ಮುಂಗಾರು ವಿಳಂಬ: ನೀರಿನ ಹೋರಾಟ ಬಿರುಸು

ನೀರಿಲ್ಲದೆ ಒಣಗುತ್ತಿರುವ ಕಬ್ಬು, ರೈತ ಕಂಗಾಲು • ಮಳೆ ಕೊರತೆಯಿಂದ 1546 ಹೆಕ್ಟೇರ್‌ನಲ್ಲಿ ಬಿತ್ತನೆ

Team Udayavani, Jun 25, 2019, 11:46 AM IST

mandya-tdy-2..

ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆ ಮೇಲೆ ಮುಂಗಾರು ಮುನಿಸಿಕೊಂಡಿದೆ. ನೀರಿಗಾಗಿ ರೈತರು ಹೋರಾಟದ ಹಾದಿ ಹಿಡಿದಿದ್ದಾರೆ. ರೈತರ ಮೊರೆಗೆ ಸ್ಪಂದಿಸದ ಸರ್ಕಾರ ಮತ್ತು ಜಿಲ್ಲಾಡಳಿತ ಪ್ರಸ್ತುತ ಸನ್ನಿವೇಶದಲ್ಲಿ ನೀರು ಬಿಡುಗಡೆ ಸಾಧ್ಯವೇ ಇಲ್ಲ ಎಂದು ದೃಢವಾಗಿ ಹೇಳಿದೆ. ಜಮೀನಿನಲ್ಲಿ ಒಣಗುತ್ತಿರುವ ಬೆಳೆಯನ್ನು ಕಂಡು ರೈತರ ಹೊಟ್ಟೆಗೆ ಬೆಂಕಿ ಬಿದ್ದಿದೆ. ಸಾಲ ಮಾಡಿ ಬೆಳೆದಿರುವ ಬೆಳೆಯನ್ನು ಉಳಿಸಿಕೊಳ್ಳಲಾಗದೆ, ಸಾಲವನ್ನೂ ತೀರಿಸುವ ದಾರಿ ಕಾಣದೆ ರೈತ ನೇಣಿಗೆ ಕೊರಳೊಡ್ಡುತ್ತಿದ್ದಾನೆ.

ಇದು ಸಿಹಿ ಜಿಲ್ಲೆಯ ಜನರ ಕಹಿ ಜೀವನದ ಕರುಣಾಜನಕ ಕಥೆ. ಇಲ್ಲಿನ ಜನರಿಗೆ ಕೃಷಿ ಬಿಟ್ಟರೆ ಬೇರೆ ಗೊತ್ತಿಲ್ಲ. ಪ್ರತಿ ವರ್ಷವೂ ಸಾಂಪ್ರದಾಯಿಕ ಕೃಷಿಗೆ ಜೋತು ಬೀಳುವ ರೈತರು ಸಂಕಷ್ಟದಿಂದ ನರಳುವುದು ಸಾಮಾನ್ಯ ಚಿತ್ರಣವಾಗಿದೆ. ಕಬ್ಬು ಬೆಳೆದು ಕಾರ್ಖಾನೆಗೆ ಪೂರೈಸಿ ಹಣಕ್ಕಾಗಿ ಹೋರಾಟ ನಡೆಸುವುದು. ಮಳೆ ಕೊರತೆ ಎದುರಾದಾಗಲೆಲ್ಲಾ ನೀರಿಗಾಗಿ ಪ್ರತಿಭಟನೆಯ ಹಾದಿ ಹಿಡಿಯುವುದು ಸಂಪ್ರದಾಯ ಬದ್ಧವಾಗಿ ನಡೆದುಕೊಂಡು ಬಂದಿದೆ.

