ಶೀಘ್ರವೇ “ಹಸಿರು ಕಟ್ಟಡ ನೀತಿ’ ಜಾರಿ

ಉದಯವಾಣಿ "ಮನೆ ಮನೆಗೆ ಮಳೆಕೊಯ್ಲು' ಅಭಿಯಾನಕ್ಕೆ ಸಚಿವ ಖಾದರ್‌ ಸ್ಪಂದನೆ

Team Udayavani, Jun 25, 2019, 10:14 AM IST

u-t

ಮಂಗಳೂರು: ಮಂಗಳೂರು ಸಹಿತ ರಾಜ್ಯದ ಎಲ್ಲ ನಗರ ಪ್ರದೇಶಗಳಲ್ಲಿ “ಮಳೆ ನೀರು ಕೊಯ್ಲು’ ವ್ಯವಸ್ಥೆಗೆ ಉತ್ತೇಜನ ನೀಡುವ ಸರಕಾರದ “ಹಸಿರು ಕಟ್ಟಡ ನೀತಿ’ (ಗ್ರೀನ್‌ ಬಿಲ್ಡಿಂಗ್‌ ಪಾಲಿಸಿ)ಯನ್ನು ಕೆಲವೇ ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದು ನಗರಾಭಿವೃದ್ಧಿ ಖಾತೆ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು, ಮುಂಬರುವ ದಿನಗಳಲ್ಲಿ ನಗರ ವ್ಯಾಪ್ತಿಯಲ್ಲಿ ಹೊಸ ಮನೆ ಅಥವಾ ಕಟ್ಟಡ ನಿರ್ಮಾಣ ಮಾಡುವಾಗ ಕಡ್ಡಾಯವಾಗಿ ಹಸಿರು ಕಟ್ಟಡ ನೀತಿ ಅನುಸರಿಸಬೇಕಿದೆ. ಕರಡು ನೀತಿ ಪ್ರಕಟಿಸಿದ್ದು, ಶೀಘ್ರದಲ್ಲಿ ಜಾರಿಗೆ ತರಲಾಗುವುದು ಎಂದರು.

ಹೊಸ ನೀತಿ ಅನ್ವಯ ಹೊಸ ಮನೆ ಅಥವಾ ಕಟ್ಟಡ ನಿರ್ಮಿಸುವಾಗ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಕೆ ಕಡ್ಡಾಯ. ಕಸ ನಿರ್ವಹಣೆಗೆ ಹೊಸ ಸೂತ್ರ ಜಾರಿಗೊಳಿಸಿ ಸ್ವತ್ಛತೆಗೆ ವಿಶೇಷ ಆದ್ಯತೆ ಮತ್ತು ಸೋಲಾರ್‌ ಅಳವಡಿಕೆಗೆ ಪ್ರಾಶಸ್ತ ನೀಡಲಾಗುವುದು. ಗಿಡ ನೆಡುವ ಬಗ್ಗೆಯೂ ಸೂಕ್ತ ಕಾನೂನು ಜಾರಿ ಮಾಡಲಾಗುವುದು. ನಿಯಮಗಳನ್ನು ಅನುಸರಿಸುವವರಿಗೆ ತೆರಿಗೆ ವಿನಾಯಿತಿಯಂತಹ ಪ್ರೋತ್ಸಾಹಕ ಕ್ರಮ ಮತ್ತು ಪಾಲಿಸದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವ ಪ್ರಸ್ತಾವವಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆಯೂ ಸೂಕ್ತ ಕಾನೂನು ತರಲಾಗುವುದು ಎಂದರು.  ಮನೆ ಕಟ್ಟಲು ಪರವಾನಿಗೆ ಸಿಗಬೇಕಾದರೆ ಮಳೆಕೊಯ್ಲು ಕಡ್ಡಾಯ ಆಗಿರಬೇಕು ಎಂದರು.

ಅಕ್ರಮ ವಿರುದ್ಧ ಕಠಿನ ಕ್ರಮ
ಗೋಹತ್ಯೆ ನಿಷೇಧದ ಬಗ್ಗೆ ನೈಜ ಕಾಳಜಿ ಇದ್ದಲ್ಲಿ ಸೂಕ್ತ ಕಾನೂನನ್ನು ಕೇಂದ್ರ ಸರಕಾರ ಜಾರಿಗೊಳಿಸಲಿ. ದೇಶ ಕಾನೂನು ರೀತ್ಯಾ ನಡೆಯಬೇಕು; ಭಯ-ಬಲಗಳಿಂದ ನಡೆಯಬಾರದು. ಜಿಲ್ಲೆಯಲ್ಲಿ ಯಾವುದೇ ರೀತಿಯ ಅಕ್ರಮ ಆದರೂ ಅದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗೋ ಸಾಗಾಟ ಕೂಡ ಇದರಡಿ ಸೇರಿದೆ ಎಂದು ಹೇಳಿದರು.

