ಬೆಂಗಳೂರು ಬಸ್‌ಗಾಗಿ ಪ್ರಯಾಣಿಕರ ಪರದಾಟ-ಪ್ರತಿಭಟನೆ

ಸಿಂಧನೂರು ಸಾರಿಗೆ ಘಟಕ ಅಧಿಕಾರಿಗಳ ನಿರ್ಲಕ್ಷ್ಯ

Team Udayavani, Jun 24, 2019, 11:02 AM IST

24-June-9

ಗೊರೇಬಾಳ: ಬೆಂಗಳೂರಿಗೆ ಬಸ್‌ ಇಲ್ಲದ್ದಕ್ಕೆ ಶನಿವಾರ ರಾತ್ರಿ ಸಿಂಧನೂರು ಬಸ್‌ ನಿಲ್ದಾಣ ಎದುರು ಪ್ರತಿಭಟನೆ ನಡೆಸಿದ ಪ್ರಯಾಣಿಕರು.

ಗೊರೇಬಾಳ: ಶನಿವಾರ ರಾತ್ರಿ ಬೆಂಗಳೂರುಗೆ ತೆರಳಲು ಬಸ್‌ಗಳಿಲ್ಲದೇ ಪರದಾಡಿದ ಸುಮಾರು 500ಕ್ಕೂ ಹೆಚ್ಚು ಪ್ರಯಾಣಿಕರು ಆಕ್ರೋಶಗೊಂಡು ಸಿಂಧನೂರು ನಗರದ ಬಸ್‌ ನಿಲ್ದಾಣ ಎದುರುಗಡೆ ದಾವಣಗೆರೆ ಹಾಗೂ ತುಮಕೂರು ಮಾರ್ಗಕ್ಕೆ ತೆರಳುವ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಕಳೆದ ಅನೇಕ ತಿಂಗಳುಗಳಿಂದ ಬೆಂಗಳೂರಿಗೆ ಬಸ್‌ಗಳು ಕಡಿಮೆಯಾಗಿ ಪ್ರಯಾಣಿಕರು ಪರದಾಡು ವಂತಾಗಿದೆ. ಶನಿವಾರ ತಡರಾತ್ರಿ ಬೆಂಗಳೂರಿಗೆ ಗುಳೆ ಹೊರಟ ಜನರು ಸಿಂಧನೂರು ಬಸ್‌ ನಿಲ್ದಾಣದಲ್ಲಿ ಬೆಂಗಳೂರು ಬಸ್‌ಗಾಗಿ ಸಂಜೆ 6 ಗಂಟೆಯಿಂದಲೇ ಕಾಯುತ್ತಾ ಕುಳಿತಿದ್ದರು. ನಂತರ ರಾತ್ರಿ 9 ಗಂಟೆಗೆ ಒಂದು ಬಸ್‌ ಬಂದಿದ್ದು, ಅದರಲ್ಲಿ ಇಕ್ಕಟ್ಟಿನಲ್ಲಿ ತಮ್ಮ ಮಕ್ಕಳೊಂದಿಗೆ ಕುಳಿತು ಕೆಲವರು ಪ್ರಯಾಣ ಬೆಳೆಸಿದ್ದಾರೆ. ತದನಂತರ ಇನ್ನುಳಿದ ಸುಮಾರು 500ಕ್ಕೂ ಹೆಚ್ಚು ಜನರು ಬಸ್‌ ನಿಲ್ದಾಣದ ವಿಚಾರಣಾಧಿಕಾರಿಗಳಿಗೆ ಹಾಗೂ ಡಿಪೋ ಸಿಬ್ಬಂದಿಗೆ ಬೆಂಗಳೂರಿಗೆ ಬಸ್‌ ಬಿಡಲು ಮನವಿ ಮಾಡಿದ್ದಾರೆ. ಆದರೆ ಸಿಬ್ಬಂದಿ ಸಕಾರಾತ್ಮಕವಾಗಿ ಉತ್ತರಿಸಿಲ್ಲ. ಹೀಗಾಗಿ ಆಕ್ರೋಶಗೊಂಡ ಪ್ರಯಾಣಿಕರು ಬಸ್‌ ನಿಲ್ದಾಣ ಎದುರು ದಾವಣಗೆರೆ, ತುಮಕೂರು ಮಾರ್ಗವಾಗಿ ತೆರಳುವ ಬಸ್‌ಗಳನ್ನು ತಡೆದು ನಿರ್ವಾಹಕ ಹಾಗೂ ಚಾಲಕರೊಂದಿಗೆ ವಾಗ್ವಾದ ನಡೆಸಿದರು. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ನಗರ ಠಾಣೆ ಪೇದೆಗಳು ಪ್ರಯಾಣಿಕರಿಗೆ ಸಮಜಾಯಿಷಿ ನೀಡಿ ಬಸ್‌ಗಳನ್ನು ಬಿಡುಗಡೆಗೊಳಿಸಿದರು.

ಅಧಿಕಾರಿಗಳ ನಿರ್ಲಕ್ಷ್ಯ: ಕಳೆದ ಅನೇಕ ತಿಂಗಳುಗಳಿಂದ ನಗರದಲ್ಲಿ ಪ್ರಯಾಣಿಕರು ಇಂಥದ್ದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್‌ ಓಡಿಸಲು ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ಬಗ್ಗೆ ಅನೇಕರು ಡಿಪೋ ವ್ಯವಸ್ಥಾಪಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲವೆಂದು ಪ್ರಯಾಣಿಕ ಶಿವಪ್ಪ ದೂರಿದ್ದಾರೆ.

ಶನಿವಾರ ಬೆಂಗಳೂರು ಮಾರ್ಗಕ್ಕೆ 5 ಬಸ್‌ಗಳನ್ನು ಬಿಡಲಾಗಿದೆ. ಅದರಂತೆ ಲಿಂಗಸೂಗುರು, ದೇವದುರ್ಗ ಇತರೆ ತಾಲೂಕುಗಳಿಂದಲೂ ಬಸ್‌ಗಳನ್ನು ಬಿಡಲಾಗಿದೆ. ಸಂಜೆ 6ಗಂಟೆಯಿಂದಲೇ ಬೆಂಗಳೂರಿಗೆ ಬಸ್‌ ಇರುತ್ತವೆ. ಆ ಸಮಯದಲ್ಲೇ ಅವರು ಪ್ರಯಾಣಿಸಬೇಕು. ಚಾಲಕರಿಗೆ ಒತ್ತಡ ಹೇರಿ ಬಸ್‌ಗಳ ವ್ಯವಸ್ಥೆ ಮಾಡಿದರೆ ನಂತರ ಅನಾಹುತ ಆದರೆ ಅದರ ಹೊಣೆ ನಾನು ಹೊರಬೇಕಾಗುತ್ತದೆ. ಪ್ರಯಾಣಿಕರು ಸಹಕರಿಸಬೇಕು.
ಸಿದ್ಧಪ್ಪ,
ಸಿಂಧನೂರು ಡಿಪೋ ವ್ಯವಸ್ಥಾಪಕ

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.