ಸಮಸ್ಯೆ ತೆರೆದಿಟ್ಟ ಸಾರಿಗೆ ನೌಕರರು

ಸಾರಿಗೆ ನಿಗಮಗಳಲ್ಲಿ ಸೇವೆ ಸಲ್ಲಿಸುವವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ

Team Udayavani, Jun 24, 2019, 10:45 AM IST

24-June-7

ಮುದ್ದೇಬಿಹಾಳ: ಸಾರಿಗೆ ನೌಕರರು ಗೃಹ ಸಚಿವ ಎಂ.ಬಿ. ಪಾಟೀಲರಿಗೆ ಬೇಡಿಕೆಗಳ ಮನವಿ ಸಲ್ಲಿಸಿದರು.

ಮುದ್ದೇಬಿಹಾಳ: ಸಾರಿಗೆ ಸಂಸ್ಥೆಯ ನಿಗಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಸರ್ಕಾರಿ ಪಿಂಚಣಿ ಮತ್ತು ಎಲ್ಲ ಸೌಲತ್ತು ನೀಡುವಂತೆ ಮುಖ್ಯಮಂತ್ರಿಗಳ ಮನವೊಲಿಸಬೇಕು ಎಂದು ಆಗ್ರಹಿಸಿ ಕೆಎಸ್‌ಆರ್‌ಟಿಸಿ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ಸ್ಥಳೀಯ ಘಟಕದ ಪದಾಧಿಕಾರಿಗಳು ಗೃಹ ಸಚಿವ ಎಂ.ಬಿ.ಪಾಟೀಲ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಚಿವರನ್ನು ಭೇಟಿ ಮಾಡಿದ ವೇದಿಕೆಯ ಸ್ಥಳೀಯ ಪದಾಧಿಕಾರಿಗಳಾದ ಎಸ್‌.ಆರ್‌. ಮುಲ್ಲಾ, ವಿ.ಎಂ. ಕುಲಕರ್ಣಿ, ಎ.ಐ. ಆಸ್ಮಿ, ಮಹೆಬೂಬ ಮುಲ್ಲಾ, ಮಂಜುನಾಥ ಸಜ್ಜನ ಮತ್ತಿತರರು ಬೇಡಿಕೆ ಈಡೇರಿಕೆಯ ಅವಶ್ಯಕತೆಯನ್ನು ಸಚಿವರಿಗೆ ವಿವರಿಸಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸಹಕಾರ ನೀಡಬೇಕು ಎಂದು ಕೋರಿದರು.

