಂಗ್‌
ಮತ್ತು ವಿವಿಧ ಸ್ವ ಉದ್ಯೋಗಗಳು, ಸಣ್ಣ ಪ್ರಮಾಣದ ಹೈನುಗಾರಿಕೆ ಇತ್ಯಾದಿ ಗಳನ್ನು ಮಾಲಕರ ಮನೆಯಲ್ಲಿಯೇ ಎಣಿಕೆ ಮಾಡಲಾಗುತ್ತದೆ. ಉದ್ದಿಮೆ ಗಾಗಿ ಹಣಕಾಸಿನ ಮೂಲ ಇತ್ಯಾದಿ ಮಾಹಿತಿಗಳನ್ನೂ ಸಂಗ್ರಹಿಸಲಾಗುತ್ತದೆ.

ಗಣತಿಯ ಉಸ್ತುವಾರಿಗಾಗಿ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ
ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ನ್ನೊಳಗೊಂಡ ಸಮಿತಿ ರಚಿಸಲಾಗಿದೆ.
ದೇಶದಲ್ಲಿ ಈವರೆಗೆ 6 ಆರ್ಥಿಕ ಗಣತಿಗಳು ನಡೆದಿವೆ.

ಯಾಕಾಗಿ ಆರ್ಥಿಕ ಗಣತಿ?
ಈ ಗಣತಿಯ ಮೂಲಕ ದೇಶ- ರಾಜ್ಯದಲ್ಲಿ ಸಂಘಟಿತ, ಅಸಂಘಟಿತ ವಲಯದ ಕೃಷಿ ಮತ್ತು ಕೃಷಿಯೇತರ ವಿವಿಧ ಆರ್ಥಿಕ ಚಟುವಟಿಕೆಗಳಲ್ಲಿ ಹಣಕಾಸು ಹಂಚಿಕೆ, ಉದ್ಯೋಗಾವಕಾಶ, ವರಮಾನ, ಉತ್ಪಾದನೆ ಮುಂತಾದ ವಿವರ ಸಂಗ್ರಹ ಕೇಂದ್ರ ಸರಕಾರದ ಉದ್ದೇಶ. ಇದರಿಂದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮತೋಲನವನ್ನು ಗುರುತಿಸಬಹುದು. ರಾಜ್ಯದ ಆಂತರಿಕ ಉತ್ಪಾದನೆಯಂತಹ ಮುಖ್ಯವಾದ ಅಂಶಗಳನ್ನು ತಿಳಿಯಲು ಇದು ಮುಖ್ಯ ಮಾಹಿತಿಮೂಲ. ಸಂಗ್ರಹಿತ ಮಾಹಿತಿ ಮುಂದೆ ಮಹತ್ವದ ಯೋಜನೆಗಳ ರೂಪಣೆ-ಅನುಷ್ಠಾನ ಸಂದರ್ಭ ಉಪಯೋಗಿ.

ಗಣತಿದಾರರಿಗೆ ಮಾಹಿತಿ ನೀಡಿ
ಜಿಲ್ಲೆಯ ಭೌಗೋಳಿಕ ಗಡಿಯೊಳಗೆ ನೆಲೆಗೊಂಡಿರುವ ಎಲ್ಲ ಉದ್ಯಮಗಳ, ಘಟಕಗಳ ಪೂರ್ಣಗಣತಿ ಮಾಡುವ 7ನೇ ಆರ್ಥಿಕ ಗಣತಿ ಮುಂದಿನ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಮನೆ, ಕಟ್ಟಡಗಳಿಗೆ ಬರುವ ಗಣತಿದಾರರಿಗೆ ಸಾರ್ವಜನಿಕರು ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕು. ಗಣತಿಯಲ್ಲಿ ಲಭ್ಯವಾಗುವ ಮಾಹಿತಿಗಳೇ ಮುಂದೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲು ಸರಕಾರಕ್ಕೆ ಮೂಲ ಅಂಕಿಅಂಶಗಳಾಗಿರುತ್ತವೆ.
– ಉದಯ್‌ ಶೆಟ್ಟಿ , ಸಂಖ್ಯಾ ಸಂಗ್ರಹಣಾಧಿಕಾರಿ, ದ.ಕ.

ದಿನೇಶ್‌ ಇರಾ

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.