318 ಮಂದಿ ಅನರ್ಹ ಕಾರ್ಡ್‌ದಾರರ ಪತ್ತೆ : ದಂಡ ವಸೂಲಿ

ಆದ್ಯತಾ ಪಟ್ಟಿ : ಅನರ್ಹರ ವಿರುದ್ಧ ಕ್ರಮ

Team Udayavani, Jun 26, 2019, 5:59 AM IST

anarha-card

ಕಾಸರಗೋಡು: ಜಿಲ್ಲೆಯಲ್ಲಿ ಅನರ್ಹರಾದ ಆದ್ಯತಾ ಪಟ್ಟಿಯಲ್ಲಿ, ಎ.ಎ.ವೈ. ಪಡಿತರ ಚೀಟಿ ಇರಿಸಿಕೊಂಡಿರುವವರನ್ನು ಪತ್ತೆಮಾಡುವ ತಪಾಸಣೆ ಮುಂದಿನ ದಿನಗಳಲ್ಲಿ ಕಠಿನ ರೂಪದಲ್ಲಿ ಮುಂದುವರಿಯಲಿದೆ ಎಂದು ಜಿಲ್ಲಾ ನಾಗರಿಕ ಪೂರೈಕೆ ಅಧಿಕಾರಿ ತಿಳಿಸಿದ್ದಾರೆ.

ಕಳೆದ ಮೇ 6ರಂದು ಆರಂಭಿಸಿದ್ದ ತನಿಖೆಯಲ್ಲಿ ಈ ವರೆಗೆ ಜಿಲ್ಲೆಯಲ್ಲಿ ಅನರ್ಹರಾದ 318 ಕಾರ್ಡ್‌ ದಾರರ ಪತ್ತೆಯಾಗಿತ್ತು. ಈ ವರೆಗೆ ಅವರು ಈ ಕಾರ್ಡ್‌ ಬಳಸಿ ಪಡೆದ ಪಡಿತರ ಸಾಮಗ್ರಿಗಳ ಮೌಲ್ಯ ರೂಪದಲ್ಲಿ ಪ್ರತಿ ಕಿಲೋಗೆ 29.81 ರೂ.ನಂತೆ ದಂಡ ಪಡೆಯುವ ಕ್ರಮ ಆರಂಭಿಸಲಾಗಿದೆ ಎಂದರು.

ಅನರ್ಹರಾದ ಅನೇಕ ಮಂದಿ ಆದ್ಯತೆ ಪಟ್ಟಿ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದರೂ, ಜಿಲ್ಲೆಗೆ ಮಂಜೂರು ಮಾಡಿರುವ ಆದ್ಯತೆ ಕಾರ್ಡ್‌ಗಳ ಸಂಖ್ಯೆಯ ಮಿತಿ ತಲಪಿರುವ ಹಿನ್ನೆಲೆಯಲ್ಲಿ ಆದ್ಯತೆ ಕಾರ್ಡ್‌ ಗಳನ್ನು ನೀಡಲು ಸಾಧ್ಯವಾಗದು. ಅನರ್ಹರು ಸ್ವ ಪ್ರೇರಣೆಯಿಂದ ಆದ್ಯತೆ ರಹಿತ ಕಾರ್ಡ್‌ದಾರರ ಪಟ್ಟಿಗೆ ಅರ್ಜಿ ಸಲ್ಲಿಸಿದರೆ, ಅರ್ಹರಿಗೆ ಆದ್ಯತೆ ಕಾರ್ಡ್‌ ನೀಡಿಕೆ ಸಾಧ್ಯ.

ಕಾರ್ಡ್‌ ಒಪ್ಪಿಸಿ ಶಿಕ್ಷೆ ತಪ್ಪಿಸಿಕೊಳ್ಳಿ
ಈಗಾಗಲೇ ಅನರ್ಹರು ಇರಿಸಿಕೊಂಡಿರುವ ಆದ್ಯತೆ ಕಾರ್ಡ್‌ಗಳನ್ನು ನಾಗರಿಕ ಪೂರೈಕೆ ಅ ಧಿಕಾರಿಗೆ ಸಲ್ಲಿಸಿದಲ್ಲಿ ಶಿಕ್ಷೆ ಕ್ರಮಗಳಿಂದ ಹೊರತುಗೊಳ್ಳಬಹುದಾಗಿದೆ. ಆದರೆ ಅನೇಕ ಮಂದಿಗೆ ಸೂಚನೆ ನೀಡಿಯೂ ಕಾರ್ಡ್‌ ಹಿಂದಿರುಗಿಸಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾ, ತಾಲೂಕು ಮಟ್ಟದ ನಾಗರಿಕ ಪೂರೈಕೆ ಅಧಿ ಕಾರಿಗಳ ನೇತೃತ್ವದಲ್ಲಿ ಪಡಿತರ ಇನ್ಸ್‌ಪೆಕ್ಟರರು ಸೇರಿರುವ ತಂಡ ಜಿಲ್ಲೆಯ ವಿವಿಧೆಡೆ ತಪಾಸಣೆ ನಡೆಸುತ್ತಿದೆ. ಈ ರೀತಿ ಪತ್ತೆಯಾಗುವ ಆರೋಪಿಗಳಿಗೆ ದಂಡ ಹೇರಲಾಗುವುದು.

