ಪ್ರತಿಭಟನೆ ಬದಲು ಕೇಂದ್ರಕ್ಕೆ ಡ್ಯಾಂ ನೀರಿನ ಸ್ಥಿತಿಗತಿ ತಿಳಿಸಿ


Team Udayavani, Jun 26, 2019, 3:00 AM IST

pratibatane

ಮೈಸೂರು: ನಮ್ಮ ಸಂಸದರು ಕಾವೇರಿ ಜಲಾನಯನ ಪ್ರದೇಶದಿಂದ ತಮಿಳುನಾಡಿಗೆ ನೀರು ಬಿಡದಂತೆ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಕಾವೇರಿ ತಾಂತ್ರಿಕ ಸಲಹಾ ಸಮಿತಿ ಮನವಿ ಮಾಡಿದೆ.

ನಗರದ ಎಂಜಿನಿಯರುಗಳ ಸಂಸ್ಥೆಯಲ್ಲಿ ಮಂಗಳವಾರ ನಡೆದ ಕಾವೇರಿ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಪ್ರಮುಖ ಎಂಜಿನಿಯರುಗಳ ಚರ್ಚಿಸಿ ಮುಂದಿನ ಮೂರು ದಿನಗಳೊಳಗೆ ಕರಡು ತಯಾರಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸುವುದು ಮತ್ತು ರಾಜ್ಯದ 25 ಮಂದಿ ಬಿಜೆಪಿ ಸಂಸದರು, ಓರ್ವ ಪಕ್ಷೇತರ ಸಂಸದೆ ಹಾಗೂ ಓರ್ವ ಕಾಂಗ್ರೆಸ್‌, ಜೆಡಿಎಸ್‌ ಸಂಸದರಿಗೆ ಕರಡು ಕಳುಹಿಸುವುದರ ಬಗ್ಗೆಯೂ ನಿರ್ಣಯ ತೆಗೆದುಕೊಳ್ಳಲಾಯಿತು.

ಎಸಿಐಎಂಸಿ ಸಂಚಾಲಕ ಎಂ. ಲಕ್ಷ್ಮಣ್‌ ಮಾತನಾಡಿ, ಕಾವೇರಿ ನಿರ್ವಹಣಾ ಮಂಡಳಿ ನಡೆಸಿದ ಸಭೆಯು ಕಳೆದ ಮೇ 25 ರಂದು 9.19 ಟಿಎಂಸಿ ನೀರು ಬಿಡಲು ನಿರ್ಧರಿಸಿತ್ತು. ಕಳೆದ ತಿಂಗಳೂ ಸಭೆ ನಡೆಸಿದಾಗ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿ, ಮಳೆ ಆರಂಭವಾಗದ್ದರಿಂದ ಹಾಲಿ ಜಲಾಶಯದ ಪ್ರಮಾಣ, ಕುಡಿಯುವ ನೀರಿಗೆ ಬೇಕು. ಮಳೆ ಶುರುವಾದ ಮೇಲೆ ಎಲ್ಲಾ ಜಲಾಶಯಗಳಿಗೆ ಒಳ ಹರಿವು ಜಾಸ್ತಿ ಆದರೆ ಬಿಡುತ್ತೇವೆ ಎಂದಿತ್ತು.

ಜಲಾಶಯ ಪರಿಶೀಲಿಸಿ: ಭಾರತೀಯ ಹವಮಾನ ಇಲಾಖೆಯವರ ಅಭಿಪ್ರಾಯ ಪಡೆದು “ಜೂ. 2 ರಿಂದ ಮುಂಗಾರು ಆರಂಭವಾಗುತ್ತೆ. ಕಾವೇರಿ ಜಲಾನಯನ ಪ್ರದೇಶದ ಎಲ್ಲಾ ಜಲಾಶಯಗಳಿಗೆ ಒಳ ಹರಿವು ಜಾಸ್ತಿಯಾಗುತ್ತೆ. ಒಳ ಹರಿವು ಹೆಚ್ಚಾದ ಮೇಲೆ ನೀರು ಬಿಡುವಂತೆ’ ಸೂಚಿಸಿತ್ತು. ಕೇಂದ್ರದಿಂದ ತಾಂತ್ರಿಕ ಸಮಿತಿಯನ್ನು ಜಲಾಶಯ ಪರಿಶೀಲಿಸಿ, ವರದಿ ಸಲ್ಲಿಸಿದ್ದರಿಂದ ಇವತ್ತು ಸಭೆ(ಮಂಗಳವಾರ) ನಡೆಸಿ, ಕೆಆರ್‌ಎಸ್‌ ಒಳಹರಿವು ಹೆಚ್ಚಾದರೆ ನೀರು ಬಿಡುವಂತೆಯೂ ಹಾಗೂ ಮುಂಗಾರು ತಡವಾದ್ದರಿಂದ ಜುಲೈ ಮೊದಲ ವಾರದಲ್ಲಿ ಮತ್ತೂಮ್ಮೆ ಸಭೆ ನಡೆಸಲು ನಿರ್ಧರಿಸಿದೆ ಎಂದರು.

