ನಾಗರಿಕರಿಂದ ಮೇಯರ್‌ಗೆ ದೂರು: ಅಧಿಕಾರಿಗಳಿಗೆ ತರಾಟೆ


Team Udayavani, Jun 26, 2019, 3:07 AM IST

nagarika

ಬೆಂಗಳೂರು: ಮೇಯರ್‌ ಗಂಗಾಂಬಿಕೆ ಮಂಗಳವಾರ ನಗರದ ವಿವಿಧೆಡೆ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸುವ ವೇಳೆ ಸಾರ್ವಜನಿಕರು ದೂರುಗಳ ಮಳೆಗೈದರು.

ಮೈಸೂರು ರಸ್ತೆ ಗಾಳಿ ಆಂಜನೇಯ ದೇವಸ್ಥಾನದ ಸಮೀಪದ ನಿವಾಸಿಗಳು ರಾಜಕಾಲುವೆ ಮತ್ತು ಒಳಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವುದರ ಬಗ್ಗೆ ಖುದ್ದು ಮೇಯರ್‌ ಅವರನ್ನು ಕರೆದುಕೊಂಡು ಹೋಗಿ ತೋರಿಸಿದ ಪ್ರಸಂಗವೂ ನಡೆಯಿತು. ಗಾಳಿ ಆಂಜನೇಯಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ಕಳಪೆ ಕಾಮಗಾರಿಯನ್ನು ಪರಿಶೀಲಿಸಿ ಮೇಯರ್‌ ಗುತ್ತಿಗೆದಾರರನ್ನು ಕೂಡಲೇ ಬದಲಾಯಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜುಲೈತಿಂಗಳಲ್ಲಿ ಕಾಮಗಾರಿ ಪೂರ್ಣ: ನಗರದ ಹೊಸಕೆರೆಹಳ್ಳಿಯ ಮುತ್ತುರಾಜ ಜಂಕ್ಷನ್‌ ಬಳಿ ನಿರ್ಮಾಣವಾಗುತ್ತಿರುವ ಕೇಳಸೇತುವೆ ಕಾಮಗಾರಿ ಮತ್ತು ಮೈಸೂರು ರಸ್ತೆ ಗಾಳಿ ಆಂಜನೇಯ ದೇವಸ್ಥಾನದ ಸಮೀಪ ನಿರ್ಮಾಣವಾಗುತ್ತಿರುವ ವೈಟ್‌ಟಾಪಿಂಗ್‌ ರಸ್ತೆಯ ಕಾಮಗಾರಿ ಪರಿಶೀಲನೆಯನ್ನು ಮೇಯರ್‌ ಮಂಗಳವಾರ ನಡೆಸಿದರು. ಮುತ್ತುರಾಜ್‌ ಜಂಕ್ಷನ್‌ ಬಳಿ ನಿರ್ಮಾಣವಾಗುತ್ತಿರುವ ಕೇಳಸೇತುವೆ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿ ಬಹುತೇಕ ಮುಗಿದಿದ್ದು, ಜುಲೈ ತಿಂಗಳ ಅಂತ್ಯದ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಮೈಸೂರು ರಸ್ತೆಯಲ್ಲಿ ವೈಟ್‌ ಟಾಪಿಂಗ್‌ ಕಾಮಗಾರಿ ಪರಿಶೀಲನೆ ವೇಳೆ ಸಾರ್ವಜನಿಕರು, ಇಲ್ಲಿ ವೈಟ್‌ಟಾಪಿಂಗ್‌ ಕಾಮಗಾರಿ ನಡೆಸುತ್ತಿರುವುದರಿಂದ ನಿತ್ಯವೂ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಪಾದಚಾರಿ ಮಾರ್ಗಗಳು ಸರ್ಮಪಕವಾಗಿಲ್ಲ, ಒಳಚರಂಡಿಯ ಸ್ಲಾಬ್‌ಗಳನ್ನು (ಕಾಂಕ್ರೀಟ್‌ ಹೊದಿಕೆ) ಸರ್ಮಪಕವಾಗಿ ಅಳವಡಿಸಿಲ್ಲ ಹಾಗೂ ಸ್ಯಾಟಲೈಟ್‌ ಬಸ್‌ ನಿಲ್ದಾಣದ ಬಳಿ ನಿರ್ಮಾಣವಾಗಬೇಕಿದ್ದ ಸ್ಕೈವಾಕ್‌ ಬಾಪೂಜಿನಗರ ರಸ್ತೆ ಮಾರ್ಗದಲ್ಲಿ ನಿರ್ಮಾಣ ಮಾಡಲು ಗುದ್ದಲಿ ಪೂಜೆ ಮಾಡಿದ್ದಾರೆ ಇದರಿಂದ ಇಲ್ಲಿನ ಜನರಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿದ ಮೇಯರ್‌, ಶೀಘ್ರವೇ ವೈಟ್‌ ಟಾಪಿಂಗ್‌ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸ್ಕೈವಾಕ್‌ ನಿರ್ಮಾಣ ಮಾಡುವ ವಿಚಾರವಾಗಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗವುದು. ಮನೆಗಳಿಗೆ ಕೊಳಚೆ ನೀರು ಬರದಿರುವಂತೆ ತಡೆಯಲು ಚರಂಡಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಲಾಗವುದು ಎಂದು ಭರವಸೆ ನೀಡಿದರು.