ಪರ್ಯಾಯ ವ್ಯವಸ್ಥೆಗಳಿಲ್ಲ: ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ರೈತರ ಆಕ್ರೋಶ ಎದುರಿಸಲಾಗದೆ ಜಿಲ್ಲೆಯ ಜನಪ್ರತಿನಿಧಿಗಳು ತಲೆಮರೆಸಿಕೊಂಡು ಓಡಾಡುತ್ತಿ ದ್ದಾರೆ. ಪ್ರತಿ ವರ್ಷ ಎದುರಾಗುತ್ತಿರುವ ನೀರಿನ ಕೊರತೆ ನಿವಾರಣೆಗೆ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ಬಳಿ ಪರ್ಯಾಯ ವ್ಯವಸ್ಥೆಗಳೂ ಇಲ್ಲ. ದೂರದೃಷ್ಟಿಯೂ ಇಲ್ಲ. ನೀರಿಗೆ ಅಭಾವ ಸೃಷ್ಟಿಯಾದಾಗಲೆಲ್ಲಾ ಕೇಂದ್ರ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ವರುಣನ ಮೇಲೆ ಹೊರೆ ಹಾಕಿ ಜವಾಬ್ದಾರಿಯಿಂದ ಜಾರಿಕೊಳ್ಳುವುದು ಮಾಮೂಲಾಗಿದೆ.

ಜಲಸಂಪತ್ತನ್ನು ಗಟ್ಟಿಗೊಳಿಸಬೇಕು: ಪ್ರತಿ ವರ್ಷ ಜಿಲ್ಲೆಯೊಳಗೆ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ನೀರಿನ ಸಂಕಷ್ಟವನ್ನು ದೂರ ಮಾಡುವ ದೂರದೃಷ್ಟಿಯೊಂದಿಗೆ ಕೆರೆಗಳನ್ನು ಪುನಶ್ಚೇತನಗೊಳಿಸಿ ಜಲಸಂಪತ್ತನ್ನು ಗಟ್ಟಿಗೊಳಿಸುವ ಪ್ರಯತ್ನ ಯಾರಿಂದಲೂ ನಡೆಯುತ್ತಿಲ್ಲ. ಅತಿ ಹೆಚ್ಚು ಮಳೆ ಬಿದ್ದ ಸಂದರ್ಭದಲ್ಲೂ ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಕನಿಷ್ಠ ವ್ಯವಸ್ಥೆಗಳನ್ನು ಮಾಡುವಲ್ಲೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಆಸಕ್ತಿ ತೋರಿಲ್ಲ. ಇದರಿಂದ ಬೇಸಿಗೆಯಲ್ಲಿ ಕೆರೆಗಳು ಬರಿದಾಗುವುದು, ನೀರಿಗೆ ರೈತರು ಪರದಾಡುವುದು, ಸಾಲಬಾಧೆಯಿಂದ ರೈತರು ನೇಣಿಗೆ ಕೊರಳೊಡ್ಡುವುದು ನಿರಂತರವಾಗಿ ನಡೆದಿದೆ.

ಶೇ.16ರಷ್ಟು ಮಳೆ ಕೊರತೆ: ಈ ವರ್ಷ ಜನವರಿಯಿಂದ ಜೂ.23ರವರೆಗೆ ಜಿಲ್ಲೆಯೊಳಗೆ 230.2 ಮಿ.ಮೀ. ವಾಡಿಕೆ ಮಳೆಗೆ 193.6 ಮಿ.ಮೀ. ಮಳೆಯಾಗಿದೆ. ಶೇ.16ರಷ್ಟು ಮಳೆ ಕೊರತೆ ಎದುರಾಗಿದೆ. ನಾಗಮಂಗಲ ಹೊರತುಪಡಿಸಿ ಉಳಿದ ತಾಲೂಕುಗಳಲ್ಲೂ ಮಳೆ ಕೊರತೆ ಇರುವುದು ಕೃಷಿ ಇಲಾಖೆಯ ಅಂಕಿ-ಅಂಶಗಳಿಂದ ಗೊತ್ತಾಗಿದೆ.

