ಸ್ಮಶಾನಕ್ಕೆ ಸ್ಥಳವಿಲ್ಲದ ಊರಲ್ಲಿ ಸಿಎಂ ವಾಸ್ತವ್ಯ!

•ನಿರೀಕ್ಷೆಗಣ್ಣಲ್ಲಿ ಕಾದು ಕುಳಿತ ಕರೆಗುಡ್ಡ ಗ್ರಾಮಸ್ಥರು •ಬಯಲು ಶೌಚ ಮುಕ್ತವಾಗಿಲ್ಲ ಈ ಗ್ರಾಮ •ಸುಣ್ಣ-ಬಣ್ಣ ಕಂಡ ಸರ್ಕಾರಿ ಶಾಲೆ

Team Udayavani, Jun 25, 2019, 9:17 AM IST

rc-tdy-1..

ಮಾನ್ವಿ: ಕರೇಗುಡ್ಡ ಗ್ರಾಮದಲ್ಲಿ ಸಿಎಂ ಕಾರ್ಯಕ್ರಮಕ್ಕೆ ಕೈಗೊಂಡ ಸಿದ್ಧತೆ ಪರಿಶೀಲಿಸಿದ ಸಚಿವ ವೆಂಕಟರಾವ್‌ ನಾಡಗೌಡ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ.

ರಾಯಚೂರು: ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಈ ಬಾರಿ ಮಾನ್ವಿ ಕ್ಷೇತ್ರದ ಕರೇಗುಡ್ಡ ಆಯ್ಕೆಯಾಗಿದೆ. ಅನೇಕ ಸಮಸ್ಯೆಗಳಿಂದ ಬಳಲುತ್ತಿರುವ ಈ ಗ್ರಾಮದಲ್ಲಿ ಮುಖ್ಯವಾಗಿ ಶವ ಸಂಸ್ಕಾರಕ್ಕೂ ಸೂಕ್ತ ಸ್ಥಳವಿಲ್ಲದ ಸ್ಥಿತಿ ಇದೆ.

ನಕ್ಕುಂದಿ ಗ್ರಾಪಂ ವ್ಯಾಪ್ತಿಯ ಈ ಗ್ರಾಮ 1200 ಜನಸಂಖ್ಯೆ ಹೊಂದಿದೆ. ಗ್ರಾಮದಲ್ಲಿ ಯಾರೇ ಮೃತಪಟ್ಟರೂ ಊರಿಗೆ ಒಂದು ಕಿ.ಮೀ. ದೂರದಲ್ಲಿರುವ ಹಳ್ಳದ ದಂಡೆಯಲ್ಲಿಯೇ ಶವ ಸಂಸ್ಕಾರ ಮಾಡಬೇಕು. ಉಳ್ಳವರು ತಮ್ಮ ಸ್ವಂತ ಜಮೀನುಗಳಲ್ಲಿ ಮಾಡಿಕೊಂಡರೆ ಬಡವರಿಗೆ ಹಳ್ಳವೇ ಗತಿ. ಸ್ಮಶಾನಕ್ಕೆ ಜಮೀನು ನೀಡಲು ಕೆಲವರು ಸಿದ್ಧರಿದ್ದಾರೆ. ಸಿಎಂ ಬರುವ ಕಾರಣ ಎಚ್ಚೆತ್ತ ಜಿಲ್ಲಾಡಳಿತ ಈಗ ಸ್ಮಶಾನ ಸ್ಥಳ ಒದಗಿಸುವ ಭರವಸೆ ನೀಡಿದೆ.

ಗ್ರಾಮದಲ್ಲಿ ಏಳನೇ ತರಗತಿವರೆಗೆ ಶಾಲೆಯಿದ್ದು. ಮುಂದಿನ ವ್ಯಾಸಂಗಕ್ಕೆ ಆರು ಕಿಮೀ ದೂರದ ಬ್ಯಾಗವಾಟಕ್ಕೆ ಹೋಗಬೇಕು. ಇಲ್ಲವಾದರೆ ಶಿಕ್ಷಣ ಮೊಟಕುಗೊಳಿಸಬೇಕು. ಸಂಪೂರ್ಣ ಬಯಲು ಶೌಚಮುಕ್ತ ಗ್ರಾಮವಾಗಿದೆ ಎಂದು ಗ್ರಾಪಂ ಪಿಡಿಒ ಹೇಳುತ್ತಿದ್ದರಾದರೂ, ಹಗಲಲ್ಲೇ ಮಹಿಳೆಯರು ಬೆಟ್ಟದ ಕಲ್ಲುಗಳ ಮರೆಗೆ ಬಹಿರ್ದೆಸೆಗೆ ಹೋಗುವ ದೃಶ್ಯ ಗ್ರಾಮದಲ್ಲಿ ಕಂಡು ಬರುತ್ತಿದೆ.