ಗುತ್ತಿಗೆದಾರರನ್ನು ಬದಲಿಸಿ: ಗಾಳಿ ಆಂಜನೇಯಸ್ವಾಮಿ ರಸ್ತೆಯ ಪಾದಚಾರಿ ಮಾರ್ಗದ ಚರಂಡಿ ಕಾಮಗಾರಿ ಬಗ್ಗೆ ಮೇಯರ್‌ಗೆ ದೂರಿತ್ತ ಸಾರ್ವಜನಿಕರು, ಚರಂಡಿ ಮೇಲೆ ಅಳವಡಿಸಿರುವ ಸ್ಲಾಬ್‌ಗಳು ಕಳೆಪೆಯಿಂದ ಕೂಡಿದೆ ಎಂದರು. ಅಲ್ಲಲ್ಲಿ ಸ್ಲಾಬ್‌ಗಳನ್ನು ಅಳವಡಿಸದೇ ಇರವುದನ್ನು ಕಂಡ ಮೇಯರ್‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಈಗಿರುವ ಗುತ್ತಿಗೆದಾರರನ್ನು ಬದಲಿಸಿ ಬೇರೆಯವರಿಗೆ ಗುತ್ತಿಗೆ ನೀಡಿ ಎಂದು ತಾಕೀತು ಮಾಡಿದರು.

ಕಲ್ಲು ಬಂಡೆಯಿಂದ ಕಾಮಗಾರಿ ವಿಳಂಬ: ನಗರದ ಹೊಸಕೆರೆಹಳ್ಳಿಯ ಮುತ್ತುರಾಜ ಜಂಕ್ಷನ್‌ ಬಳಿ ನಿರ್ಮಾಣವಾಗುತ್ತಿರುವ ಕೇಳಸೇತುವೆ ಕಾಮಗಾರಿ ವಿಳಂಬವಾಗುತ್ತಿದ್ದ ಹಿನ್ನೆಲೆ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಔಟರ್‌ರಿಂಗ್‌ ರಸ್ತೆಯಲ್ಲಾಗುತ್ತಿದ್ದ ಸಂಚಾರ ದಟ್ಟಣೆ ನಿವಾರಣೆ ಮಾಡುವ ಉದ್ದೇಶದಿಂದ ಮುತ್ತುರಾಜ ಜಂಕ್ಷನ್‌ ಬಳಿ 18.72 ಕೋಟಿ ರೂ. ವೆಚ್ಚದಲ್ಲಿ ಕೆಳ ಸೇತುವೆ ನಿರ್ಮಾಣ ಮಾಡಲು 2015 ಸೆಪ್ಟೆಂಬರ್‌ನಲ್ಲಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಆದರೆ, ಆ ಜಾಗದಲ್ಲಿ ಕಲ್ಲುಬಂಡೆಯಿದ್ದ ಪರಿಣಾಮ ತೆರವು ಮಾಡುವುದು ತಡವಾಯಿತು ಜುಲೈ ತಿಂಗಳ ಅಂತ್ಯದೊಳಗಾಗಿ ಕಾಮಗಾರಿ ಪೂರ್ಣಗೊಳ್ಳಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.