ಮಾರ್ಗೋನಹಳ್ಳಿ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ

ಶಾಲಾ ಆವರಣವೇ ದನದ ಕೊಟ್ಟಿಗೆ, ವಾಹನ ನಿಲ್ದಾಣ • ಕುಸಿಯುವ ಹಂತದಲ್ಲಿ ಶಾಲಾ ಕಟ್ಟಡ

Team Udayavani, Jun 24, 2019, 11:47 AM IST

mandya-tdy-3..

ಕೆ.ಆರ್‌.ಪೇಟೆ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ದನಗಳನ್ನು ಕಟ್ಟಿ ಹಾಕಿರುವುದು.

ಕೆ.ಆರ್‌.ಪೇಟೆ: ಮುಖ್ಯಮಂತ್ರಿಗಳು ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯಮಾಡುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಅವರ ಗಮನಕ್ಕೆ ಅಧಿಕಾರಿಗಳು, ಶಾಸಕರು ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲ ಸೌಲಭ್ಯಗಳಲ್ಲದೆ ಇರುವ ಬಗ್ಗೆ ಮಾಹಿತಿ ನೀಡಿ ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಗೆ ಕೈಜೊಡಿಸಬೇಕಿದೆ.

ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂಬುದು ಒಂದು ಆರೋಪವಾದರೆ, ಬಹುತೇಕ ಸರ್ಕಾರಿ ಶಾಲಾ ಕಟ್ಟಡಗಳು ಯಾವಾಗಬೇಕಾದರೂ ಕುಸಿದು ಬೀಳುವ ಆತಂಕದಲ್ಲಿದೆ. ಇದಕ್ಕೆ ಉದಾರಹಣೆ ಎಂಬಂತೆ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಕುಸಿದು ಬಿದ್ದಿದ್ದು, ದಶಕಗಳೆ ಕಳೆದಿದೆ. ಶಾಲಾ ಆವರಣವನ್ನು ದನದ ಕೊಟ್ಟಿಗೆ, ವಾಹನಗಳನ್ನು ನಿಲ್ಲಿಸುವ ನಿಲ್ದಾಣವಾಗಿ ಬಳಕೆಯಾಗುತ್ತಿದ್ದು ಇಂತಹ ಪರಿಸ್ಥಿತಿಯಲ್ಲಿ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದಲು ಸಾಧ್ಯವಿಲ್ಲಾ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಪಾಠ ಮಾಡಲು ಸಮಯ ಕೊಡಿ? : ಸರ್ಕಾರ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶಾಲೆಯನ್ನು ತೆರೆದಿದೆ ಇಲ್ಲಿ ಈಗ ಮುಖ್ಯವಾಗಿ ಮಕ್ಕಳ ಕೊರತೆ ಕಂಡುಬರುತ್ತಿದೆ. ಇದಕ್ಕೆ ಪ್ರಮುಖ ಕಾರಣ ಗ್ರಾಮೀಣ ಭಾಗದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮೂಲಭೂತ ಸೌಲಭ್ಯಗಳು ಸಿಗದಿರುವುದು. ಒಂದರಿಂದ ಐದನೆ ತರಗತಿ ಇರುವ ಶಾಲೆಯಲ್ಲಿ 12 ರಿಂದ 30 ಮಕ್ಕಳು ಇರುವುದನ್ನು ನಾವು ತಾಲೂಕಿನಲ್ಲಿ ಕಾಣಬಹುದಾಗಿದೆ. ಇಲ್ಲಿಗೆ ಸರ್ಕಾರ ಇಬ್ಬರು ಶಿಕ್ಷಕರನ್ನು ನೇಮಕ ಮಾಡುತ್ತಾರೆ. ಇದರಲ್ಲಿ ಒಬ್ಬರು ಮಕ್ಕಳಿಗೆ ಬಿಸಿಯೂಟದ ಸಿದ್ಧತೆ ಹಾಗೂ ಪ್ರತಿದಿನ ದಾಖಲು ಮಾಡಬೇಕಾಗಿರುವ ಸುಮಾರು 17 ವಿಷಯಗಳನ್ನು ಕಡತಗಳಿಗೆ ನಮೂದಿಸುವುದರಲ್ಲಿ ಸಮಯ ಮುಗಿದು ಹೋಗುತ್ತದೆ. ಇನ್ನುಳಿದ ಒಬ್ಬ ಶಿಕ್ಷಕರು ಐದು ತರಗತಿ ಮಕ್ಕಳಿಗೆ ಎಷ್ಟು ಪಾಠ ಮಾಡಲು ಸಾಧ್ಯ ಎಂಬುದನ್ನು ಬಿಡಿಸಿ ಹೇಳುವ ಅವಶ್ಯಕತೆಯಿಲ್ಲ.