ನೌಕರಿಗೆ ಸೇರಿಕೊಂಡಾಗಿನಿಂದ ನಿವೃತ್ತಿವರೆಗೂ ಶ್ರಮವಹಿಸಿ ದುಡಿಯುವ ಕೆಎಸ್‌ಆರ್‌ಟಿಸಿ ನೌಕರರು ಶ್ರಮ ಜೀವಿಗಳು. ಸರ್ಕಾರದಿಂದಲೇ ನಡೆಯುತ್ತಿರುವ ವಿವಿಧ ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಹಿಂದಿನ ಸರ್ಕಾರಗಳು ವೇತನ ತಾರತಮ್ಯ ಎಸಗುತ್ತಾ ಬಂದಿದ್ದಾರೆ. ಸರ್ಕಾರದ ಸೌಲತ್ತು, ಪಿಂಚಣಿ ಇಲ್ಲದೆ ಕಷ್ಟಗಳ ನಡುವೆಯೂ ನೌಕರರು ಶ್ರದ್ಧೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಇವರಿಗೆ ಜಿಗುಪ್ಸೆ ಶುರುವಾಗಿದೆ. ಹಲವಾರು ಸಮಸ್ಯೆಗಳಿಂದ ಬಳಲುತ್ತಿರುವ ಈ ನೌಕರರು ಇದೀಗ ಸಹನೆಯನ್ನು ಮೀರುವ ಹಂತಕ್ಕೆ ಬಂದಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಬೆಳಗಾವಿ ಅಧಿವೇಶನ ವೇಳೆ ಸಾರಿಗೆ ನೌಕರರ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲಾಗಿತ್ತು. ಇದುವರೆಗೂ ಯಾವುದೇ ರೀತಿಯ ಸಕಾರಾತ್ಮಕ ಸ್ಪಂದನೆ ದೊರಕಿಲ್ಲ. ಸಾರಿಗೆ ನೌಕರಿ ಎಂದರೆ ಕಷ್ಟದ ಕೆಲಸ. ಕರ್ತವ್ಯದಲ್ಲಿ ಉದ್ಭವಿಸುವ ಎಲ್ಲ ಕಷ್ಟಗಳನ್ನು ಸಮರ್ಥವಾಗಿ ಎದುರಿಸಬೇಕಿದೆ. ನೌಕರರನ್ನು ನಂಬಿದ ಕುಟುಂಬವರ್ಗವನ್ನೂ ಸಾಕಿ ಸಲಹುವ ಹೊಣೆಗಾರಿಕೆ ಇದೆ. ಇವರಿಗೆ ನಿವೃತ್ತಿಯಾದಾಗ ಇವರ ವಿಶ್ರಾಂತಿ ಜೀವನಕ್ಕೊಂದು ಭದ್ರತೆಯಾಗಿ ಸರ್ಕಾರಿ ಪಿಂಚಣಿ ಬೇಕು. ಸಾರಿಗೆ ನೌಕರರನ್ನು ಸರ್ಕಾರಿ ನೌಕರ ಎಂಬಂತೆ ಸಮಾನತೆಯಿಂದ ನೋಡಿಕೊಳ್ಳಬೇಕು. ಸಮಾನ ವೇತನ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನೆರೆಯ ಆಂಧ್ರ ಪ್ರದೇಶದಲ್ಲಿ ಸಾರಿಗೆ ನೌಕರರನ್ನು ಸರ್ಕಾರದ ಜೊತೆ ವಿಲೀನಗೊಳಿಸಿದಂತೆ ಇಲ್ಲೂ ಮಾಡಬೇಕು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂಸಿದ್ದಾರೆ. ಸಾರಿಗೆ ಸಚಿವರೂ ಧನಾತ್ಮಕ ಹೇಳಿಕೆ ನೀಡಿದ್ದಾರೆ.

ಪೊಲೀಸ್‌ ಇಲಾಖೆಯ ನೌಕರರಿಗೆ ಔರಾದಕರ ವರದಿಯನ್ನು ಅನುಷ್ಠಾನಗೊಳಿಸಿದ ರೀತಿಯಲ್ಲಿ ಸಾರಿಗೆ ನೌಕರರ ಬೇಡಿಕೆಗಳನ್ನೂ ಮುಖ್ಯಮಂತ್ರಿಗಳ ಮೂಲಕ ಈಡೇರಿಸಿ ಸಾರಿಗೆ ನೌಕರರ ಸಂಕಷ್ಟಗಳಿಗೆ ಮುಕ್ತಾಯ ಹೇಳಬೇಕು ಎಂದು ಪದಾಧಿಕಾರಿಗಳು ಕೇಳಿಕೊಂಡರು.

ಅಹವಾಲು ಆಲಿಸಿದ ಸಚಿವರು ಸಾರಿಗೆ ನೌಕರರ ಬೇಡಿಕೆ ನ್ಯಾಯಯುತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು. ಮಾಜಿ ಸಚಿವರಾದ ಬಸವರಾಜ ಹೊರಟ್ಟಿ, ಸಿ.ಎಸ್‌. ನಾಡಗೌಡ, ಎಪಿಎಂಸಿ ಅಧ್ಯಕ್ಷ ಗುರಣ್ಣ ತಾರನಾಳ, ಪುರಸಭೆ ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ ಮತ್ತಿತರರು ಇದ್ದರು.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.