ಮಂಗಳೂರು ಪಾಲಿಕೆಯಲ್ಲಿ ಆನ್‌ಲೈನ್‌ ವ್ಯವಸ್ಥೆ ಸಹಿತ ವಿವಿಧ ಸೌಲಭ್ಯ ನೀಡುವ ಹಿನ್ನೆಲೆಯಲ್ಲಿ ಜುಲೈ ಮೊದಲ ವಾರದಲ್ಲಿ ನಗರಾಭಿವೃದ್ಧಿ ಇಲಾಖೆಯ ಎಲ್ಲ ಅಧಿಕಾರಿಗಳು ಸಭೆ ನಡೆಸಲಿದ್ದಾರೆ ಎಂದರು.

ಎಸ್‌ಐಟಿ ತನಿಖೆ
ಐಎಂಎ ವಂಚನೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಎಸ್‌ಐಟಿ ತನಿಖೆ ನಡೆಯುತ್ತಿದೆ. ಜನಸಾಮಾನ್ಯರಿಗೆ ನ್ಯಾಯ ಸಿಗುವ ಕೆಲಸವನ್ನದು ಮಾಡಲಿದೆ. ಅದೇ ಸಂಸ್ಥೆಯ ಶಾಲೆಯಲ್ಲಿ ಸುಮಾರು 1,800 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಅವರಿಗೆ ಮತ್ತು ಸಿಬಂದಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.

ಗ್ರಾ.ಪಂ. ಆಧಾರ್‌ ತಿದ್ದುಪಡಿ ಸರಿಪಡಿಸಲು ಕ್ರಮ
ಗ್ರಾ.ಪಂ.ನಲ್ಲಿ ಆಧಾರ್‌ ತಿದ್ದುಪಡಿ ಪ್ರಸ್ತುತ ಸ್ಥಗಿತವಾದ ಬಗ್ಗೆ ಪ್ರಶ್ನೆಗೆ ಉತ್ತರಿಸಿ, ಆಧಾರ್‌ ತಿದ್ದುಪಡಿ ಗ್ರಾಮ ಮಟ್ಟದಲ್ಲಿ ಇರುವಾಗ ಜನರಿಗೆ ಉಪಯೋಗವಾಗುತ್ತಿತ್ತು. ಸದ್ಯ ತಿದ್ದುಪಡಿ ಸ್ಥಗಿತವಾಗಿರುವುದು ಗಮನಕ್ಕೆ ಬಂದಿದೆ. ಶೀಘ್ರದಲ್ಲಿ ಗ್ರಾಮೀಣಾಭಿವೃದ್ಧಿ ಅಧಿಕಾರಿಗಳು ಮತ್ತು ಸಚಿವರ ಜತೆಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಖಾದರ್‌ ಹೇಳಿದರು.

ಅಭಿಯಾನಕ್ಕೆ ಸರಕಾರದ ಸಾಥ್‌
“ಉದಯವಾಣಿ’ಯು ದ.ಕ.ಜಿ.ಪಂ. ಸಹಯೋಗದಲ್ಲಿ ಮಳೆಕೊಯ್ಲು ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಹಮ್ಮಿಕೊಂಡಿರುವ “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನಕ್ಕೆ ಪೂರಕವಾಗಿ ಕಳೆದ ವಾರ ಮಾಹಿತಿ ಶಿಬಿರ ಆಯೋಜಿಸಿತ್ತು. ಆ ಕಾರ್ಯಕ್ರಮದಲ್ಲಿ ಸಚಿವ ಖಾದರ್‌, ಮಳೆ ನೀರು ಕೊಯ್ಲು ವ್ಯವಸ್ಥೆ ಉತ್ತೇಜಿಸಲು ಮತ್ತು ಕಟ್ಟುನಿಟ್ಟಾಗಿ ರಾಜ್ಯದೆಲ್ಲೆಡೆ ಜಾರಿಗೊಳಿಸಲು “ಹಸಿರು ಕಟ್ಟಡ ನೀತಿ’ ಜಾರಿಗೊಳಿಸುವುದಾಗಿ ಹೇಳಿದ್ದರು. ಸಚಿವರ ಘೋಷಣೆ ಶೀಘ್ರದಲ್ಲೇ ಹೊಸ ನೀತಿಯನ್ನು ಜಾರಿಗೊಳಿಸಲು ಸರಕಾರ ಮುಂದಾಗಿರುವುದು ಶ್ಲಾಘನೀಯ. ಮಳೆಕೊಯ್ಲು ಬಗ್ಗೆ “ಉದಯವಾಣಿ’ ಕೈಗೆತ್ತಿಕೊಂಡಿರುವ ಜಲ ಸಂರಕ್ಷಣ ಅಭಿಯಾನಕ್ಕೆ ಉತ್ತೇಜನ ಮತ್ತು ಸ್ಪಂದನೆ ಸರಕಾರದ ಕಡೆಯಿಂದಲೂ ಸಿಗುತ್ತಿರುವುದು ಗಮನಾರ್ಹ. ಅಭಿಯಾನದಿಂದ ಪ್ರೇರಿತರಾಗಿ ಹಲವರು ತಮ್ಮ ಮನೆ-ಕಟ್ಟಡಗಳಲ್ಲಿ ಮಳೆಕೊಯ್ಲು ವ್ಯವಸ್ಥೆ ಅಳವಡಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.