ನಾಟಕ ಮನರಂಜನೆಗಷ್ಟೇ ಸೀಮಿತವಲ್ಲ: ಡಾ| ರಾಜೇಂದ್ರ ಚೆನ್ನಿ


Team Udayavani, Jun 24, 2019, 5:15 PM IST

24-June-43

ಶಿವಮೊಗ್ಗ: ಕಿತ್ತೂರ ನಿರಂಜನಿ ಹಾಗೂ ವೀರ ಉತ್ತರಕುಮಾರ ಪುಸ್ತಕವನ್ನು ಗಣ್ಯರು ಲೋಕಾರ್ಪಣೆ ಮಾಡಿದರು.

ಶಿವಮೊಗ್ಗ: ನಾಟಕ ಸಂಸೃ್ಕತಿ ಕುಸಿಯುತ್ತಿರುವ ಇಂದಿನ ಸಂದರ್ಭದಲ್ಲಿ ಡಾ| ಸಾಸ್ವೆಹಳ್ಳಿ ಸತೀಶ್‌ ಅವರು ಒಳ್ಳೆಯ ನಾಟಕಗಳನ್ನು ನಿರ್ದೇಶಿಸಿ, ಅಭಿನಯಿಸಿ ಎಲ್ಲರಿಗೂ ತಲುಪಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ವಿಮರ್ಶಕ ಡಾ| ರಾಜೇಂದ್ರ ಚೆನ್ನಿ ಮೆಚ್ಚುಗೆ ಸೂಚಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಹೊಂಗಿರಣ ಶಿವಮೊಗ್ಗದಿಂದ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ| ಸಾಸ್ವೆಹಳ್ಳಿ ಸತೀಶ್‌ ಅವರ ‘ಕಿತ್ತೂರ ನಿರಂಜನಿ’ ಹಾಗೂ ‘ವೀರ ಉತ್ತರಕುಮಾರ’ ನಾಟಕ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ನಾಟಕಗಳು ಕೇವಲ ಮನರಂಜನೆಗೆ ಸೀಮಿತವಲ್ಲ. ಎಲ್ಲರೂ ಒಂದೆಡೆ ಬೆರೆತು ಸಮುದಾಯವಾಗಿ ಕುಳಿತು ನೋಡುವಂತೆ ಮಾಡುವ ಒಂದು ಸಂಸ್ಕೃತಿ. ಆದರೆ, ಪ್ರಸ್ತುತ ದಿನಗಳಲ್ಲಿ ನಾಟಕ ಸಂಸ್ಕೃತಿ ಅಪಾಯದಲ್ಲಿದೆ. ಹೊಸ ಮಾಧ್ಯಮಗಳ ಪ್ರಭಾವದಿಂದಾಗಿ ನಾಗರಿಕ ಸಮುದಾಯ ಒಟ್ಟಿಗೆ ಕುಳಿತು ನಾಟಕ ನೋಡುವ ದಿನಗಳು ದೂರವಾಗುತ್ತಿವೆ. ಇಂತಹ ದಿನಗಳಲ್ಲೂ ಸತೀಶ್‌ ಅವರು ಒಳ್ಳೆಯ ನಾಟಕಗಳನ್ನು ಶಿವಮೊಗ್ಗದ ಜನರಿಗೆ ನೀಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿರುವುದು ಆರೋಗ್ಯಕರ ಬೆಳವಣಿಗೆ ಎಂದರು.

ಉಪನ್ಯಾಸಕ ಸುರೇಶ್‌ ಶಿಕಾರಿಪುರ ‘ವೀರ ಉತ್ತರಕುಮಾರ’ ನಾಟಕದ ಕುರಿತು ಮಾತನಾಡಿ, ಲೇಖಕರು ವೀರ ಉತ್ತರ ಕುಮಾರ ನಾಟಕದ ಮೂಲಕ ಸಮಕಾಲೀನ ರಾಜಕೀಯ ಸಂದರ್ಭವನ್ನು ಹಾಗೂ ಪೋಷಕರು ತಮ್ಮ ಮಕ್ಕಳನ್ನು ಹೇಗೆ ಬೆಳೆಸಬೇಕು ಎನ್ನುವ ರೀತಿಯನ್ನು ಮನದಟ್ಟು ಮಾಡಿದ್ದಾರೆ. ಉತ್ತರಕುಮಾರನ ಒಳಗಡೆ ಇರುವ ಮುಗ್ಧತೆ, ಅಂತಃಕರಣವನ್ನು ಲೇಖಕರು ಸೂಕ್ಷ್ಮವಾಗಿ ಗ್ರಹಿಸಿದ್ದಾರೆ. ನಾಜೂಕಾದ ಭಾಷೆ ಇಲ್ಲಿದೆ ಎಂದರು.

