28ಕ್ಕೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಸಮ್ಮೇಳನಾಧ್ಯಕ್ಷರಾಗಿ ಡಾ.ಎನ್.ಎಸ್.ಶಂಕರೇಗೌಡ ಆಯ್ಕೆ • ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಉದ್ಘಾಟನೆ
Team Udayavani, Jun 24, 2019, 11:40 AM IST
ಮಳವಳ್ಳಿ; ಕನ್ನಡ ಭಾಷೆ ಹಾಗೂ ಸಾಹಿತ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜೂ.28 ರಂದು ನಡೆಯುತ್ತಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಶಾಸಕ ಡಾ. ಕೆ ಅನ್ನದಾನಿ ತಿಳಿಸಿದರು.
ತಾಲೂಕು ಕಚೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಅಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಮಂಟೇಸ್ವಾಮಿ ಮಹಾದ್ವಾರ, ಎಂ.ವಿ ವೆಂಕಟಪ್ಪ ಮಂಟಪ, ಮಳವಳ್ಳಿ ಸುಂದ್ರಮ್ಮ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಮ್ಮೇಳನದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು ನೆರೆವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಡಾ. ಕೆ.ಅನ್ನದಾನಿ ವಹಿಸಲಿದ್ದಾರೆ ಎಂದು ಹೇಳಿದರು.
ಮೆರವಣಿಗೆ: ಜಾನಪದ ಕಲಾಮೇಳದೊಂದಿಗೆ ಸಮ್ಮೇಳನದ ಅಧ್ಯಕ್ಷರನ್ನು ಮೆರವಣಿಗೆ ಮೂಲಕ ತಾಪಂ ವತಿಯಿಂದ ಅಂಬೇಡ್ಕರ್ ಭವನದವರೆಗೆ ಕರೆ ತರಲಾಗುವುದು, ಸಮ್ಮೇಳ ನಾಧ್ಯಕ್ಷರ ಮೆರವಣಿಗೆಯನ್ನು ಚಿತ್ರನಟ ನಿಖೀಲ್ಕುಮಾರಸ್ವಾಮಿ ಉದ್ಘಾಟಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ಸಿ.ಕೆ ರವಿಕುಮಾರ ಚಾಮಲಾಪುರ ಆಶಯ ನುಡಿ ನುಡಿಯುವರು. ಸಂಸದೆ ಎ ಸುಮಲತಾ ಪುಸ್ತಕ ಮಳಿಗೆ ಉದ್ಘಾಟಿಸುವರು. ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಯನ್ನು ಜಿಪಂ ಅಧ್ಯಕ್ಷೆ ನಾಗರತ್ಮಮ್ಮ ನೆರೆವೇರಿಸಲಿದ್ದು, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡರು ನಿಕಟಪೂರ್ವ ಅಧ್ಯಕ್ಷ ಮ.ಸಿ.ನಾರಯನ್ರನ್ನು ಅಭಿನಂದಿಸಲಿದ್ದಾರೆ. ಡಾ. ಎನ್.ಎಸ್.ಶಂಕರೇಗೌಡ ಸಮ್ಮೇಳನಾ ಧ್ಯಕ್ಷರ ಭಾಷಣ ಮಾಡಲಿದ್ದಾರೆ ಎಂದರು.
ಕವಿಗೋಷ್ಠಿ: ಮಧ್ಯಾಹ್ನ 1 ಗಂಟೆಗೆ ಮಳವಳ್ಳಿ ತಾಲೂಕು ದರ್ಶನ ಎಂಬ ವಿಷಯವಾಗಿ ಮೊದಲನೇ ಗೋಷ್ಠಿ, ಸಾಹಿತಿ ಡಾ. ಬಸಪ್ಪ ನೆಲಮಾಕನಗಳ್ಳಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಸಂಜೆ 5 ಗಂಟೆಗೆ ಸಮ್ಮೇಳನದ ಸಮರೋಪ ಸಮಾರಂಭ ನಡೆಯಲಿದ್ದು, ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಸಾಧಕರಿಗೆ ಸನ್ಮಾನಿಸುವರು. ಸಮ್ಮೇಳನಾಧ್ಯಕ್ಷರಿಗೆ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಭಿನಂದನೆ ಸಲ್ಲಿಸುವರು. ಪ್ರೊ. ಜಿ.ಟಿ.ವೀರಪ್ಪ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ಪ್ರೋತ್ಸಾಹ: ಗ್ರಾಮೀಣ ಪ್ರದೇಶದಲ್ಲಿ ಹಲವಾರು ಕವಿಗಳು ಇಂದಿಗೂ ಕೂಡ ಎಲೆಮರೆಕಾಯಿ ಯಂತಿದ್ದಾರೆ, ಅವರನ್ನು ಗುರುತಿಸಿ ಪ್ರೋತ್ಸಾಹಿಸಲು ಸಾಹಿತ್ಯ ಸಮ್ಮೇಳನ ಸಹಾಯಕವಾಗಲಿದೆ. ಸಾಹಿತ್ಯ ಸಮ್ಮೇಳನದಲ್ಲಿ ನಾಡು, ನುಡಿ, ನೆಲ, ಜಲ, ರೈತರ ಸಮಸ್ಯೆಗಳು, ಕನ್ನಡ ಭಾಷೆ ಉಳಿವು ಸೇರಿದಂತೆ ಇತರೆ ವಿಷಯಗಳ ಬಗ್ಗೆ ವಿದ್ವಾಂಸರು ಹಾಗೂ ವಿಚಾರವಂತರಿಂದ ಗೋಷ್ಠಿಗಳು ನಡೆಯಲಿದ್ದು, ಸಾಹಿತಿಗಳು, ವಿದ್ಯಾರ್ಥಿಗಳು, ಕನ್ನಡ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು.
ಕಸಾಪ ಜಿಲ್ಲಾಧ್ಯಕ್ಷ ರವಿಚಾಮಲಪುರ, ತಾಲೂಕು ಅಧ್ಯಕ್ಷ ಕೊದೇನಕೊಪ್ಪಲು ದೇವರಾಜು, ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ, ವಕೀಲ ಮರಿಸ್ವಾಮಿ, ಸಂಘಟನೆ ಕಾರ್ಯದರ್ಶಿ ಜಯಶಂಕರೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಕೂಟದಿಂದ ಜೆಡಿಎಸ್ ಹೊರ ಹಾಕಿ: ಶಿವರಾಮೇ ಗೌಡ
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
MUST WATCH
ಹೊಸ ಸೇರ್ಪಡೆ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Covishield Vaccine; ಹಾಕಿಸಿಕೊಂಡವರು ಐಸ್ಕ್ರೀಮ್ ತಿನ್ನಬಾರದಾ?
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!