ಆರ್ಬಿಐಗೆ ವಿರಳ್ ಆಚಾರ್ಯ ರಾಜೀನಾಮೆ
Team Udayavani, Jun 25, 2019, 5:00 AM IST
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ನ ಡೆಪ್ಯುಟಿ ಗವರ್ನರ್ ವಿರಳ್ ಆಚಾರ್ಯ ತಮ್ಮ ಸೇವಾ ಅವಧಿಗೆ ಮುಕ್ತಾಯವಾಗುವ ಆರು ತಿಂಗಳು ಮೊದಲೇ ರಾಜೀನಾಮೆ ನೀಡಿದ್ದಾರೆ. ಏಳು ತಿಂಗಳಲ್ಲಿ ಆರ್ಬಿಐಗೆ ರಾಜೀನಾಮೆ ನೀಡಿದ ಎರಡನೇ ಪ್ರಮುಖ ವ್ಯಕ್ತಿ ಇವರಾಗಿದ್ದಾರೆ. 2018ರ ಡಿಸೆಂಬರ್ನಲ್ಲಿ ಗವರ್ನರ್ ಊರ್ಜಿತ್ ಪಟೇಲ್ ಸೇವಾ ಅವಧಿ ಮುಗಿಯುವುದಕ್ಕೂ ಒಂಬತ್ತು ತಿಂಗಳು ಮೊದಲೇ ರಾಜೀನಾಮೆ ನೀಡಿದ್ದರು. ಆಚಾರ್ಯ ವೈಯಕ್ತಿಕ ಕಾರಣಗಳಿಂದ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ರಾಜೀನಾಮೆ ಪತ್ರದಲ್ಲಿ ನಮೂದಿಸಿದ್ದಾರೆ. ಆರ್ಬಿಐ ಮಂಡಳಿಯ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೇಮಕಾತಿ ಸಮಿತಿ ಕೂಡ ವಿರಳ್ ಆಚಾರ್ಯ ರಾಜೀನಾಮೆಯನ್ನು ಅಂಗೀಕರಿಸಬೇಕಿದೆ.
ಆರ್ಬಿಐ ಸ್ವಾಯತ್ತೆ ವಿಚಾರವನ್ನು ಆಗಾಗ್ಗೆ ಪ್ರಸ್ತಾಪಿಸುತ್ತಿದ್ದ ಆಚಾರ್ಯ, ಆರ್ಬಿಐ ಮತ್ತು ಸರ್ಕಾರದ ಭಿನ್ನಾಭಿಪ್ರಾಯಗಳ ಬಗ್ಗೆ ಕಳೆದ ಅಕ್ಟೋಬರ್ನಲ್ಲಿ ಹೇಳಿಕೆ ನೀಡಿದ್ದು ಭಾರಿ ವಿವಾದ ಸೃಷ್ಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್