ಕಾಮಗಾರಿ ಪೂರ್ಣಗೊಳಿಸದೆ ಬಾಕಿ ಹಣ ಬಿಡುಗಡೆಯಿಲ್ಲ
Team Udayavani, Jun 26, 2019, 5:04 AM IST
ಗಂಗೊಳ್ಳಿ: ಕೋಡಿ ಮತ್ತು ಗಂಗೊಳ್ಳಿಯ ಅಳಿವೆಯಲ್ಲಿ ಕಡಲ್ಕೊರೆತ ತಡೆಗಾಗಿ ಬ್ರೇಕ್ ವಾಟರ್ ನಿರ್ಮಾಣ ಕಾಮಗಾರಿಗೆ 102 ಕೋ.ರೂ. ಮಂಜೂರಾಗಿದೆ. ಆದರೆ ಇದರಲ್ಲಿ ಹೂಳೆತ್ತಿಲ್ಲ, 5 ಕೋ.ರೂ. ಪರಿಸರ ಅಭಿವೃದ್ಧಿಗೆ ವಿನಿಯೋಗಿಸಿಲ್ಲ ಮತ್ತು ಸಂಪರ್ಕ ರಸ್ತೆ ಅಭಿವೃದ್ಧಿಪಡಿಸದೆ ಬಾಕಿ ಉಳಿದ ಹಣ ಬಿಡುಗಡೆಯನ್ನು ತಡೆ ಹಿಡಿಯಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಅವರು ಮಂಗಳವಾರ ಗಂಗೊಳ್ಳಿ ಮೀನುಗಾರಿಕೆ ಬಂದರಿಗೆ ಭೇಟಿ ನೀಡಿ ಕುಸಿದ ಜೆಟ್ಟಿ, ಬ್ರೇಕ್ ವಾಟರ್ ಕಾಮಗಾರಿ ವೀಕ್ಷಿಸಿದರು. ಅನುದಾನ ವನ್ನು ಸಮರ್ಪಕವಾಗಿ ವಿನಿಯೋಗಿಸಿಲ್ಲ ಎಂಬ ಮೀನುಗಾರರ ಅಹವಾಲು ಸ್ವೀಕರಿಸಿ ಮಾತನಾಡಿದರು.
ಕೋಡಿಯಲ್ಲಿ 900 ಮೀ. ಮತ್ತು ಗಂಗೊಳ್ಳಿ ಯಲ್ಲಿ 700 ಮೀ. ಬ್ರೇಕ್ ವಾಟರ್ ಕಾಮಗಾರಿಗೆ 102 ಕೋ.ರೂ. ಮಂಜೂರಾಗಿದ್ದು, 78 ಕೋ.ರೂ. ಬಿಡುಗಡೆಯಾಗಿದೆ. 24 ಕೋ.ರೂ. ಕಾಮಗಾರಿ ವಹಿಸಿರುವ ಗುತ್ತಿಗೆದಾರರಿಗೆ ಸಿಗಲು ಬಾಕಿಯಿದೆ. ಇದನ್ನು ಕಾಮಗಾರಿ ಪೂರ್ಣ ಗೊಂಡ ಬಳಿಕವೇ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳಿಗೆ ತಿಳಿಸ ಲಾಗುವುದು ಎಂದವರು ಸ್ಪಷ್ಟಪಡಿಸಿದರು.
ಜೆಟ್ಟಿ ಸ್ಲ್ಯಾಬ್ ಕುಸಿತ: ಗರಂ
ಇಲ್ಲಿನ ಬಂದರಿನ ಸ್ಲ್ಯಾಬ್ ಹಲವು ಕಡೆ ಕುಸಿದಿರುವ ಬಗ್ಗೆ ಅಧಿಕಾರಿಗಳು, ಎಂಜಿನಿ ಯರ್ಗಳ ಕಾರ್ಯವೈಖರಿ ಬಗ್ಗೆ ಸಂಸದರುಗರಂ ಆದರು. ಶಾಸಕರ ಮುತುವರ್ಜಿಯಿಂದ ದುರಸ್ತಿಗೆ 1.98 ಕೋ.ರೂ. ಮಂಜೂರಾಗಿದ್ದು, ಕೂಡಲೇ ಟೆಂಡರ್ ಕರೆದು, ಮೀನುಗಾರರಿಗೆ ತೊಂದರೆಯಾಗದಂತೆ ತ್ವರಿತಗತಿಯಲ್ಲಿ ಕಾಮ ಗಾರಿ ನಿರ್ವಹಿಸಬೇಕು. ಈಬಗ್ಗೆ ಸಂಬಂಧಪಟ್ಟ ಸಚಿವರು ಹಾಗೂ ಉನ್ನತಾಧಿಕಾರಿಗಳ ಬಳಿಯೂ ಮಾತನಾಡಲಾಗು ವುದು ಎಂದರು.
ವಿಸ್ತರಣೆಗೆ ಮನವಿ
ಕೋಡಿ ಮತ್ತು ಗಂಗೊಳ್ಳಿ ಅಳಿವೆ ಭಾಗದಲ್ಲಿ ಇನ್ನೂ 200 ಮೀ. ಬ್ರೇಕ್ವಾಟರ್ ವಿಸ್ತರಿಸಲು ಮೀನುಗಾರರು ಮನವಿ ಮಾಡಿದರು. ಚರ್ಚಿಸಿ, ತೀರ್ಮಾನಿಸಲಾಗುವುದು ಎಂದು ಸಂಸದರು ಭರವಸೆ ನೀಡಿದರು.
ಶಾಸಕ ಸುಕುಮಾರ್ ಶೆಟ್ಟಿ, ಮೀನು ಗಾರಿಕೆ ಇಲಾಖೆಯ ಅಧಿಕಾರಿಗಳು, ಎಂಜಿನಿಯರ್ಗಳು, ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪ್ರ. ಕಾರ್ಯದರ್ಶಿಗಳಾದ ಬಾಲಚಂದ್ರ ಭಟ್, ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರು, ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