ಕಡಬ: ಹೊಸಮಠ ಸೇತುವೆ ಬಳಿ ಅಪಾಯಕಾರಿ ಹಂಪ್‌ನಿಂದ ತೊಂದರೆ

ಅವೈಜ್ಞಾನಿಕ ಕಾಮಗಾರಿಯಿಂದ ಸರಣಿ ಅಪಘಾತ: ಶೀಘ್ರ ಸರಿಪಡಿಸಲು ಸಾರ್ವಜನಿಕರ ಆಗ್ರಹ

Team Udayavani, Jun 26, 2019, 5:06 AM IST

25

ಕಡಬದ ಹೊಸಮಠ ಸೇತುವೆ ಬಳಿ ಅಪಘಾತಗಳಿಗೆ ಕಾರಣವಾಗಿರುವ ಹಂಪ್‌.

ಕಡಬ: ಇಲ್ಲಿನ ಹೊಸಮಠ ನೂತನ ಸೇತುವೆಯ ಬಳಿ ಅವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಲಾಗಿರುವ ಹಂಪ್‌ (ರಸ್ತೆ ಉಬ್ಬು) ನಿಂದಾಗಿ ಎರಡು ದಿನಗಳಿಂದ ಹಲವು ವಾಹನಗಳು ಅಪಘಾತಕ್ಕೀಡಾಗಿರುವುದು ಚಾಲಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ನೂತನ ಸೇತುವೆ ಕಾಮಗಾರಿ ಪೂರ್ಣಗೊಂಡು ವಾಹನ ಸಂಚಾರಕ್ಕೆ ತೆರೆದುಕೊಂಡ ಬಳಿಕ ಸೇತುವೆಯ ಎರಡೂ ಬದಿಯ ಸಂಪರ್ಕ ರಸ್ತೆಗಳಲ್ಲಿನ ತಿರುವುಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ ಎನ್ನುವ ದೂರುಗಳ ಹಾಗೂ ಮಾಧ್ಯಮ ವರದಿಗಳ ಬಳಿಕ ಸೇತುವೆಯ ಎರಡೂ ಕಡೆ ತಡೆ ಬೇಲಿ, ರಿಫ್ಲೆಕ್ಟರ್‌ಗಳನ್ನು ಅಳವಡಿಸಲಾಗಿತ್ತು. ಆದರೂ ಕೆಲ ದಿನಗಳ ಹಿಂದೆ ವೇಗವಾಗಿ ಬಂದ ವಾಹನವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಸೇತುವೆಯ ಪಾದಚಾರಿ ಮಾರ್ಗದ ಗೋಡೆಗೆ ಬಡಿದು ರಿಫ್ಲೆಕ್ಟರ್‌ಗಳು ಹಾನಿಗೀಡಾಗಿದ್ದವು. ಈ ವಿಚಾರ ಪುತ್ತೂರು ತಾಲೂಕು ಪಂಚಾಯತ್‌ ಸಭೆಯಲ್ಲೂ ಚರ್ಚೆಗೆ ಬಂದು ಸೇತುವೆಯ ಎರಡೂ ಬದಿ ಸಂಪರ್ಕ ರಸ್ತೆಯಲ್ಲಿ ಹಂಪ್‌ ರಚಿಸುವಂತೆ ಸೂಚಿಸಲಾಗಿತ್ತು.

ಆದರೆ, ಹಂಪ್‌ಗ್ಳೇ ಈಗ ಅಪಘಾತಕ್ಕೆ ಕಾರಣವಾಗಿರುವುದು ವಿಪರ್ಯಾಸ. ಹಂಪ್‌ನಿಂದಾಗಿ ವಾಹನಗಳು ಚಾಲಕರ ನಿಯಂತ್ರಣಕ್ಕೆ ಸಿಗುತ್ತಿಲ್ಲ ಎನ್ನುವ ಆರೋಪ ವ್ಯಕ್ತವಾಗಿದೆ. ಹಲವು ಬೈಕ್‌ಗಳು ಪಲ್ಟಿ ಹೊಡೆದು, ಹಾನಿ ಹಾಗೂ ಗಾಯಗಳಿಗೆ ಕಾರಣವಾಗಿವೆ. ಕಾರುಗಳ ಅಡಿಭಾಗ ಈ ಹಂಪ್‌ಗೆ ತಾಗಿ ಬಿಡಿ ಭಾಗಗಳಿಗೆ ಹಾನಿಯಾಗುತ್ತಿರುವ ದೂರುಗಳು ಬಂದಿವೆ.