ನಾಗರಿಕ ಪೂರೈಕೆ ನಿರ್ದೇಶಕರಿಂದ ಲಭಿಸಿದ ಮೂರು ತಿಂಗಳಿಗಿಂತ ಅಧಿಕ ಪಡಿತರ ಸಾಮಗ್ರಿ ಖರೀದಿಸದೇ ಇರುವ ಆದ್ಯತೆ ಕಾರ್ಡ್‌ದಾರರು, 65 ವರ್ಷಕ್ಕಿಂತ ಅಧಿಕ ವಯೋಮಾನದ ಮಂದಿ ಮಾತ್ರ ಇರುವ ಕಾರ್ಡ್‌ಗಳು, ಒಬ್ಬರು ಮಾತ್ರ ಇರುವ ಕಾರ್ಡ್‌ಗಳು ಇತ್ಯಾದಿಗಳ ಪರಿಶೀಲನೆ ನಡೆಯುತ್ತಿದೆ. ಪಟ್ಟಿ ಪ್ರಕಾರ ಅನರ್ಹರಾದ 371 ಕಾರ್ಡ್‌ಗಳನ್ನು ಈಗಾಗಲೇ ರದ್ದುಪಡಿಸಲಾಗಿದೆ. ಆನಿವಾಸಿ ಭಾರತೀಯ ಎಂಬ ವಿಚಾರವನ್ನು ಬಚ್ಚಿಟ್ಟು, ಮೃತ‌ರಾದವರ ಹೆಸರು ಹಾಗೇ ಇರಿಸಿ, ಆದ್ಯತಾ ಪಟ್ಟಿಯಲ್ಲಿದ್ದು, ಈಗ ವಿಳಾಸ ಬದಲಿಸಿರುವ ಮಂದಿಯ ಹೆಸರಲ್ಲಿ ಪಡಿತರ ಸಾಮಗ್ರಿಗಳನ್ನು ಪಡೆಯುತ್ತಿರುವ ವಿಚಾರ ಇಲಾಖೆಯ ಗಮನಕ್ಕೆ ಬಂದಿದೆ. ಇವರು ಅಕ್ಷಯ ಕೇಂದ್ರ ಮೂಲಕ ಅರ್ಜಿ ಸಲ್ಲಿಸಬೇಕು. ಪರಿಶೀಲನೆಯಲ್ಲಿ ಲೋಪ ಪತ್ತೆಯಾದರೆ ಕ್ರಮ ಕೈಗೊಳ್ಳಲಾಗುವುದು.

ಕಚೇರಿಗಳನ್ನು ಸಂಪರ್ಕಿಸಿ
ಪಡಿತರ ಚೀಟಿಗಳಲ್ಲಿ ಆಧಾರ್‌ ನಂಬ್ರ ಅಳವಡಿಸದೇ ಇರುವವರು ಅಕ್ಷಯ ಕೇಂದ್ರಗಳ ಮೂಲಕ, ನಾಗರಿಕ ಪೂರೈಕೆ ಕೇಂದ್ರಗಳ ಮೂಲಕ ಸೇರ್ಪಡೆ ಸಾಧ್ಯ. ಎರಡು ಪಡಿತರ ಚೀಟಿಗಳಲ್ಲಿ ಹೆಸರು ಹೊಂದಿರುವ ವ್ಯಕ್ತಿಗಳು ತುರ್ತಾಗಿ ಒಂದರಲ್ಲಿ ಹೆಸರು ತೆರವುಗೊಳಿಸಬೇಕು. ಈ ಸಂಬಂಧ ದೂರುಗಳಿದ್ದಲ್ಲಿ ಈ ಕೆಳಗಿನ ದೂರವಾಣಿ ಸಂಖ್ಯೆಗಳ ಮೂಲಕ ತಿಳಿಸಬೇಕು.

ಆದ್ಯತೆ/ಎ.ಎ.ವೈ. ಕಾರ್ಡ್‌ಗೆ ಅನರ್ಹರಿವರು
ಸರಕಾರಿ/ಅರೆ ಸರಕಾರಿ ಸಿಬಂದಿ, ಸಾರ್ವ ಜನಿಕ ಸಂಸ್ಥೆಗಳ ಸಿಬ್ಬಂದಿ, ಸಹಕಾರಿ ಸಂಸ್ಥೆಗಳ ಸಿಬಂದಿ, ಸೇವಾ ಪಿಂಚಣಿದಾರರು, ಆದಾಯ ತೆರಿಗೆದಾರರು, ವಿದೇಶಗಳಲ್ಲಿ ದುಡಿಯುತ್ತಿರುವವರು, ಸ್ವಂತವಾಗಿ ಒಂದು ಎಕ್ರೆಗಿಂತ ಅಧಿಕ ಜಾಗ ಹೊಂದಿರುವವರು (ಪ. ಪಂಗಡದವರ ಹೊರತಾಗಿ), ಸ್ವಂತವಾಗಿ ಒಂದು ಸಾವಿರ ಚ. ಅಡಿ ವಿಸ್ತೀರ್ಣದ ಮನೆ, ಫ್ಲ್ಯಾಟ್‌, ನಾಲ್ಕು ಚಕ್ರ ವಾಹನ ಹೊಂದಿರುವವರು (ಬದುಕಿಗಾಗಿ ಟ್ಯಾಕ್ಸಿ ಚಲಾಯಿಸುವವರ ಹೊರತಾಗಿ), ಕುಟುಂಬದ ಸದಸ್ಯರಲ್ಲಿ ಯಾರಾದರೂ ಒಬ್ಬರ ಆದಾಯ ತಿಂಗಳಿಗೆ 25 ಸಾವಿರ ರೂ.ಗಿಂತ ಅಧಿಕ ಉಳ್ಳವರು.

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.