ಕಳೆಗಟ್ಟಿದ ಕರೇಗುಡ್ಡ: ಸಿಎಂ ವಾಸ್ತವ್ಯದ ಹಿನ್ನೆಲೆಯಲ್ಲಿ ಕರೇಗುಡ್ಡ ಈಗ ಸಂಪೂರ್ಣ ಕಳೆಗಟ್ಟಿದೆ. ಗ್ರಾಮದಲ್ಲಿ ಹಗಲಿರುಳು ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಿವೆ. ಜೆಸ್ಕಾಂ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಸೇರಿ ಅನೇಕ ಇಲಾಖೆಗಳು ತರಾತುರಿಯಲ್ಲಿ ಗ್ರಾಮವನ್ನು ಮಧುವಣಗಿತ್ತಿಯಂತೆ ಸಿಂಗರಿಸಿವೆ. ಇಷ್ಟು ದಿನ ತಿಪ್ಪೆ ಗುಂಡಿಗಳ ಮಧ್ಯೆ ನಡೆಯುತ್ತಿದ್ದ ಶಾಲೆ ಸುತ್ತಲೂ ಆಳೆತ್ತರದ ಕಾಂಪೌಂಡ್‌ ನಿರ್ಮಿಸಲಾಗಿದೆ. ಸಿಂಗಲ್ ಪೇಸ್‌ ವಿದ್ಯುತ್‌ ಕೂಡ ಸರಿಯಾಗಿ ಸಿಗದ ಗ್ರಾಮಕ್ಕೆ ಈಗ ಡಬಲ್ ಲೈನ್‌ ವಿದ್ಯುತ್‌ ನೀಡಲು ಕ್ರಮ ಕೈಗೊಳ್ಳಲಾಗಿದೆ. ಬೇಸಿಗೆಯಲ್ಲಿ ನೀರಿಲ್ಲದ ಬಳಲಿದರೂ ಆಲಿಸದ ಜಿಲ್ಲಾಡಳಿತ, ಈಗ ಪ್ರತ್ಯೇಕ ಬೋರ್‌ವೆಲ್ಗಳನ್ನು ಕೊರೆಸಿದೆ. ಇನ್ನು ಇಷ್ಟು ದಿನ ಬಳಕೆಯಲ್ಲಿರದ ಶಾಲೆಯ ಶೌಚಾಲಯವನ್ನು ತೆರವು ಮಾಡಿ ಹೊಸದಾಗಿ ನಿರ್ಮಿಸಲಾಗಿದೆ. ಇಡೀ ಶಾಲೆಗೆ ಸುಣ್ಣ ಬಣ್ಣ ಬಳಿಯಲಾಗಿದೆ.

ಹೆಚ್ಚಿದ ನಿರೀಕ್ಷೆ: ಸಿಎಂ ಬರುವಿಕೆಗೆ ಒಂದೆಡೆ ಭರದ ಸಿದ್ಧತೆ ನಡೆದಿದ್ದರೆ ಮತ್ತೂಂದೆಡೆ ಅಹವಾಲು ಸ್ವೀಕಾರಕ್ಕೆಂದು ಸುಮಾರು 10 ಎಕರೆ ಜಮೀನನ್ನು ಸ್ವಚ್ಛಗೊಳಿಸಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೂ ಸಿಎಂ ಜನರ ಅಹವಾಲು ಸ್ವೀಕರಿಸಲಿದ್ದಾರೆ. ಎಲ್ಲರಿಗೂ ಅಲ್ಲಿಯೇ ನೀರು, ಊಟದ ವ್ಯವಸ್ಥೆ ಮಾಡಲಾಗುತ್ತಿದೆ.

ಇನ್ನು ಒಂದೆಡೆ ಗ್ರಾಮ ಅಭಿವೃದ್ಧಿಗೆ ತೆರೆದು ಕೊಂಡರೆ ಸ್ಥಳೀಯರಿಗೆ ಮಾತ್ರ ಇದು ಕಿರಿ ಕಿರಿ ಎನಿಸುತ್ತಿದೆ. ಅಧಿಕಾರಿಗಳು ತಮಗೆ ಬೇಕಾದ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ನಡೆಸಿದ್ದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಇಲ್ಲಿ ಅದು ಇಡಬೇಡಿ, ಇದನ್ನು ತೆರವು ಮಾಡಿ, ಮನೆ ಮುಂದೆ ನೀರು ಚಲ್ಲಬೇಡಿ ಎಂಬಿತ್ಯಾದಿ ಷರತ್ತು ಹಾಕಿದ್ದಾರೆ. ಅಲ್ಲದೇ, ಶಾಲೆ ಪಕ್ಕದ ಮನೆಗಳ ಮಾಲೀಕರಿಗೆ ಅನಗತ್ಯ ವಸ್ತುಗಳನ್ನು ಕೂಡಲೇ ತೆರವು ಮಾಡುವಂತೆ ತಾಕೀತು ಮಾಡಿದ್ದರು ಎನ್ನುತ್ತಾರೆ ಸ್ಥಳೀಯರು.

ಶಾಲೆಗಳಲ್ಲಿ ಇರುವ ಆರು ಕೊಠಡಿಗಳಲ್ಲಿ ಈಗಾಗಲೇ ಜಿಲ್ಲಾಡಳಿತ ಮೂರು ಕೊಠಡಿ ಪಡೆದಿದೆ. ಎಲ್ಲ ಮಕ್ಕಳನ್ನು ಒಂದೇ ಕೋಣೆಯಲ್ಲಿ ಕೂಡಿಸಲಾಗಿದೆ. ಗಲಾಟೆ ಹೆಚ್ಚಾಗಿರುವ ಕಾರಣ ಮಕ್ಕಳಿಗೆ ಬೋಧನೆ ಕೂಡ ಮಾಡಲಾಗುತ್ತಿಲ್ಲ.

ಒಟ್ಟಿನಲ್ಲಿ 12 ವರ್ಷಗಳ ಬಳಿಕ ಸಿಎಂ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಜಿಲ್ಲೆಯ ಜನರಿಗೆ ವಿಶೇಷ ಅನುಭೂತಿ ನೀಡುತ್ತಿದೆ. ಆದರೆ, ಅವರ ವಾಸ್ತವ್ಯ ಎಷ್ಟು ಜನರಿಗೆ ಅನುಕೂಲ ಕಲ್ಪಿಸಬಹುದು ಎಂಬುದನ್ನು ಕಾದು ನೋಡಬೇಕು.

 

•ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.