ಈ ದೇಶದಲ್ಲಿ ಮಾಧ್ಯಮಗಳು ಎಲ್ಲವನ್ನು ಸಮರವೆಂದು ಬಿಂಬಿಸುತ್ತಿರುವುದು ದೇಶದ ಬಹುದೊಡ್ಡ ದುರಂತ. ನಮ್ಮ ಜನರ ಮನಸ್ಥಿತಿಗಳು ಸಹ ಕ್ಷುಲ್ಲಕ ವಿಚಾರಗಳೇ ಈ ದೇಶದ ದೊಡ್ಡ ಸಮಸ್ಯೆ ಎಂದು ನಂಬುತ್ತಿವೆ. ಅಧಿಕಾರದಲ್ಲಿ ಕುಳಿತಿರುವವರು ಲವ್‌ ಜಿಹಾದ್‌, ರಾಮ, ಗೋವಿನ ಹೆಸರಿನಲ್ಲಿ ಕ್ಲುಲ್ಲಕ ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಶಿಕ್ಷಣ, ಕೃಷಿ, ಉದ್ಯೋಗ ಎಂದಿಗೂ ದೊಡ್ಡ ಸಮಸ್ಯೆಗಳಾಗಿ ಕಾಣಲೇ ಇಲ್ಲ. ಇಂತಹ ವಿಡಂಬನಾತ್ಮಕ ವಿಚಾರಗಳನ್ನು ಉತ್ತರ ಕುಮಾರ ನಾಟಕದಲ್ಲಿ ನೋಡಬಹುದು ಎಂದು ಉಪನ್ಯಾಸಕ ಸುರೇಶ್‌ ಶಿಕಾರಿಪುರ’ ಅಭಿಪ್ರಾಯಪಟ್ಟರು.

ಬೆಂಗಳೂರಿನ ಉಪನ್ಯಾಸಕ ಶಿವಕುಮಾರ ಮಾವಲಿ ‘ಕಿತ್ತೂರ ನಿರಂಜನಿ’ ನಾಟಕದ ಕುರಿತು ಮಾತನಾಡಿ, ಎಲ್ಲಾ ಧರ್ಮಗಳ ಮೂಲಭೂತವಾದ ಕಿತ್ತೂರ ನಿರಂಜನಿ ನಾಟಕದಲ್ಲಿ ಕಟ್ಟಿಕೊಡಲಾಗಿದೆ. ಎರಡು ಧರ್ಮಗಳ ನಡುವಿನ ಸಾಮರಸ್ಯ ತಿಳಿಸುವ ಯತ್ನವನ್ನು ಲೇಖಕರು ಮಾಡಿದ್ದಾರೆ. ರಾಜಕೀಯ, ಪ್ರೀತಿ ಮತ್ತು ಧರ್ಮದ ಸೂಕ್ಷ್ಮತೆಯನ್ನು ನಾಟಕದ ಮೂಲಕ ತಿಳಿಯಬಹುದು ಎಂದರು. ಲೇಖಕ ಡಾ| ಸಾಸ್ವೆಹಳ್ಳಿ ಸತೀಶ್‌ ಮಾತನಾಡಿದರು. ಲೇಖಕ ಬಿ. ಚಂದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಅರವಿಂದ್‌ ಇಂಡಿಯಾದ ಸಚಿನ್‌ ಕುಡತೂರಕರ್‌, ಚಂದ್ರಶೇಖರ ಹಿರೇಗೋಣಿಗೆರೆ, ಚಂದ್ರಶೇಖರ ಶಾಸ್ತ್ರಿ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.