ಬಾವಿಗೆ ಬಿದ್ದ ಚಿರತೆ: ರಕ್ಷಣಾ ಕಾರ್ಯ ನೋಡಲು ಮುಗಿಬಿದ್ದ ಜನ
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮುರ ಪಾದೆಯಲ್ಲಿ ನಡೆದ ಘಟನೆ
Team Udayavani, Jun 25, 2019, 11:24 AM IST
ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಮುರ ಪಾದೆ ಸಮೀಪ ಗಂಗಯ್ಯ ಗೌಡ ಎಂಬುವರ ಮನೆ ಬಾವಿಗೆ ಚಿರತೆ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮನೆ ಮಂದಿ ಬಾವಿ ಸಮೀಪ ತೆರಳಿದಾಗ ಚಿರತೆ ಬಾವಿಯಲ್ಲಿ ಬಿದ್ದಿದ್ದು, ಬಾವಿಯ ದಂಡೆಯಲ್ಲಿ ಸಿಲುಕಿಕೊಂಡಿದೆ. ನಿನ್ನೆ ರಾತ್ರಿ ಬಾವಿಗೆ ಬಿದ್ದಿರುವ ಶಂಖೆ ವ್ಯಕ್ತವಾಗಿದೆ.
ಮಂಗಳೂರು ಹಾಗೂ ಕಾರ್ಕಳ ಅರಣ್ಯ ಇಲಾಖೆಯಿಂದ ಗೇಜ್ ತರಿಸಲಾಗುತ್ತಿದೆ. ಚಿರತೆ ಬಾವಿಗೆ ಬಿದ್ದಿರುವುದನ್ನು ನೋಡಲು ಜನ ಸ್ಥಳದಲ್ಲಿ ಜಮಾಯಿಸಿದ್ದಾರೆ.
ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ಸುಬ್ಬಯ್ಯ ನಾಯ್ಕ್, ಉಪ ವಲಯ ಅರಣ್ಯಾಧಿಕಾರಿ ರಾಜೇಶ್, ವಿನೋದ್ ಗೌಡ, ವನ್ಯ ಜೀವಿ ವಲಯ ಉ.ವ.ಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕರಾದ ಆನಂದ ಮೂರ್ತಿ, ರಾಘವೇಂದ್ರ ಉಲ್ಲಾಸ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