ಪ್ರತಿಭಟನೆ ಸಲ್ಲ: ಹಳೇ ಮೈಸೂರು ಪ್ರಾಂತ್ಯಕ್ಕೆ ತಾತ್ಕಾಲಿಕವಾಗಿ ಪರಿಹಾರ ಸಿಕ್ಕರೂ ನಾಲ್ಕು ಜಲಾಶಯದಲ್ಲಿರುವ 13 ಟಿಎಂಸಿ ನೀರು 20 ದಿನಗಳಲ್ಲಿ 4.5 ಟಿಎಂಸಿಯನ್ನು ಕುಡಿಯಲು ಬಳಸಬೇಕು. ಹೀಗಾಗಿ ಹಾಸನ, ಮೈಸೂರು, ಬೆಂಗಳೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಜಿಲ್ಲೆಗಳ ಹಿತದೃಷ್ಟಿಯಿಂದ ಯಾವ ಕಾರಣಕ್ಕೂ ನೀರು ಬಿಡಬಾರದು.

ಆದರೆ, ಎಲ್ಲಾ ಕಾವೇರಿ ಜಲಾನಯನ ಪ್ರದೇಶಗಳು 2018 ಜೂನ್‌ ರಿಂದಲೇ ಕಾವೇರಿ ನಿರ್ವಹಣಾ ಮಂಡಳಿ ವ್ಯಾಪ್ತಿ ಹಾಗೂ ಕೇಂದ್ರ ಜಲ ಆಯೋಗ ವ್ಯಾಪ್ತಿಗೆ ಬರುತ್ತದೆ. ನಮ್ಮ ಕೈಯಲ್ಲಿ ಏನು ಇಲ್ಲ. ನೀರು ಬಿಡಬೇಕಾದ್ದರಿಂದ ನಂತರ ನಾವು ಪ್ರತಿಭಟಿಸುವುದರಲಿ ಪ್ರಯೋಜನವಿಲ್ಲ. ಬದಲಾಗಿ ಕೇಂದ್ರ ಸಚಿವ ನಿತಿನ್‌ ಗಡ್ಕರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದು ಒಳಿತು ಎಂದರು.

ರಾಜ್ಯಕ್ಕೆ ಅಧಿಕಾರವಿಲ್ಲ: ನಿವೃತ್ತ ಮೇಜರ್‌ ಜನರಲ್‌ ಎಸ್‌.ಜಿ. ಒಂಬತೆRರೆ ಮಾತನಾಡಿ, ಕಾವೇರಿ ನದಿ ಈಗಾಗಲೇ ಬತ್ತಿದ್ದು, ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕುಸಿದಿದೆ. ಈವರೆಗೂ ಮಳೆ ಬೀಳದೆ ಇರುವುದರಿಂದ ಕುಡಿಯುವ ನೀರಿಗೆ ಮತ್ತಷ್ಟು ತೊಂದರೆಯಾಗುವ ಸಾಧ್ಯತೆಯೂ ಇದೆ.

ಈ ನಿಟ್ಟಿನಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ನಡುವೆ ತಮಿಳುನಾಡು ಸರ್ಕಾರ ನೀರು ಹರಿಸುವಂತೆ ಒತ್ತಾಯಿಸಿದೆ. ಕಾವೇರಿ ನೀರು ನಿರ್ವಹಣ ಮಂಡಳಿ ತೀರ್ಮಾನದಂತೆ ಕೆಆರ್‌ಎಸ್‌ ಆಣೆಕಟ್ಟೆಯ ನೀರು ಬಳಕೆಯಾಗಲಿದೆ. ಇದರಲ್ಲಿ ರಾಜ್ಯ ಸರ್ಕಾರಕ್ಕೆ ಮಧ್ಯ ಪ್ರವೇಶಿಸುವ ಅಧಿಕಾರವಿಲ್ಲ ಎಂದು ಹೇಳಿದರು.

