ಪಿಯು ಕಾಲೇಜು ಸ್ಥಳಾಂತರ ವಿರೋಧಿಸಿ ಮನವಿ


Team Udayavani, Jun 25, 2019, 2:04 PM IST

gb-tdy-3..

ಆಳಂದ: ಬಾಲಕಿಯರ ಪಿಯು ಕಾಲೇಜು ಸ್ಥಳಾಂತರಕ್ಕೆ ವಿರೋಧಿಸಿ ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಆಳಂದ: ಪಟ್ಟಣದಲ್ಲಿನ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ದೂರದ ಪ್ರದೇಶಕ್ಕೆ ಸ್ಥಳಾಂತರಿಸುವ ಕ್ರಮ ಖಂಡಿಸಿದ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಕಾರ್ಯಕರ್ತರು ಮೊದಲಿನ ಸ್ಥಳದಲ್ಲೇ ಮುಂದುವರಿಯಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್‌ ಮೂಲಕ ಡಿಡಿಪಿಯುಗೆ ಮನವಿ ಸಲ್ಲಿಸಿದರು.

ಸಂಘಟನೆ ತಾಲೂಕು ಅಧ್ಯಕ್ಷ ಬಸವರಾಜ ಎಸ್‌. ಕೋರಳ್ಳಿ ಮಾರನಾಡಿ, ಪಟ್ಟಣದಲ್ಲಿನ ಏಕೈಕ ಸರ್ಕಾರಿ ಬಾಲಕಿಯರ ಕಾಲೇಜನ್ನು ಹೊರವಲಯದ ಸುರಕ್ಷಿತವಲ್ಲದ ನಿರ್ಜನ ಪ್ರದೇಶದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸುವುದರಿಂದ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತದೆ. ಬಸ್‌ ಸೌಕರ್ಯವಿಲ್ಲ. ಪಟ್ಟಣ ಸೇರಿ ಗ್ರಾಮೀಣ ಭಾಗದ ವಿದ್ಯಾರ್ಥಿಯನಿರಿಗೆ ದೂರದ ಕಾಲೇಜಿಗೆ ಹೋಗುವುದು ಅಸಾಧ್ಯವಾಗಿದೆ. ಇಂಥ ಗಂಭೀರವಾದ ವಿಷಯವನ್ನು ಸಂಬಂಧಿತ ಅಧಿಕಾರಿಗಳ ಹಗುರವಾಗಿ ಪರಿಗಣಿಸಿದ್ದಾರೆ ಎಂದು ಹರಿಹಾಯ್ದರು.

ನಿರ್ಜನ ಪ್ರದೇಶಕ್ಕೆ ಕಾಲೇಜು ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಪಾಲಕರು ಗೊಂದಲಕ್ಕೆ ಸಿಲುಕಿದ್ದಾರೆ. ತಮ್ಮ ಮಕ್ಕಳು ಕಾಲೇಜಿಗೆ ಹೋಗುವುದೇ ಬೇಡ ಎಂದು ಕಳುಹಿಸುತ್ತಿಲ್ಲ. ವಿದ್ಯಾರ್ಥಿನಿಯರಿಗೆ ಅನುಕೂಲ ಒದಗಿಸುವ ಬದಲು ಅನಾನುಕೂಲ ಮಾಡುವುದು ಸರಿಯಲ್ಲ. ವಿದ್ಯಾರ್ಥಿನಿಯರ ಭವಿಷ್ಯದ ದೃಷ್ಟಿಯಿಂದ ಸೂಕ್ತ ಸ್ಥಳದಲ್ಲಿ ತಕ್ಷಣವೇ ಕಾಲೇಜು ಕಟ್ಟಡ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ತಾಲೂಕಿನ ಎಲ್ಲ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿನಿಯರೊಂದಿಗೆ ಜುಲೈ 1ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಗ್ರೇಡ್‌-2 ತಹಶೀಲ್ದಾರ್‌ ಬಿ.ಜಿ. ಕುದರಿ ಆವರಿಗೆ ಮನವಿ ಸಲ್ಲಿಸಿದರು.

ಸಂಘಟನೆ ಯುವ ಘಟಕದ ತಾಲೂಕು ಅಧ್ಯಕ್ಷ ಪ್ರಕಾಶ ಪಾಟೀಲ, ಮುಖಂಡ ಶಿವಲಿಂಗಪ್ಪ ಪಟ್ಟಣಶೆಟ್ಟಿ, ನಾಗರಾಜ ಘೋಡಕೆ, ದೇವಾ ವಾಗ್ದರಿ, ಅಣಿವೀರಯ್ಯ ಸ್ವಾಮಿ, ಲಿಂಗರಾಜ ಜೆರಟಗಿ, ಮಹೇಶ ಕೋಟೆ, ಪರಶುರಾಮ ಜಮಾದಾರ, ವಿದ್ಯಾರ್ಥಿನಿಯರಾದ ನಿಕಿತಾ, ಯಶೋಧಾ, ಅಂಬಿಕಾ, ಪ್ರೀಯಂಕಾ, ಪ್ರತೀಕ್ಷಾ, ಈರಮ್ಮಾ, ಶೃತಿ ಪಾಟೀಲ, ಷರಾ, ಆರೀಫಾ, ಜಯಿಬಾ, ಶೋಭಾ ಮತ್ತು ಸುಶಮಿತಾ ಮತ್ತಿತರು ಪಾಲ್ಗೊಂಡಿದ್ದರು.

ಮನವಿ ಸ್ವೀಕರಿಸಿದ ತಹಸೀಲ್ದಾರರು ಸಂಬಂಧಿತ ಅಧಿಕಾರಿಗಳಿಗೆ ಕಳುಹಿಸಿಕೊಟ್ಟು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.