ಹಾಲಿ v/s ಮಾಜಿ ಸಿಎಂ ಸಮರ; ಪ್ರಜಾ ವೇದಿಕೆ ಸರ್ಕಾರಿ ಕಟ್ಟಡ ಧ್ವಂಸಕ್ಕೆ ಜಗನ್ ಆದೇಶ!
Team Udayavani, Jun 24, 2019, 3:56 PM IST
ವಿಜಯವಾಡ:ರಾಜಕೀಯದ ಅಚ್ಚರಿ ಬೆಳವಣಿಗೆ ಎಂಬಂತೆ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೃಷ್ಣಾ ನದಿ ತೀರದ ಸಮೀಪ ಕಚೇರಿಯ ಸಭೆ ನಡೆಸುವ ಉದ್ದೇಶದಿಂದ ನಿರ್ಮಿಸಿದ್ದ “ಪ್ರಜಾ ವೇದಿಕೆ” ಸರ್ಕಾರಿ ಕಟ್ಟಡವನ್ನು ಒಡೆದು ಹಾಕುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸೋಮವಾರ ಆದೇಶ ನೀಡಿದ್ದಾರೆ.
ಪ್ರಜಾ ವೇದಿಕೆ ಕಟ್ಟಡ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮನೆಯ ಸಮೀಪ ಇದ್ದು, ಇದನ್ನು 2017ರಲ್ಲಿ ಸಿಎಂ ಆಗಿದ್ದ ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿತ್ತು.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಭಾರೀ ಬಹುಮತದೊಂದಿಗೆ ಆಂಧ್ರಪ್ರದೇಶದ ಗದ್ದುಗೆ ಏರಿತ್ತು. ಮುಖ್ಯಮಂತ್ರಿ ಆದ ನಂತರ ಜಗನ್ ಮೊದಲ ಬಾರಿಗೆ ಪ್ರಜಾ ವೇದಿಕೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದರು.
ಈ ಸಭೆಯಲ್ಲಿ ಮಾತನಾಡಿದ ಸಿಎಂ ಜಗನ್, ಪ್ರಜಾ ವೇದಿಕೆ ಕಟ್ಟಡದಲ್ಲಿ ನಡೆಯುತ್ತಿರುವ ಕೊನೆಯ ಸಭೆ ಇದಾಗಿದೆ. ಇದು ಅಕ್ರಮ ಕಟ್ಟಡ, ಈ ಕಟ್ಟಡವನ್ನು ಧ್ವಂಸಗೊಳಿಸಬೇಕು ಎಂದು ಹೇಳಿದ್ದರು.
ಪ್ರಜಾ ವೇದಿಕೆ ಕಟ್ಟಡದಲ್ಲಿ ಸಭೆ ನಡೆಸುವುದು ಕಾನೂನು ಬಾಹಿರ. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಪ್ರಜಾ ವೇದಿಕೆ ಕಟ್ಟಡ ನಿರ್ಮಿಸಲಾಗಿದೆ. ನಾವೀಗ ಪ್ರತಿಯೊಂದು ಇಲಾಖೆಯಲ್ಲಿಯೂ ಪಾರದರ್ಶಕತೆ ತರಬೇಕಾಗಿದೆ. ಅಲ್ಲದೇ ಕಾನೂನು ಬಾಹಿರ ಚಟುವಟಿಕೆ ನಡೆಸಿದ ಚಂದ್ರಬಾಬು ನಾಯ್ಡು ವಿರುದ್ಧ ಸಾಧ್ಯವಿರುವ ಕಠಿಣ ಕ್ರಮ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