ಹವಾಮಾನ ಬದಲಾವಣೆ ಆಧಾರಿಸಿ ಜಲನೀತಿ ರೂಪಿಸಿ: ನೀರಿನ ಸಂರಕ್ಷಣೆ – ಉಪಯೋಗದ ಕುರಿತ ನೀತಿ ರೂಪಿಸಬೇಕು, ಜೊತೆಗೆ ಸದನ ಸಮಿತಿ ರಚಿಸಬೇಕು. ಇಡೀ ರಾಜ್ಯಾದ್ಯಂತ ಎಲ್ಲಾ ಅಣೆಕಟ್ಟು ಭೇಟಿ ನೀಡಿ, ನೀರಿನ ಬಳಕೆ ಮತ್ತು ಸಂರಕ್ಷಣೆ ಬಗ್ಗೆ ವರದಿ ಸಲ್ಲಿಸಬೇಕು. ಅಧಿವೇಶನದಲ್ಲಿ ಚರ್ಚೆಯಾಗಬೇಕು.

ನಾವು ಎಂಜಿನಿಯರುಗಳು ಕರಡು ತಯಾರಿಸಿ ಕಳುಹಿಸುತ್ತೇವೆ ಎಂದು ನಿವೃತ್ತ ಮೇಜರ್‌ ಜನರಲ್‌ ಎಸ್‌.ಜಿ. ಒಂಬತೆರೆ ಸಭೆಗೆ ತಿಳಿಸಿದರು. ಭಾರತ ಹಲವಾರು ನದಿಗಳು ಮಳೆಯನ್ನೇ ಆಶ್ರಯಿಸಿವೆ. ಒಂದು ವೇಳೆ ಹವಾಮಾನ ವೈಪರೀತ್ಯದಿಂದ ಮಳೆ ಬಾರದಿದ್ದರೆ ಎಲ್ಲೆಡೆ ನೀರಿನ ಸಮಸ್ಯೆ ಎದುರಾಗುತ್ತದೆ. ಆದರೆ ಹವಾಮಾನ ಬದಲಾವಣೆಯನ್ನು ನಾವು ನಿರ್ಲಕ್ಷಿಸಿ ನೀರಿನ ಲಭ್ಯತೆ ಆಧಾರದ ಮೇಲೆ ನಿರ್ವಹಣೆ ಮತ್ತು ನೀತಿಗಳನ್ನು ರೂಪಿಸುತ್ತಿದ್ದೇವೆ.

ಇದು ತಪ್ಪು ನಿರ್ಧಾರ. ಹವಾಮಾನ ಬದಲಾವಣೆ ಆಧಾರದ ಮೇಲೆ ನೀರಿನ ನಿರ್ವಹಣೆ ಹಾಗೂ ಜಲನೀತಿಯನ್ನು ರೂಪಿಸಬೇಕಿದೆ. ಹವಾಮಾನ ಬದಲಾವಣೆಯಿಂದಾಗಬಹುದಾದ ಎಲ್ಲಾ ಅಂಶಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ನೀರು ಹಂಚಿಕೆ ಮಾಡುವ ಕೆಲಸವಾಗಬೇಕು ಎಂದರು.

ಸಭೆಯಲ್ಲಿ ತಜ್ಞರಾದ ಎಸ್‌.ವಿ. ಪ್ರಸನ್ನ, ಡಾ.ಕೆ. ಸುರೇಶ್‌, ಡಾ.ಜಿ.ಬಿ. ಕೃಷ್ಣಪ್ಪ, ಎಚ್‌.ಪಿ. ಗೋವಿಂದರಾಜು, ವಿ. ಶ್ರೀನಾಥ್‌, ಮುರಳೀಧರ, ಎನ್‌.ಎಂ. ಯಾದವಗಿರಿ, ಎಚ್‌.ಕೆ. ನಾಗೇಗೌಡ, ಚಂದ್ರಮೋಹನ್‌, ಯು.ವಿ. ರಾಮದಾಸ್‌ ಭಟ್‌, ಕೆ.ಎಸ್‌. ನಾಗೇಂದ್ರ, ಬಿ. ಸತೀಶ್‌, ತಾ.ರು. ನಟರಾಜು, ಪುಷ್ಪ ನಾಗೇಂದ್ರ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.