ವಿಧಾನಸೌಧದಲ್ಲೇ ವ್ಯಕ್ತಿಯಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಯತ್ನ!
Team Udayavani, Jun 24, 2019, 2:08 PM IST
ಬೆಂಗಳೂರು: ವಿಧಾನಸೌಧದ 3ನೇ ಮಹಡಿಯ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ. ಆದರೆ ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ.
ವಿಧಾನಸೌಧದ 3ನೇ ಮಹಡಿಯ 332ರ ಕೊಠಡಿ ಸಂಖ್ಯೆಯ ಶೌಚಾಲಯದಲ್ಲಿ ವ್ಯಕ್ತಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ, ಈ ವ್ಯಕ್ತಿಯನ್ನು ರೇವಣ್ಣ ಕುಮಾರ್ ಎಂದು ಗುರುತಿಸಲಾಗಿದೆ.
ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಚಿಕ್ಕಬಳ್ಳಾಪುರ ಮೂಲದ ಆರ್.ರೇವಣ್ಣ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.