ಪಿಡಿಒಗಳ ವಿರುದ್ಧ ಶಿಸ್ತುಕ್ರಮದ ಎಚ್ಚರಿಕೆ
Team Udayavani, Jun 25, 2019, 3:00 AM IST
ಬೆಂಗಳೂರು: ಕೇಂದ್ರ ಸರ್ಕಾರದ “ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ತ್ವರಿತ ಅನುಷ್ಠಾನಕ್ಕೆ ರೈತರ ಮಾಹಿತಿಗಳನ್ನು “ಪಿಎಂ-ಕಿಸಾನ್ ಪೋರ್ಟ್ಲ್’ನಲ್ಲಿ ಅಳವಡಿಸಲು ಉದಾಸೀನತೆ ತೋರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ.
ಕೇಂದ್ರ ಸರ್ಕಾರದ ಈ ಯೋಜನೆಯನ್ನು ಎಲ್ಲ ಭೂಹಿಡುವಳಿದಾರರಿಗೂ ವಿಸ್ತರಿಸಿ ಇದೇ ಜೂ.7ರಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಆ ಸಂಬಂಧ ಜೂ.17ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ಇತರ ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿದ್ದಾರೆ.
ಅದರಂತೆ, ರೈತರ ಮಾಹಿತಿಗಳನ್ನು ಜೂ.30ರೊಳಗೆ ಕಡ್ಡಾಯವಾಗಿ ಪೋರ್ಟಲ್ನಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪರಿಷ್ಕೃತ ಮಾರ್ಗಸೂಚಿಗಳ ಅನ್ವಯ ನಿಗದಿತ ನಮೂನೆಗಳನ್ನು ರೈತರಿಗೆ ನೀಡಿ ಮಾಹಿತಿಗಳನ್ನು ಪಡೆದು ಮುಂದಿನ ಕ್ರಮ ವಹಿಸಬೇಕು. ಉದಾಸೀನತೆ ತೋರುವ ಪಿಡಿಒಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