ಮುರಿದು ಬಿದ್ದಿರುವ ಶಾಲಾ ಕಟ್ಟಡ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಕಟ್ಟಡ ಅರ್ಧಭಾಗಕ್ಕೆ ಕುಸಿದು ಬಿದ್ದು ದಶಕಗಳೆ ಕಳೆದಿದ್ದರೂ ಅದನ್ನು ಸರಿಪಡಿಸುವ ಬದಲು ಬದಲಿ ಕೊಠಡಿ ವ್ಯವಸ್ಥೆ ಮಾಡಿಕೊಂಡು ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಶಾಲೆ ಕಾಂಪೌಂಡ್‌ ಗೋಡೆ ಕುಸಿದು ಬಿದ್ದು ಕೇವಲ ನಾಮಫ‌ಲಕ ಮಾತ್ರ ಉಳಿದುಕೊಂಡಿದೆ. ಶಾಲಾ ಕಟ್ಟಡ ಅರ್ಧ ಭಾಗ ಕುಸಿದು ಬಿದ್ದಿದೆ. ಇದನ್ನು ಗ್ರಾಮಕ್ಕೆ ಮೊದಲ ಸಾರಿ ಭೇಟಿ ನೀಡುವವರು ಗಮನಿಸಿದರೆ ಯಾವುದೋ ಸ್ಮಾರಕದಂತೆ ಭಾಸವಾಗುತ್ತದೆ. ಆದರೆ ವಾಸ್ತವವಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಚುನಾಯಿತ ಜನ ಪತ್ರತಿನಿಧಿಗಳ ನಿರ್ಲಕ್ಷ್ಯದಿಂದ ಶಾಲಾ ಕಟ್ಟಡ ದುರಸ್ತಿಯಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಕಟ್ಟಡ ಕುಸಿದರೆ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆ:

ನಮ್ಮ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ ಮಕ್ಕಳಿಗೆ ಪಾಠ ಹೇಳಿಕೊಡಲಾಗುತ್ತಿದೆ. ಆದರೆ ನಮ್ಮ ಶಾಲಾ ಕಟ್ಟಡ ಕುಸಿದು ಬಿದ್ದು ದಶಕಗಳೆ ಕಳೆದಿದ್ದರೂ ಅವುಗಳನ್ನು ಮರು ನಿರ್ಮಾಣ ಮಾಡುವ ಮನಸ್ಸು ಅಧಿಕಾರಿಗಳಿಂದ ಬಂದಿಲ್ಲ. ಈಗ ಇರುವ ಕೇವಲ 3 ಕೊಠಡಿಗಳಲ್ಲಿ ಏಳು ತರಗತಿಗಳನ್ನು ನಡೆಸಬೇಕು. ಇದರಿಂದ ಯಾವುದೇ ಮಗುವಿಗೆ ಗುಣಮಟ್ಟದ ಶಿಕ್ಷಣ ಸಿಗುವುದು ಕಷ್ಠಸಾಧ್ಯ. ಎಲ್ಲಕ್ಕಿಂತ ಮುಖ್ಯವಾಗಿ ಕುಸಿದು ಬಿದ್ದಿರುವ ಶಾಲಾ ಕಟ್ಟಡವನ್ನು ನೆಲಸಮ ಮಾಡಬೇಕು. ಒಂದು ವೇಳೆ ಶಾಲೆಯ ಬಳಿಗೆ ತೆರಳುವ ಯಾವುದಾದರೂ ಮಗುವಿನ ತಲೆಯ ಮೇಲೆ ಏನಾದರು ಕಟ್ಟಡ ಕುಸಿದು ಬಿದ್ದರೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ನಾವುಗಳು ಶಿಕ್ಷಣ ಇಲಾಖೆಗೆ ಪತ್ರಬರೆದಿದ್ದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಮಾರ್ಗೋನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್‌ ಬೇಸರ ವ್ಯಕ್ತಪಡಿಸಿದರು.
•ಎಚ್.ಬಿ.ಮಂಜುನಾಥ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.