ರವಿವಾರ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿದ್ದ ಮಂಗಳೂರು ಮೂಲದ ಯಾತ್ರಿಕರ ಹೊಸ ಕಾರು ಹಂಪ್‌ನ ಮೇಲೆ ಚಲಿಸಿದ ವೇಳೆ ಕಾರಿನ ತಳಭಾಗಕ್ಕೆ ಧಕ್ಕೆಯಾಗಿ, ದುರಸ್ತಿಗೆ 1 ಲಕ್ಷ ರೂ. ವೆಚ್ಚವಾಗಿದೆ. ಈ ಹಂಪ್‌ಗ್ಳನ್ನು ಸರಿಪಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಚಾಲಕರಿಂದ ವ್ಯಕ್ತವಾಗಿದೆ.

ಸಮಸ್ಯೆ ಕುರಿತು ವಿವರಣೆ
ಸ್ಥಳೀಯ ಜಿಲ್ಲಾ ಪಂಚಾಯತ್‌ ಸದಸ್ಯ ಪಿ.ಪಿ. ವರ್ಗೀಸ್‌ ಅವರು ಸಾರ್ವಜನಿಕರ ದೂರಿನಂತೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್) ಅಧಿಕಾರಿಗಳನ್ನು ಸಂಪರ್ಕಿಸಿ, ಹಂಪ್‌ಗ್ಳಿಂದ ಆಗುತ್ತಿರುವ ಸಮಸ್ಯೆ ವಿವರಿಸಿ, ಸರಿಪಡಿಸಲು ಆಗ್ರಹಿಸಿದ್ದಾರೆ.

ಭೇಟಿ ನೀಡಿ ಪರಿಶೀಲನೆ
ಹೊಸಮಠದಲ್ಲಿ ನಿರ್ಮಿಸಲಾಗಿರುವ ಸೇತುವೆಯ ಸಂಪರ್ಕ ರಸ್ತೆಯ ಇಕ್ಕೆಲೆಗಳಲ್ಲಿ ಮತ್ತು ಮಧ್ಯದಲ್ಲಿ ಬಣ್ಣದ ಪಟ್ಟಿ ಹಾಕಲಾಗಿದೆ. ಸೇತುವೆಯಲ್ಲಿ ಪಾದಚಾರಿ ಮಾರ್ಗದ ಗೋಡೆಗಳಿಗೂ ರಿಫ್ಲೆಕ್ಟರ್‌ ಅಳವಡಿಸಲಾಗಿದೆ.ಸಂಪರ್ಕ ರಸ್ತೆ ಸೇತುವೆಗೆ ಸೇರುವಲ್ಲಿ ಹಾಗೂ ಸಂಪರ್ಕ ರಸ್ತೆಯ ತಿರುವಿನಲ್ಲಿ ಎರಡೂ ಕಡೆ ಝೀಬ್ರಾ ಕ್ರಾಸ್‌ ರೀತಿಯಲ್ಲಿ ಹಳದಿ ಬಣ್ಣದ ಪಟ್ಟಿ ಹಾಕಿ ಅದಕ್ಕೂ ರಿಫ್ಲೆಕ್ಟರ್‌ ಅಳವಡಿಸಿದೆ. ಆದರೂ ವಾಹನಗಳ ವೇಗ ನಿಯಂತ್ರಿಸಲು ಸಾಧ್ಯವಾಗಿಲ್ಲ ಎನ್ನುವ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಉಬ್ಬು ನಿರ್ಮಿಸಿದ್ದೇವೆ. ರಸ್ತೆ ಉಬ್ಬಿನಿಂದಾಗಿ ಸಮಸ್ಯೆ ಎದುರಾಗಿದೆ ಎನ್ನುವ ದೂರುಗಳ ಹಿನ್ನೆಲೆಯಲ್ಲಿ ನಮ್ಮ ಎಂಜಿನಿಯರ್‌ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ.
-ಮಂಜುನಾಥ್‌, ಎಇಇ, ಕೆಆರ್‌ಡಿಸಿಎಲ್

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.