26ಕ್ಕೆ ಮತ್ತೆ ಕಲ್ಯಾಣ ಆಂದೋಲನ ಪೂರ್ವಭಾವಿ ಸಭೆ


Team Udayavani, Jun 25, 2019, 7:35 AM IST

dg-tdy-2..

ದಾವಣಗೆರೆ: ಸಹಮತ... ವೇದಿಕೆ ಪದಾಧಿಕಾರಿಗಳ ಸುದ್ದಿಗೋಷ್ಠಿ.

ದಾವಣಗೆರೆ: ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಆ. 22 ರಂದು ನಡೆಯಲಿರುವ ಮತ್ತೆ ಕಲ್ಯಾಣ…ಆಂದೋಲನದ ಹಿನ್ನೆಲೆಯಲ್ಲಿ ಜೂ. 26 ರಂದು ಕುವೆಂಪು ಕನ್ನಡ ಭವನದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಹಮತ ವೇದಿಕೆಯ ಡಾ| ಎಚ್.ಎಸ್‌. ಮಂಜುನಾಥ್‌ ಕುರ್ಕಿ ತಿಳಿಸಿದ್ದಾರೆ.

ಮತ್ತೆ ಕಲ್ಯಾಣ… ಆಂದೋಲನದ ಯಶಸ್ಸಿಗೆ ರೂಪುರೇಷೆ, ಎಲ್ಲಾ ಜಾತಿ, ವರ್ಗದ ಮಠಾಧೀಶರು, ಮುಖಂಡರನ್ನು ಆಹ್ವಾನಿಸುವುದು ಒಳಗೊಂಡಂತೆ ಅನೇಕ ವಿಚಾರಗಳ ವಿನಿಮಯ, ಚಿಂತನೆ-ಮಂಥನ ಮಾಡುವ ಉದ್ದೇಶದಿಂದ ಬುಧವಾರ ಬೆಳಗ್ಗೆ 11ಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ನಾಡಿನಲ್ಲಿ 900 ವರ್ಷಗಳ ಹಿಂದೆ ಬಸವಾದಿ ಶರಣರ ನೇತೃತ್ವದಲ್ಲಿ ಜಾತಿ, ಮತ, ಪಂಥ, ಲಿಂಗ ಭೇದ, ಅಸಮಾನತೆಯ ವಿರುದ್ಧ ಕಲ್ಯಾಣ ಕ್ರಾಂತಿ ನಡೆದಿತ್ತು. ಪ್ರಸ್ತುತ ವಾತಾವರಣದಲ್ಲಿ ಅಂತಹ ಕ್ರಾಂತಿಯ ಅಗತ್ಯತೆ ಇದೆ. ಅಂತಹ ತತ್ವಗಳು, ಮಾನವೀಯ ಚಿಂತನೆಗಳತ್ತ ಹೊರಳಿ ನೋಡುವ ಪ್ರಯತ್ನವೇ ಮತ್ತೆ ಕಲ್ಯಾಣ… ಆಂದೋಲನ ಎಂದು ತಿಳಿಸಿದರು.

ಮತ್ತೆ ಕಲ್ಯಾಣ ಆಂದೋಲನ… ಕೇವಲ ಒಂದು ಸಮಾರಂಭ, ವಿಚಾರ ಸಂಕಿರಣ ಅಲ್ಲ. ಸಮಾಜದ ಇಂದಿನ ತಲ್ಲಣಗಳಿಗೆ ಇದೇ ನೆಲದಲ್ಲಿ ಜನ್ಮ ತಳೆದ ಶರಣ ಚಳವಳಿಯ ತಾತ್ವಿಕ ಭಿತ್ತಿಯೊಳಗಿನಿಂದ ಪರಿಹಾರಗಳನ್ನು ಹುಡುಕಿಕೊಳ್ಳುವ ಅನ್ವೇಷಣೆ. ವ್ಯಕ್ತಿ, ಕಸುಬು, ಜಾತಿ, ಲಿಂಗ, ಭಾಷೆ, ಧರ್ಮಗಳ ಹೆಸರಲ್ಲಿ ಮನುಷ್ಯರು ಸಹಜೀವಿಗಳಿಂದ ಸರಿಯುತ್ತಾ ಒಡೆದು ಹೋಗುತ್ತಿರುವ ಆತಂಕದ ಮಧ್ಯೆ ಜೊತೆ ಜೊತೆಯಾಗಿಯೇ ಮುನ್ನಡೆಯಲು ತೊಡಗುತ್ತಿರುವ ಹೊಸ ಪ್ರಕ್ರಿಯೆ ಎಂದು ತಿಳಿಸಿದರು.

ಆಗಸ್ಟ್‌ ತಿಂಗಳ ಪೂರ್ತಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ನಡೆಯಲಿರುವ ಮತ್ತೆ ಕಲ್ಯಾಣ ಆಂದೋಲನ… ಆ.1 ರಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಪ್ರಾರಂಭವಾಗಲಿದೆ. 12ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿಯ ನಂತರ ಕೆಲವರು ವಚನಗಳನ್ನು ಸುಡುವ ಪ್ರಯತ್ನ ನಡೆಸಿದಾಗ ವಚನಕಾರ್ತಿ ಅಕ್ಕನಾಗಮ್ಮ ವಚನಗಳ ಗಂಟು ಹೊತ್ತುಕೊಂಡು ಬಂದು ತರೀಕೆರೆ ಸಮೀಪದ ಎಣ್ಣೆಹಳ್ಳಿಯಲ್ಲಿ ಸಂರಕ್ಷಿಸಿ, ಸಂವರ್ಧನೆಗೆ ತಂದ ನೆನಪಿನಲ್ಲಿ ತರೀಕೆರೆಯಿಂದ ಪ್ರಾರಂಭಿಸಿ, ಆ.30 ರಂದು ಬಸವ ಕಲ್ಯಾಣದಲ್ಲಿ ಮುಕ್ತಾಯವಾಗಲಿದೆ. ದಾವಣಗೆರೆಯಲ್ಲಿ ಆ.22 ರಂದು ಆಂದೋಲನದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಎಂ. ಶಿವಕುಮಾರ್‌, ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಅಧ್ಯಕ್ಷ ದೇವರಮನೆ ಶಿವಕುಮಾರ್‌, ಜಿಪಂ ಸದಸ್ಯ ಕೆ.ಎಸ್‌. ಬಸವಂತಪ್ಪ, ನಗರಪಾಲಿಕೆ ಮಾಜಿ ಸದಸ್ಯ ಶ್ರೀನಿವಾಸ್‌ ಶಿವಗಂಗಾ, ಶಶಿಧರ್‌ ಹೆಮ್ಮನಬೇತೂರು, ಶ್ರೀನಿವಾಸ್‌ ಮಳ್ಳೆಕಟ್ಟೆ, ಕೊರಟಿಕೆರೆ ಶಿವಕುಮಾರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.