ಕೆ.ಆರ್‌.ಪೇಟೆ ತಾಲೂಕಿನಲ್ಲಿ 237.5 ಮಿ.ಮೀ. ವಾಡಿಕೆ ಮಳೆಗೆ 184.1 ಮಿ.ಮೀ. ಮಳೆಯಾಗಿದ್ದು ಶೇ.22ರಷ್ಟು ಕೊರತೆ, ಮದ್ದೂರು ತಾಲೂಕಿನಲ್ಲಿ 233.6 ಮಿ.ಮೀ. ವಾಡಿಕೆ ಮಳೆಗೆ 173.4 ಮಿ.ಮೀ.ಮಳೆಯಾಗಿದ್ದು, ಶೇ.26ರಷ್ಟು ಕೊರತೆ, ಮಳವಳ್ಳಿ ತಾಲೂಕಿನಲ್ಲಿ 242 ಮಿ.ಮೀ.ಗೆ 205.8 ಮಿ.ಮೀ. ಮಳೆಯಾಗಿದ್ದು ಶೇ.15ರಷ್ಟು ಕೊರತೆ, ಮಂಡ್ಯ ತಾಲೂಕಿನಲ್ಲಿ 254.7 ಮಿ.ಮೀ.ಗೆ 186.9 ಮಿ.ಮೀ. ಮಳೆಯಾಗಿ ಶೇ.27ರಷ್ಟು ಮಳೆ ಕೊರತೆಯಾಗಿದೆ.

ನಾಗಮಂಗಲ ತಾಲೂಕಿನಲ್ಲಿ 190.9 ಮಿ.ಮೀ.ವಾಡಿಕೆ ಮಳೆಗೆ 213.2 ಮಿ.ಮೀ. ಮಳೆಯಾಗಿ ಶೇ.12ರಷ್ಟು ಹೆಚ್ಚುವರಿ ಮಳೆ ಬಿದ್ದಿದೆ. ಆದರೆ, ಈ ಮಳೆ ತಾಲೂಕಿನ ಎಲ್ಲಾ ಕಡೆ ಸಮರ್ಪಕವಾಗಿ ಹಂಚಿಕೆಯಾಗಿಲ್ಲ. ಪಾಂಡವಪುರ ತಾಲೂಕಿನಲ್ಲಿ 221.1 ಮಿ.ಮೀ. ವಾಡಿಕೆ ಮಳೆಗೆ 195.2 ಮಿ.ಮೀ. ಮಳೆಯಾಗಿದ್ದು ಶೇ.12ರಷ್ಟು ಕೊರತೆ ಉಂಟಾಗಿದೆ. ಶ್ರೀರಂಗಪಟ್ಟಣ ತಾಲೂಕಿನಲ್ಲಿ 231.6 ಮಿ.ಮೀ. ವಾಡಿಕೆ ಮಳೆಗೆ 196.6 ಮಿ.ಮೀ. ಮಳೆಯಾಗಿ ಶೇ.15ರಷ್ಟು ಮಳೆ ಕೊರತೆಯಾಗಿದೆ.

ಕಬ್ಬಿನ ರಕ್ಷಣೆಗಾಗಿ ನೀರಿಗೆ ಬೇಡಿಕೆ: ಹನ್ನೆರಡು ತಿಂಗಳು ಪೂರೈಸಿರುವ ಕಬ್ಬಿಗೆ ಈಗ ನೀರಿನ ಅಗತ್ಯ ಹೆಚ್ಚಿದೆ. ಪ್ರಸ್ತುತ ನೀರು ಸಿಗದೇ ಹೋದಲ್ಲಿ ಕಬ್ಬಿನ ಇಳುವರಿ ಕುಂಠಿತಗೊಂಡು ಉರುವಲಾಗುವ ಭಯ ರೈತರನ್ನು ಕಾಡುತ್ತಿದೆ. ಬಿಸಿಲಿನ ತಾಪದ ಜೊತೆಗೆ ಗಾಳಿಯ ವೇಗದಿಂದಾಗಿ ಭೂಮಿಯೊಳಗಿನ ತೇವಾಂಶ ಶೀಘ್ರಗತಿಯಲ್ಲಿ ಕಡಿಮೆಯಾಗುತ್ತಿದ್ದು, ಇದು ಕಬ್ಬಿನ ಬೆಳೆ ಒಣಗಲು ಪ್ರಮುಖ ಕಾರಣವಾಗಿದೆ. ಅದಕ್ಕಾಗಿ ಒಂದೇ ಒಂದು ಕಟ್ಟು ನೀರು ನೀಡಿ ರೈತರನ್ನು ಉಳಿಸುವಂತೆ ಹೋರಾಟಕ್ಕಿಳಿದಿದ್ದಾರೆ.

 

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.